ಪರಿಷತ್ ಗಲಾಟೆ ಪ್ರಕರಣ: ಮಧ್ಯಂತರ ವರದಿ ಸಲ್ಲಿಸಿದ ಸದನ ಸಮಿತಿ
Team Udayavani, Jan 22, 2021, 4:02 PM IST
ಬೆಂಗಳೂರು: ವಿಧಾನ ಪರಿಷತ್ ವಿಶೇಷ ಅಧಿವೇಶನದ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಇಂದು ಸಭಾಪತಿಗೆ ಸಲ್ಲಿಸಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿ ಅಧ್ಯಕ್ಷ ಮರಿತಿಬ್ಬೆಗೌಡ, ಘಟನೆಗೆ ಸಂಬಂಧಿಸಿದಂತೆ ಐದು ಸಭೆಗಳನ್ನು ಮಾಡಲಾಗಿದೆ. ಪರಿಷತ್ ಕಾರ್ಯದರ್ಶಿ, ಪಿ.ಆರ್. ರಮೇಶ್, ಮಾರ್ಷಲ್ ಗೆ ನೊಟಿಸ್ ನೀಡಿ ಅವರ ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದೆ ಎಂದರು.
ಉಪ ಸಭಾಪತಿಯಾಗಿದ್ದ ಧರ್ಮೇಗೌಡರ ಡೆತ್ ನೋಟ್ ಕೂಡ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಇಂತಹ ಪ್ರಕರಣದಲ್ಲಿ ಬೇರೆ ರಾಜ್ಯಗಳು ಯಾವ ರೀತಿಯ ತೀರ್ಮಾನ ತೆಗೆದುಕೊಂಡಿದ್ದವು ಎನ್ನುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.
ಇದನ್ನೂ ಓದಿ:‘ಯುಪಿಎಸ್ ಸಿ ಹೆಚ್ಚುವರಿ ಪರೀಕ್ಷೆಗೆ ಅವಕಾಶವಿಲ್ಲ’ ಸುಪ್ರೀಂ ಕೋರ್ಟಿಗೆ ಕೇಂದ್ರ ಹೇಳಿಕೆ
ಘಟನೆಯ ಬಗ್ಗೆ ಸಭಾಪತಿಗಳಿಗೆ ಪತ್ರ ಬರೆದಿರುವ ಹಿರಿಯರು, ಪತ್ರಕರ್ತರ ಹೇಳಿಕೆಗಳನ್ನು ಪಡೆಯಲು ಸಮಿತಿ ಬಯಸಿದೆ. ಇಷ್ಟೆಲ್ಲ ಮಾಹಿತಿ ಪಡೆಯಲು ಸಮಿತಿಗೆ ಕಾಲಾವಕಾಶ ಬೇಕು. ಎಲ್ಲರ ಅಭಿಪ್ರಾಯ ಬಯಸುವುದು ಸಮಂಜಸವಾಗಿದ್ದು, ಇಪ್ಪತ್ತು ದಿನದಲ್ಲಿ ಪೂರ್ಣ ಮಾಹಿತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಈಗ ಮಧ್ಯಂತರ ವರದಿ ಸಲ್ಲಿಕೆ ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ:ಎಲ್ಲಾ ಬಗೆಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ನಮಗೆ ಸಾಕ್ಷ್ಯ ಆಧಾರಗಳು ಅಗತ್ಯ ಎಂದು ಸಮಿತಿ ಬಯಸಿದೆ. ವಾರ್ತಾ ಇಲಾಖೆ, ವೆಬ್ ಕಾಸ್ಟ್, ಹಾಗೂ ಟಿವಿಗಳಲ್ಲಿ ಬಂದಿರುವ ಮಾಹಿತಿ ಆಧರಿಸಿ ಮಧ್ಯಂತರ ವರದಿ ನೀಡಲಾಗುತ್ತಿದೆ. ಇದೀಗ 84 ಪುಟಗಳ ಮಧ್ಯಂತರ ವರದಿ ನೀಡಲಾಗುತ್ತಿದೆ ಎಂದು ಮರಿತಿಬ್ಬೆಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?