ಓಲೇಕಾರಗೆ ಆನೆ ಮೇಲೆ ಮೆರವಣಿಗೆ
Team Udayavani, Oct 19, 2019, 3:03 AM IST
ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದ ಕೆರೆ ತುಂಬಿಸಲು ಶ್ರಮಿಸಿದ ಶಾಸಕ ನೆಹರು ಓಲೇಕಾರ ಅವರನ್ನು ಗ್ರಾಮ ಸ್ಥರು ಶುಕ್ರವಾರ ಆನೆ ಮೇಲೆ ಕೂರಿಸಿ ಮೆರವಣಿಗೆ ಮಾಡಿದ್ದಾರೆ. ಹಲವು ವರ್ಷಗಳಿಂದ ಕನವಳ್ಳಿ ಗ್ರಾಮದ ಕೆರೆ ತುಂಬಿಸುವ ಯೋಜನೆ ನನೆಗುದಿಗೆ ಬಿದ್ದಿತ್ತು. ಶಾಸಕರಾಗಿ ಆಯ್ಕೆಯಾದ ನೆಹರು ಓಲೇಕಾರ, ಮುತುವರ್ಜಿ ವಹಿಸಿ ನೀರು ತುಂಬಿಸಲು ಶ್ರಮಿಸಿದ್ದರು.
ಶಾಸಕರ ಈ ಕಾರ್ಯ ಮೆಚ್ಚಿ ಗ್ರಾಮಸ್ಥರು ಆನೆ ತರಿಸಿ, ಅದರ ಮೇಲೆ ಶಾಸಕರನ್ನು ಕೂಡಿಸಿ, ವಿವಿಧ ವಾದ್ಯ ತಂಡಗಳೊಂದಿಗೆ ಗ್ರಾಮದಲ್ಲಿ ಭವ್ಯ ಮೆರವಣಿಗೆ ನಡೆಸಿ, ಆರತಿ ಎತ್ತಿ ಕೃತಜ್ಞತೆ ಸಲ್ಲಿಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಶಾಸಕ ನೆಹರು ಓಲೇಕಾರ, “ನೀವೇ ಕೊಟ್ಟ ಅಧಿ ಕಾರವನ್ನು ಉಪಯೋಗಿಸಿಕೊಂಡು ನಿಮ್ಮ ಸೇವೆ ಮಾಡಿದ್ದೇನೆ. ಕನವಳ್ಳಿ ಗ್ರಾಮದ ಬಹು ವರ್ಷದ ಬೇಡಿಕೆಯನ್ನು ಕೇವಲ ಮೂರು ತಿಂಗಳಲ್ಲಿ ಈಡೇರಿಸಿದ್ದಕ್ಕಾಗಿ ಗ್ರಾಮಸ್ಥರು ಆನೆ ಮೆರವಣಿಗೆ ಮಾಡಿರುವುದನ್ನು ಕಂಡು ಮೂಕವಿಸ್ಮಿತನಾಗಿದ್ದೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ