‘ಇನ್ನು ಮುಂದೆ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಭಾಗವಹಿಸಲ್ಲ’


Team Udayavani, Jan 14, 2019, 6:05 AM IST

mb-patil.png

ಬಾಗಲಕೋಟೆ: ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಇನ್ನು ಹೋರಾಟ ಮಾಡುವ ಅಗತ್ಯವಿಲ್ಲ. ಇನ್ನೇನಿದ್ದರೂ ಕಾನೂನು ಸಮರ ಮಾತ್ರ. ಈ ವಿಷಯದಲ್ಲಿ ಯಾವುದೇ ಹೋರಾಟ ನಡೆಸಿದರೂ ನಾನು ಒಬ್ಬ ಗೃಹ ಸಚಿವನಾಗಿ ಯಾವ ಹೋರಾಟದಲ್ಲೂ ಭಾಗವಹಿಸುವುದಿಲ್ಲ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದರು.

ಜಿಲ್ಲೆಯ ಕೂಡಲಸಂಗಮದಲ್ಲಿ ನಡೆದ ಶರಣ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಲಿಂಗಾಯತ ಒಂದು ಸ್ವತಂತ್ರ ಧರ್ಮ. ಇದನ್ನು ನಾನಾಗಲಿ ಅಥವಾ ಮತ್ಯಾರೋ ಹುಟ್ಟು ಹಾಕಿದ್ದಲ್ಲ. 12ನೇ ಶತಮಾನದಲ್ಲೇ ಬಸವಣ್ಣನವರು ಹುಟ್ಟು ಹಾಕಿದ್ದಾರೆ. ಲಿಂಗಾಯತ ಒಂದು ಸ್ವತಂತ್ರ ಧರ್ಮ ಎಂಬುದಕ್ಕೆ ನನ್ನ ಬಳಿ ಇರುವಷ್ಟು ದಾಖಲೆ ಇನ್ಯಾರ ಬಳಿಯೂ ಇರಲು ಸಾಧ್ಯವಿಲ್ಲ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಅಣಿಯಾಗುವ ಮುಂಚೆ ಸಾಕಷ್ಟು ಅಧ್ಯಯನ ಮಾಡಿದ್ದೇನೆ. ಎಲ್ಲವನ್ನೂ ಖಾತ್ರಿ ಮಾಡಿಕೊಂಡೇ ಹೋರಾಟಕ್ಕೆ ಮುಂದಾಗಿದ್ದೆ. ಸುಮ್ಮನೆ ಹೋರಾಟ ನಡೆಸಿಲ್ಲ. 12ನೇ ಶತಮಾನದಲ್ಲಿ ಲಿಂಗಾಯತ ಧರ್ಮ ಹುಟ್ಟಿಕೊಂಡಿದೆ. ಆದರೂ, ನನ್ನ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ನಡೆಸಲಾಯಿತು. ಲಿಂಗಾಯತ ಧರ್ಮವನ್ನು ನಾವು ಹುಟ್ಟು ಹಾಕಿದ್ದೇವಾ? ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ಸಿಗಬೇಕು ಎಂಬ ನಮ್ಮ ಆಶಯಕ್ಕೆ ರಾಜ್ಯದಲ್ಲಿ ಯಶಸ್ಸು ಸಿಕ್ಕಿದೆ ಎಂದರು.

ಲಿಂಗಾಯತ ಪ್ರತ್ಯೇಕ ಧರ್ಮ ನನ್ನ ಅಸ್ಮಿತೆ. ಈಗ ಗೃಹ ಸಚಿವನಾಗಿದ್ದರಿಂದ ನಾನು ಬಹಳಷ್ಟು ಸೂಕ್ಷ್ಮತೆಯಿಂದ ಮಾತನಾಡಬೇಕಾಗುತ್ತದೆ. ಯಾವುದೇ ಹೋರಾಟದಲ್ಲಿ ಭಾಗವಹಿಸಲು ಶಿಷ್ಟಾಚಾರ ಅಡ್ಡಿ ಬರುತ್ತದೆ. ಹೀಗಾಗಿ, ನಾನು ಹೋರಾಟ ಮಾಡುವುದಿಲ್ಲ. ಹೋರಾಟ ಮಾಡುವವರು ಮಾಡಲಿ. ಇದಕ್ಕಾಗಿ ಈಗ ಉಳಿದಿರುವುದು ಕಾನೂನು ಹೋರಾಟ. ಲಿಂಗಾಯತ ಸ್ವತಂತ್ರ ಧರ್ಮ ಎಂಬುದು ಸತ್ಯವಾದರೆ ಹೋರಾಟಕ್ಕೆ ಜಯ ಸಿಗುತ್ತದೆ ಎಂದರು.

ಪಲ್ಲಕ್ಕಿ ಉಳಿಸಿಕೊಳ್ಳಲು ಕೆಲವರಿಂದ ಅಡ್ಡಿ

ಬಾಗಲಕೋಟೆ: ಪಲ್ಲಕ್ಕಿ ಉಳಿಸಿಕೊಳ್ಳಲು ಕೆಲವರಿಂದ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಅಡ್ಡಿಯಾಗುತ್ತಿದೆ ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಡಾ|ಮಾತೆ ಮಹಾದೇವಿ ಟೀಕಿಸಿದರು.

ಕೂಡಲಸಂಗಮದಲ್ಲಿ ನಡೆದ ಶರಣ ಮೇಳದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ನಡೆಸಿದ ಎಂ.ಬಿ. ಪಾಟೀಲ ಮತ್ತು ನಮ್ಮ ಹೋರಾಟದ ಒತ್ತಾಯಕ್ಕೆ ಸ್ಪಂದಿಸಿದ ಆಗಿನ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯದಲ್ಲಿ ದೊಡ್ಡ ಅಪಪ್ರಚಾರ ನಡೆಸಿದರು. ಇದಕ್ಕೆ ನಮ್ಮ ಲಿಂಗಾಯತರೂ ಬಲಿಯಾದರು ಎಂದರು.

ಲಿಂಗಾಯತರು ಜಾತಿವಾದಿಗಳಲ್ಲ. ಮಾನ ವತಾವಾದಿಗಳು. ಆದರೆ, ವೀರಶೈವವಾದಿಗಳು ತಮ್ಮ ಹೆಸರು ಮತ್ತು ಪಲ್ಲಕ್ಕಿ ಉಳಿಸಿಕೊಳ್ಳಲು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ ಮಾಡುತ್ತಿದ್ದಾರೆ. ನಾವು ಪ್ರತ್ಯೇಕ ಧರ್ಮ ಹೋರಾಟ ವಿಷಯದಲ್ಲಿ ರಾಜ್ಯದಲ್ಲಿ ಈಗಾಗಲೇ ಯಶಸ್ಸು ಕಂಡಿದ್ದೇವೆ. ಪ್ರತ್ಯೇಕ ಧರ್ಮ ಹೋರಾಟಕ್ಕೆ ನ್ಯಾಯಮೂರ್ತಿ ನಾಗಮೋಹನ ದಾಸ್‌ ಸಮಿತಿಯ ವರದಿಯೇ ನಮಗೆ ದೊಡ್ಡ ಅಸ್ತ್ರ. ರಾಜ್ಯ ಸರ್ಕಾರದಿಂದ ಈಗಾಗಲೇ ಕೇಂದ್ರಕ್ಕೆ ಶಿಫಾರಸು ಆಗಿದ್ದು, ಕೇಂದ್ರದಲ್ಲೂ ಹೋರಾಟ ಮುಂದುವರಿದಿದೆ. ಆದರೆ, ಲಿಂಗಾಯತ ಕೋಟಾದಡಿ ಟಿಕೆಟ್ ಪಡೆದು ಗೆದ್ದವರು ಇಂದು ಲಿಂಗಾಯತ ಧರ್ಮದ ಮಾತು ಎತ್ತುತ್ತಿಲ್ಲ. ಪ್ರತ್ಯೇಕ ಧರ್ಮಕ್ಕಾಗಿ ಸುಪ್ರೀಂಕೋರ್ಟ್‌ ಮೆಟ್ಟಿಲೇರುವ ಕುರಿತು ಚಿಂತನೆ ನಡೆದಿದೆ ಎಂದರು.

ಪ್ರತ್ಯೇಕ ಧರ್ಮ ಹೋರಾಟ, ರಾಜ್ಯದಲ್ಲಿ ಯಶಸ್ವಿಯಾಗಲು ಗೃಹ ಸಚಿವ ಎಂ.ಬಿ. ಪಾಟೀಲ, ವಿನಯ ಕುಲಕರ್ಣಿ ಹಾಗೂ ಬಸವರಾಜ ಹೊರಟ್ಟಿ ಕಾರಣ. ಎಂ.ಬಿ. ಪಾಟೀಲರೇ ನಮ್ಮ ಲಿಂಗಾಯತ ನಾಯಕ ಎಂದು ಈಚೆಗೆ ದೆಹಲಿಯಲ್ಲಿ ನಡೆದ ಹೋರಾಟದ ವೇಳೆ ನಾವು ಸಂಕಲ್ಪ ಮಾಡಿದ್ದೇವೆ. ಇದನ್ನು ಅವರು ಒಪ್ಪಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.