ಮಾಧ್ಯಮದವರ ವಿರುದ್ಧ ಪರಮೇಶ್ವರ್ ಸಿಡಿಮಿಡಿ
Team Udayavani, Oct 3, 2017, 11:28 AM IST
ಬೆಂಗಳೂರು: “ಮುಂದಿನ ಮುಖ್ಯಮಂತ್ರಿ ಯಾರು’, “ಬರುವ ವರ್ಷ ದಸರಾ ಯಾರು ಉದ್ಘಾಟಿಸುತ್ತಾರೆ’ ಎಂಬ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷ
ಡಾ. ಜಿ. ಪರಮೇಶ್ವರ್ ಸಿಟ್ಟಾದ ಪ್ರಸಂಗ ಸೋಮವಾರ ನಡೆಯಿತು.
ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮ ದಿನಾಚರಣೆ ಕಾರ್ಯಕ್ರಮದ ಬಳಿಕ, “ಮುಂದಿನ ವರ್ಷ ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರಲ್ಲ’ ಎಂಬ ಮಾಧ್ಯಮದವರ ಪ್ರಶ್ನೆಗೆ ಪರಮೇಶ್ವರ್ ಗರಂ ಆದರು. “ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಆದರೆ, ಯಾರಾದರೊಬ್ಬರ
ಮುಂದಾಳತ್ವ ಬೇಕಲ್ಲ? ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೇ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಮುಂದಿನ ಚುನಾವಣೆಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹೋಗುತ್ತೇವೆ. ಮುಖ್ಯಮಂತ್ರಿ ಯಾರು ಅನ್ನುವುದನ್ನು ಹೈ ಕಮಾಂಡ್ ತೀರ್ಮಾನಿಸುತ್ತದೆ. ಸಿದ್ದರಾಮಯ್ಯನವರೇ ಸಿಎಂ ಆಗಬೇಕು ಎಂದು ಹೈಕಮಾಂಡ್ ಹೇಳಿದರೆ, ಎಲ್ಲರೂ ಒಪ್ಪಿಕೊಳ್ಳುತ್ತೇವೆ. ಯಾವ ಗೊಂದಲಗಳೂ ಇಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕೃತವಾಗಿ ಈ ಮಾತು ಹೇಳುತ್ತಿದ್ದೇನೆ. ಯಾರು ಏನೇ ಹೇಳಿದರೂ ಅದಕ್ಕೆಲ್ಲ ಕಿಮ್ಮತ್ತು ಕೊಡಬೇಡಿ’ ಎಂದು ಪರಮೇಶ್ವರ್ ಹೇಳಿದರು.
ಇದೇ ವೇಳೆ ಮುಂದಿನ ಬಾರಿ ನಾನೇ ಸಿಎಂ ಆಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರಲ್ಲ ಎಂದು ಕೇಳಿದ್ದಕ್ಕೆ “ಅವರು ಹೇಳಿದ್ದ ಕ್ಕೆಲ್ಲ ನಾನು ಯಾಕೆ ಪ್ರತಿಕ್ರಿಯೆ ಕೊಡಬೇಕು’, ಅದನ್ನೆಲ್ಲಾ ನನ್ನನ್ನು ಯಾಕೆ ಕೇಳ್ತೀರಾ. ಅವರು ಹೇಳಿದರು ಎಂದು ನಮ್ಮ ಬಳಿ, ನಾವು ಹೇಳಿದೇವು ಎಂದು ಅವರ ಬಳಿ ಹೋಗ್ತಿರಾ. ಅವರೊಂದು ಹೇಳ್ಳೋದು, ನಾನೊಂದು ಹೇಳ್ಳೋದು ಇದೇನು ಹುಡುಗಾಟನಾ?. ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಕೇಳಿ, ಅದಕ್ಕೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಪರಮೇಶ್ವರ್ ಮತ್ತೂಮ್ಮೆ ಗರಂ ಆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ