ಪಂಚಮಸಾಲಿ ಸಮುದಾಯವನ್ನು ಎತ್ತಿಕಟ್ಟುವ ಹುನ್ನಾರ: ವಿಜಯೇಂದ್ರ
Team Udayavani, Sep 24, 2022, 9:21 PM IST
ಬೆಂಗಳೂರು: ಪಂಚಮಸಾಲಿ ಸಮುದಾಯದ ಸ್ವಾಮೀಜಿ ಮತ್ತು ಮುಖಂಡರನ್ನು ಎತ್ತಿಕಟ್ಟುವ ಹುನ್ನಾರ ಸದಾ ನಡೆಯುತ್ತಲೇ ಬಂದಿದೆ ಎಂದು ಬಿ.ವೈ. ವಿಜಯೇಂದ್ರ ದೂರಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರೋಧವಿದೆ ಎಂದು ಕೆಲವು ರಾಜಕೀಯ ವಿರೋಧಿಗಳು ಆರೋಪಿಸುತ್ತಿದ್ದಾರೆ.
ಇದರಲ್ಲಿ ಯಾವುದೇ ಹುರುಳಿಲ್ಲ. ಈಗಾಗಲೇ ಯಡಿಯೂರಪ್ಪ ಕೂಡ ಈ ವಿಚಾರವನ್ನು ಸದನದಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದರು.