ಹುಚ್ಚುನಾಯಿ ಭೀತಿ: ಮನೆಮುಂಭಾಗದ ತಂತಿಗೆ ವಿದ್ಯುತ್ ಹಾಯಿಸಿ, ತಾನೇ ತುಳಿದು ಸಾವನ್ನಪ್ಪಿದ !
Team Udayavani, Aug 30, 2020, 7:22 PM IST
ಸಾಂಧರ್ಭಿಕ ಚಿತ್ರ ಬಳಸಲಾಗಿದೆ.
ಶಿವಮೊಗ್ಗ: ಹುಚ್ಚು ನಾಯಿ ಭೀತಿಯಿಂದ ಮನೆ ಮುಂಭಾಗದ ಗೇಟ್ಗೆ ಅಡ್ಡಲಾಗಿ ತಂತಿಗೆ ವಿದ್ಯುತ್ ಹರಿಬಿಟ್ಟ ವ್ಯಕ್ತಿ ಅದೇ ತಂತಿಯನ್ನು ತುಳಿದು ಮೃತಪಟ್ಟಿರುವ ಘಟನೆ ಸೊರಬ ಪಟ್ಟಣದ ಕಾನಕೇರಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ನಿಂಗಪ್ಪ ಪುಟ್ಟಪ್ಪ (58) ಮೃತ ದುರ್ಧೈವಿ. ಕೆಲ ದಿನಗಳಿಂದ ಹುಚ್ಚು ನಾಯಿಯೊಂದು ಮನೆಯ ಅಂಗಳ ಮಾತ್ರವಲ್ಲದೇ ಮನೆಯನ್ನು ಪ್ರವೇಶ ಮಾಡಿತ್ತು. ಇದರಿಂದ ಕುಟುಂಬಸ್ಥರು ಭಯಭೀತರಾಗಿದ್ದರು. ಮನೆಯ ಅಂಗಳದ ಗೇಟ್ನ ಮುಂಭಾಗ ತಂತಿ ಕಟ್ಟಿ ವಿದ್ಯುತ್ ಹಾಯಿಸಿದ್ದರು. ರಾತ್ರಿ ಅದೇ ತಂತಿ ತುಳಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ರಾಕೇಶ್ ಕುಮಾರ್ ನೀಡಿದ ದೂರಿನನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರ್ಖತನದ ಪರಮಾವಧಿ:
ಗ್ರಾಮೀಣ ಪ್ರದೇಶದಲ್ಲಿ ಕೆಲ ರೈತರು ತಮ್ಮ ಬೆಳೆಗಳ ರಕ್ಷಣೆಗೆ ಯುಪಿಎಸ್ ವಿದ್ಯುತ್ ಹಾಯಿಸುವುದು ಸಾಮಾನ್ಯ. ಕೆಲವರು ನೇರವಾಗಿ ವಿದ್ಯುತ್ ಹಾಯಿಸಿ, ಪ್ರಾಣಿ ಬೇಟೆ ಮಾಡುತ್ತಾರೆ ಎನ್ನಲಾಗುತ್ತದೆ. ಆದರೆ, ಪಟ್ಟಣ ಪ್ರದೇಶದಲ್ಲಿಯೇ ಮನೆಯ ಮುಂಭಾಗದ ಗೇಟ್ಗೆ ವಿದ್ಯುತ್ ಹಾಯಿಸಿರುವ ಪ್ರಕರಣ ಇದೀಗ ಜನತೆಯಲ್ಲಿ ಆತಂಕ ಮೂಡಿಸಿದೆ.
ನಿತ್ಯ ಬೆಳಗ್ಗೆ ಪತ್ರಿಕೆ ಹಂಚುವ, ಹಾಲು ವಿತರಿಸುವವರು ಮನೆಗಳಿಗೆ ತೆರಳಲು ಸಹ ಭಯಭೀತರನ್ನಾಗಿಸಿದ್ದು, ಇಂತಹ ಘಟನೆಗಳು ಮೂರ್ಖತನದ ಪರಮಾವಧಿ ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ