ಕಾಮಗಾರಿ ಪ್ರಯುಕ್ತ ರೈಲು ಸಂಚಾರ ಭಾಗಶಃ ರದ್ದು
Team Udayavani, Nov 5, 2019, 3:00 AM IST
ಹುಬ್ಬಳ್ಳಿ: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ವ್ಯಾಪ್ತಿಯ ಬಾಗಲಕೋಟೆ-ವಿಜಯಪುರ ನಿಲ್ದಾಣಗಳ ಮಧ್ಯದ ಮುಳವಾಡ-ಜುಮ್ನಾಳ ನಿಲ್ದಾಣಗಳ ಮಧ್ಯೆ ಡಬಲ್ ಲೈನ್ ಕಾಮಗಾರಿ ಪ್ರಯುಕ್ತ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ನ.10 ಹಾಗೂ 11ರಂದು ಮೈಸೂರು- ಬಾಗಲಕೋಟೆ ಬಸವಾ ಎಕ್ಸ್ಪ್ರೆಸ್ (17307) ರೈಲು ಸಂಚಾರವನ್ನು ವಿಜಯಪುರದಿಂದ ಬಾಗಲಕೋಟೆವರೆಗೆ ಭಾಗಶಃ ರದ್ದುಪಡಿಸಲಾಗಿದೆ. ಬಾಗಲಕೋಟೆ-ಮೈಸೂರು (17308) ರೈಲು ಸಂಚಾರವನ್ನು ನ. 11 ಹಾಗೂ 12ರಂದು ಬಾಗಲಕೋಟೆ ಹಾಗೂ ವಿಜಯಪುರ ಮಧ್ಯೆ ಭಾಗಶಃ ರದ್ದುಗೊಳಿಸಲಾಗಿದೆ.
ನ.9, 10, 11 ಹಾಗೂ 12ರಂದು ಹುಬ್ಬಳ್ಳಿ-ವಿಜಯಪುರ (06919/06920) ಪ್ಯಾಸೆಂಜರ್ ರೈಲು ಮಾರ್ಗ ಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆಗೊಳ್ಳುವುದು. ನ. 8ರಂದು ಬಾರ್ಮರ್-ಯಶವಂ ತಪುರ ಎಕ್ಸ್ಪ್ರೆಸ್ (14806) ರೈಲು ಮಾರ್ಗಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆಯಾಗುವುದು. ನ. 10ರಂದು ಬಿಕಾನೇರ-ಯಶವಂತಪುರ ಎಕ್ಸ್ಪ್ರೆಸ್ (16588) ರೈಲು ಮಾರ್ಗಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆ ಯಾಗುವುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ