ಬಿಜೆಪಿಯವ್ರು ಪಶ್ಚಾತ್ತಾಪ ಯಾತ್ರೆ ಮಾಡಲಿ


Team Udayavani, Nov 3, 2017, 7:27 AM IST

03-3.jpg

ಬೆಂಗಳೂರು: ಬಿಜೆಪಿಯವರು ಪರಿವರ್ತನಾ ರ್ಯಾಲಿ ಹೆಸರಿನಲ್ಲಿ ನಾಟಕವಾಡುತ್ತಿದ್ದಾರೆಂದು ಲೇವಡಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ ಪಕ್ಷದ ನಾಯಕರು ಮೊದಲು ಅವರ ಮನಸ್ಸು ಪರಿವರ್ತನೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಿ ಬಂದೋರು ಪರಿವರ್ತನೆ ರ್ಯಾಲಿ ಉದ್ಘಾಟನೆ ಮಾಡಿದ್ದಾರೆ. ಹಿಂದುತ್ವ ಹೆಸರಿನಲ್ಲಿ ಧರ್ಮಗಳ ನಡುವೆ ಸಂಘರ್ಷ ಮೂಡಿಸಿ ಸಮಾಜದ ಶಾಂತಿ ಹಾಳು ಮಾಡುತ್ತಿರುವ ಬಿಜೆಪಿಯವರು ಮೊದಲು  ಪರಿವರ್ತನೆಯಾಗಬೇಕು. ಹೀಗಾಗಿ, ಪಶ್ಚಾತ್ತಾಪ ಯಾತ್ರೆ ಮಾಡುವುದು ಒಳ್ಳೆಯದು ಎಂದು ಹೇಳಿದರು. ಬಿಜೆಪಿಯವರು ಅಧಿಕಾರ ದಲ್ಲಿದ್ದಾಗ ಏನು ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ರೆಡ್ಡಿ ಬ್ರದರ್ಸ್‌ಗೆ ಸಂಪತ್ತು ಲೂಟಿ ಮಾಡಲು ಬಿಟ್ಟರು. ಇದಕ್ಕೆ ಯಡಿಯೂರಪ್ಪ ಕುಮ್ಮಕ್ಕೂ ಇತ್ತು ಎಂದು ಟೀಕಿಸಿದರು.

ಬಿಜೆಪಿಯ ಭ್ರಷ್ಟಾಚಾರ ಜನ ಮರೆತಿಲ್ಲ:
ಪರಿವರ್ತನಾ ರ್ಯಾಲಿ ಉದ್ಘಾಟಿಸಲು ಬಂದಿರುವ ಅಮಿತ್‌ ಶಾ ಜೈಲಿಗೆ ಹೋಗಿ ಬಂದವರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೂ ಜೈಲಿಗೆ ಹೋಗಿ ಬಂದಿದ್ದಾರೆ. ಪರಿವರ್ತನೆ ರ್ಯಾಲಿಯಲ್ಲಿ ನಾವಿಬ್ಬರೂ ಜೈಲಿಗೆ ಹೋಗಿ ಬಂದಿದ್ದೇವೆ ಎಂದು ಹೇಳಿಕೊಂಡು ತಿರುಗುತ್ತಾರಾ ಅಥವಾ ನಮ್ಮ ಶಾಸಕರು ಬ್ಲೂಫಿಲಂ ನೋಡಿದ್ರು, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಜನಾರ್ಧನರೆಡ್ಡಿ ಸೇರಿ ನಾವೆಲ್ಲ ಲೂಟಿ ಮಾಡಿದ್ವಿ ಅಂತ ಹೇಳ್ತಾರಾ? ಎಂದು ಲೇವಡಿ ಮಾಡಿದರು. ಮತ್ತೂಮ್ಮೆ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಲು ಜನರು ಈಗಾಗಲೇ
ತೀರ್ಮಾನ ಮಾಡಿಯಾಗಿದೆ ಎಂದರು. 

ರ್ಯಾಲಿ ವಾಹನ ವಿವಾದ: ಬಿಜೆಪಿಯವರ ಪರಿವರ್ತನೆ ಯಾತ್ರೆಗೆ ಬಳಸುತ್ತಿರುವ ವಾಹನದ ನೋಂದಣಿ ಫ‌ಲಕ ವಿವಾದಕ್ಕೆ ಕಾರಣವಾಗಿದೆ. ವಾಹನದ ಹಳದಿ ಬಣ್ಣದ ನಂಬರ್‌ ಪ್ಲೇಟ್‌ ಮೇಲೆ ಬಳಿ ಬಣ್ಣದ ನಂಬರ್‌ ಪ್ಲೇಟ್‌ ಅಂಟಿಸಲಾಗಿದೆ ಎಂದು ಆರೋಪದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಯವರ ಗಮನ ಸೆಳೆದಾಗ, ಹಳದಿ ಬಣ್ಣದ ನಂಬರ್‌ ಪ್ಲೇಟ್‌ ಮೇಲೆ ಬೇರೆ ಬಣ್ಣದ ಪ್ಲೇಟ್‌ ಅಂಟಿಸುವುದು ನಿಯಮ ಬಾಹಿರ. ಮೋಟಾರ್‌ ವೆಹಿಕಲ್‌ ಆ್ಯಕ್ಟ್ 1989 ಪ್ರಕಾರ ಉಲ್ಲಂಘನೆ. ಹೀಗಾಗಿ, ಪರಿಶೀಲಿಸಲು
ಸಂಬಂಧಪಟ್ಟವರಿಗೆ ಸೂಚಿಸಲಾಗುವುದು ಎಂದು ಸಿಎಂ ತಿಳಿಸಿದರು.

ಕಾನೂನು-ಸುವ್ಯವಸ್ಥೆಗೆ ಭಂಗ ತಂದರೆ ಕ್ರಮ
ಪರಿವರ್ತನಾ ಯಾತ್ರೆ ಅಥವಾ ಟಿಪ್ಪು ಜಯಂತಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಪಿಯವರು ಪರಿವರ್ತನಾ ರ್ಯಾಲಿ ಮಾಡಿಕೊಳ್ಳಲಿ, ಆದರೆ ಆ ನೆಪದಲ್ಲಿ ಕಾನೂನು-ಸುವ್ಯವಸ್ಥೆಗೆ ಭಂಗ ತಂದರೆ, ಟಿಪ್ಪು ಜಯಂತಿ ಸಂದರ್ಭದಲ್ಲಿ ಶಾಂತಿ ಕದಡಲು ಪ್ರಯತ್ನಿಸಿದರೆ ಸರ್ಕಾರ ಸುಮ್ಮನಿರುವುದಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಮಹಿಳೆಯೊಬ್ಬರು ಪೊಲೀಸ್‌ ಇತಿಹಾಸದಲ್ಲಿ ಮಹಾನಿರ್ದೇಶಕರಾಗಿದ್ದಾರೆ. ಬಿಜೆಪಿಯವರಿಗೆ ಶಾಂತಿ ಕದಡುವುದೇ ಕೆಲಸ. ಅದಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಪೊಲೀಸರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ಗೃಹ ಸಚಿವರ ಸಭೆ: ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಸಹ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ಪರಿವರ್ತನೆ ರ್ಯಾಲಿ ಹಾಗೂ ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಎಲ್ಲೆಡೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು. 

ಫ್ಲಾಶ್‌ ಬ್ಯಾಕ್‌ಗೆ ಹೋಗಲಿ 
ಕೆಜೆಪಿ ಕಟ್ಟಿದಾಗ ಯಡಿಯೂರಪ್ಪ ಏನು ಹೇಳಿದರು, ಬಿಜೆಪಿ ಪಕ್ಷ ಹಾಗೂ ನಾಯಕರ ಬಗ್ಗೆ ಏನೆಲ್ಲ ತುಚ್ಛವಾಗಿ
ಮಾತನಾಡಿದ್ದರು ಎಂಬುದನ್ನು ತಿಳಿಯಲು ಫ್ಲಾಶ್‌ ಬ್ಯಾಕ್‌ಗೆ ಹೋಗಲಿ. ಯಡಿಯೂರಪ್ಪ ಕಾಲೆಳೆಯೋರು ಅವರ
ಪಕ್ಷದಲ್ಲೇ ಇದ್ದಾರೆ. ಅನಂತಕುಮಾರ್‌, ಈಶ್ವರಪ್ಪ, ಅಶೋಕ್‌, ಅದ್ಯಾರೋ ಸಂತೋಷ್‌ ಇದ್ದಾರಂತಲ್ಲಾ ಅವರೇ ಸಾಕು.

 ●ಸಿದ್ದರಾಮಯ್ಯ, ಮುಖ್ಯಮಂತ್ರಿ

ಬಿಜೆಪಿಯವರು ಪರಿವರ್ತನಾ ರ್ಯಾಲಿ ಬದಲಿಗೆ ಪಶ್ಚಾತ್ತಾಪ ರ್ಯಾಲಿ ಮಾಡಬೇಕಿತ್ತು. ಕಳೆದ ಬಾರಿ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಕೊಟ್ಟಿದ್ದಾಗ ಏನೆಲ್ಲ ಮಾಡಿದರು ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಅವರ ನಾಟಕಕ್ಕೆ ಯಾರೂ ಬೆಲೆ ಕೊಡುವುದಿಲ್ಲ. 
●ರಾಮಲಿಂಗಾರೆಡ್ಡಿ, ಗೃಹ ಸಚಿವ 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.