ಸ್ವಪಕ್ಷ ತೊರೆದು ರಾಜಕೀಯ ಜಿಗಿತ: ರಾಜ್ಯದ ಪ್ರಭಾವಿ ನಾಯಕರ ಸಿದ್ಧತೆ
Team Udayavani, Mar 16, 2019, 5:56 AM IST
ಬೆಂಗಳೂರು : ಲೋಕಸಭಾ ಚುನಾವಣೆಯ ಕಾವು ಏರತೊಡಗಿರುವಂತೆಯೇ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಬಯಸುವ ಮತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರಬಯುವ ಅತೃಪ್ತ, ಅಸಮಾಧಾನಿತರ ದಂಡು ಇದೀಗ ತಮ್ಮ ರಾಜಕೀಯ ಮಹಾ ಜಿಗಿತಕ್ಕೆ ಸಿದ್ಧವಾಗುತ್ತಿದ್ದಾರೆ.
ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಕೆ ಬಿ ಶಾಣಪ್ಪ, ಮಾಜಿ ಸಚಿವ ಬಾಬುರಾವ್ ಚೌವ್ಹಾಣ್, ಗುರುಮಿಠಕಲ್ ಬಿಜೆಪಿ ಮುಖಂಡ ಶ್ಯಾಮರಾವ್ ಪ್ಯಾಟಿ ಅವರು ಬಿಜೆಪಿ ತೊರೆಯುವ ಸಿದ್ಧತೆಯಲ್ಲಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.
ಇದೇ ರೀತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಆ ಪಾಳಯದ ಪ್ರಭಾವೀ ನಾಯಕರು ಸಿದ್ಧರಾಗುತ್ತಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕಾಂಗ್ರೆಸ್ ನಿಂದ ಉಮೇಶ್ ಜಾಧವ್ ಈಗಾಗಲೇ ಬಿಜೆಪಿಗೆ ಬಂದಿದ್ದಾರೆ; ಇವರನ್ನು ಅನುಸರಿಸಿ ಈಗಿನ್ನು ರಮೇಶ್ ಜಾರಕಿ ಹೊಳಿ, ನಾಗೇಂದ್ರ ಮಹೇಶ್ ಕುಮಟಹಳ್ಳಿ ಇವರು ಕೂಡ ಬಿಜೆಪಿಗೆ ಸೇರುವ ಇಚ್ಛೆ ಹೊಂದಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಇದೇ ರೀತಿ ಎ ಮಂಜು ಅವರು ಕೂಡ ಬಿಜೆಪಿಗೆ ಸೇರುವ ಹಂಬಲ ಹೊಂದಿರುವುದಾಗಿ ವರದಿಗಳು ತಿಳಿಸಿವೆ.
ಕಲಬುರಗಿಯಲ್ಲಿ ಉಮೇಶ್ ಜಾಧವ್ ಅವರಿಗೆ ಸ್ಪರ್ಧಿಸಲು ಬಿಜೆಪಿ ಅವಕಾಶ ಕಲ್ಪಿಸಿರುವ ಕಾರಣಕ್ಕೆ ಅಸಮಾಧಾನ ಹೊಂದಿರುವರೆನ್ನಲಾದ ಕೆ ಬಿ ಶಾಣಪ್ಪ ಅವರು ಬಿಜೆಪಿ ತೊರೆಯಲು ಬಯಸಿರುವುದಾಗಿ ವರದಿ ತಿಳಿಸಿವೆ.
ಶ್ಯಾಮರಾವ್ ಪ್ಯಾಟಿ ಅವರು ಮಾರ್ಚ್ 18ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ