ಪದ್ಮಾ ಸುಬ್ರಹ್ಮಣ್ಯಂ, ಕೃಷ್ಣಯಾಜಿಗೆ ಕೆರೆಮನೆ ಪ್ರಶಸ್ತಿ
Team Udayavani, Jan 5, 2020, 3:03 AM IST
ಹೊನ್ನಾವರ: ಯಕ್ಷಗಾನದ ಮೇರು ನಟರಾಗಿದ್ದ ಕೆರೆಮನೆ ಶಿವರಾಮ ಹೆಗಡೆಯವರ ಹೆಸರಿನಲ್ಲಿ ಕೊಡಮಾಡುವ ಪ್ರಶಸ್ತಿಗೆ ಲೋಕಪ್ರಸಿದ್ಧ ಭರತನಾಟ್ಯ ಕಲಾವಿದೆ ಪದ್ಮಶ್ರೀ-ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಪದ್ಮಾ ಸುಬ್ರಹ್ಮಣ್ಯಂ, ಪ್ರಸಿದ್ಧ ಸ್ತ್ರೀ ವೇಷಧಾರಿ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಗೆ ಚಂಡೆ, ಮದ್ದಳೆ ವಾದಕ ಕೃಷ್ಣ ಯಾಜಿ ಇಡಗುಂಜಿ ಆಯ್ಕೆಯಾಗಿದ್ದಾರೆ.
ಶಿವರಾಮ ಹೆಗಡೆ ಪ್ರಶಸ್ತಿ 25ಸಾವಿರ ರೂ. ನಗದು, ಶಾಲು, ಸ್ಮರಣಿಕೆ, ಫಲಕ; ಗಜಾನನ ಹೆಗಡೆ ಪ್ರಶಸ್ತಿ 15 ಸಾವಿರ ರೂ. ನಗದು, ಶಾಲು, ಸ್ಮರಣಿಕೆ ಒಳಗೊಂಡಿದೆ. ಫೆ.20 ರಿಂದ 24ರವರೆಗೆ ಕೆರೆಮನೆ ಯಕ್ಷಾಂಗಣದ ಶಂಭು ಹೆಗಡೆ ಬಯಲು ರಂಗಮಂದಿರ ದಲ್ಲಿ ನಡೆಯುವ ರಾಷ್ಟ್ರೀಯ ನಾಟ್ಯೋತ್ಸವ ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ಮತ್ತು ಕೆರೆಮನೆ ಸಂಸ್ಥೆಗಳ ನಿರ್ದೇಶಕ ಶಿವಾನಂದ ಹೆಗಡೆ ಕೆರೆಮನೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ