ಪಡುಬಿದ್ರಿ: ಪತ್ನಿಯಿಂದ ಸಾಲ ಮಾಡಿಸಿ ವಿಷವುಣಿಸಿದ ಪತಿ
ಆಕೆಯನ್ನು ಕೊಂದರೆ ಸಾಲ ತೀರುತ್ತದೆಂದು ಪ್ಲ್ಯಾನ್!
Team Udayavani, Sep 7, 2022, 8:42 PM IST
ಪಡುಬಿದ್ರಿ: ಹೆಂಡತಿ ಹೆಸರಲ್ಲಿ ಮಾಡಿದ ಸಾಲವನ್ನು ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕ ವಾಡಿ ಕೊಲೆ ಮಾಡಿರುವುದಾಗಿ ಪತಿ ಹಾಗೂ ಆತನ ಮನೆಯವರ ವಿರುದ್ಧ ಮೃತ ಮಹಿಳೆಯ ಅಕ್ಕ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಿದ್ಯಾ ( 29 ) ಮೃತಪಟ್ಟ ಮಹಿಳೆ. ವಿದ್ಯಾ ಅವರು ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಯತಿನ್ ರಾಜ್ ಎಂಬಾತನನ್ನು ಪ್ರೀತಿಸಿ 2017 ರ ಫೆ .28 ರಂದು ವಿವಾಹವಾಗಿದ್ದರು. ಗಂಡನ ಮನೆಯಲ್ಲಿ ಯತಿನ್ ರಾಜ್, ಮಾವ ರಾಘು, ಅತ್ತೆ ಗೀತಾ ಮತ್ತು ಮೈದುನ ಯಕ್ಷಿತ್ ಎಂಬವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಹಾಗೂ ಯತಿನ್ ರಾಜ್ ನು ಸರಿಯಾಗಿ ಕೆಲಸ ಮಾಡದೇ ವಿದ್ಯಾಳಿಂದ ಹಲವು ಬ್ಯಾಂಕ್, ಸೊಸೈಟಿ ಸಂಘ, ಸಂಸ್ಥೆಗಳಿಂದ ಸಾಲ ತೆಗೆಸಿ ಅದನ್ನು ಖರ್ಚು ಮಾಡುತ್ತಿದ್ದನು. ಮಾತ್ರವಲ್ಲದೆ ವಿದ್ಯಾ ಅವರ ತಂದೆ ಕೊಟ್ಟ ಹಣವನ್ನೂ ಖರ್ಚು ಮಾಡಿ, ಚಿನ್ನವನ್ನು ಮಾರಾಟ ಮಾಡಿ ಖರ್ಚು ಮಾಡಿದ್ದಾನೆ. ಇದರ ಜೊತೆಗೆ ಇನ್ನೂ ಹೆಚ್ಚಿನ ಸಾಲ ತೆಗೆದುಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಾ ದೈಹಿಕ ಹಿಂಸೆ ನೀಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ:ಶರದ್ ಪವಾರ್ ಭೇಟಿ ಮಾಡಿದ ನಿತೀಶ್: ಪ್ರಧಾನಿ ಅಭ್ಯರ್ಥಿ ಕುರಿತು ಹೇಳಿದ್ದೇನು?
ಪತಿಯ ನಾಟಕ
ಗಂಡನ ಮನೆಯವರ ಕಿರುಕುಳವು ಹೆಚ್ಚಾಗಿ ಅದನ್ನು ತಡೆಯಲಾರದೆ ಯತಿನ್ರಾಜ್ ಜತೆ ಮನೆಯಿಂದ ಹೊರಬಂದು ಕಳೆದೆರಡು ತಿಂಗಳ ಹಿಂದೆ ಉಚ್ಚಿಲದಲ್ಲಿ ಹಾಗೂ ಕಳೆದೊಂದು ತಿಂಗಳುಗಳಿಂದ ಕಾಪು ಲೈಟ್ಹೌಸ್ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲೂ ಆರೋಪಿ ಗಂಡನ ಕಿರುಕುಳ ತಪ್ಪಿರಲಿಲ್ಲ. ಇನ್ನು ಮುಂದಕ್ಕೆ ಸಾಲ ಮಾಡಿಕೊಡುವುದಿಲ್ಲ ಎಂದು ವಿದ್ಯಾ ಹೇಳಿದ್ದರಿಂದ ವಿದ್ಯಾರನ್ನು ಕೊಂದರೆ ಅವರಿಂದ ಮಾಡಿಸಿದ ಸಾಲ ತೀರುತ್ತದೆ ಎಂಬ ಕಾರಣಕ್ಕೆ ಯತಿನನು ಯೋಜನೆ ರೂಪಿಸಿ ಇಬ್ಬರೂ ವಿಷ ಸೇವಿಸಿ ಸಾಯೋಣವೆಂದು ಪತ್ನಿಯನ್ನು ನಂಬಿಸಿ, ಅವಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಷ ಕುಡಿಸಿ, ಬಳಿಕ ತನ್ನ ಮೇಲೆ ಅನುಮಾನ ಬರಬಾರದೆಂದು ತಾನೂ ಸ್ವಲ್ಪ ಪ್ರಮಾಣದಲ್ಲಿ ವಿಷ ಸೇವಿಸಿ ನಾಟಕ ಮಾಡುತ್ತಿರುವುದಾಗಿ ಪಡುಬಿದ್ರಿ ಪೊಲೀಸರಿಗೆ ಈ ಕುರಿತಾಗಿ ದೂರನ್ನಿತ್ತಿರುವ ವಿದ್ಯಾಳ ಅಕ್ಕ ಲೀಲಾವತಿ ತಿಳಿಸಿದ್ದಾರೆ.
ಆರೋಪಿ ಯತಿನ್ರಾಜ್ ಉಡುಪಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ