ಸಹನೆ ನಮ್ಮ ದೌರ್ಬಲ್ಯವಲ್ಲ; ಮನೋಹರ್ ಪರಿಕ್ಕರ್


Team Udayavani, Feb 15, 2017, 3:50 AM IST

sahane.jpg

ಬೆಂಗಳೂರು: ನೆರೆ ರಾಷ್ಟ್ರಗಳಿಂದ ಬೆದರಿಕೆ ಇದ್ದರೂ ಭಾರತ ಶಾಂತವಾಗಿದೆ ಎಂದ ಮಾತ್ರಕ್ಕೆ ಸನ್ನದ್ಧತೆಯ ಕೊರತೆ
ಎಂಬ ಅರ್ಥವಲ್ಲ. ದೇಶದ ಭದ್ರತಾ ವ್ಯವಸ್ಥೆ ಕಾಪಾಡಲು ನಾವು ಸದಾ ಸನ್ನದ್ಧರಾಗಿದ್ದೇವೆ ಎಂದು ಹೇಳುವ ಮೂಲಕ ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಚೀನಾಕ್ಕೆ ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಯಲಹಂಕ ವಾಯುನೆಲೆಯಲ್ಲಿ ಮಂಗಳವಾರ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಯಾವತ್ತೂ ಶಾಂತಿ ಬಯಸುತ್ತದೆ. ಹಾಗೆಂದ ಮಾತ್ರಕ್ಕೆ ನೆರೆ ರಾಷ್ಟ್ರಗಳಿಂದ ಬರುವ ಬೆದರಿಕೆಗಳ ಬಗ್ಗೆ ಮೌನವಾಗಿದ್ದೇವೆ ಎಂಬ ಭಾವನೆ ಸರಿಯಲ್ಲ. ಭಾರತಕ್ಕೆ‌ ಬೆದರಿಕೆ ಒಡ್ಡಿದರೂ ಅದನ್ನು ಎದುರಿಸುತ್ತೇವೆ. ನಮ್ಮ ದೇಶದ ಜನರಿಗೆ ಹೇಗೆ ಭದ್ರತೆ ಒದಗಿಸಬೇಕು ಎಂಬುದನ್ನು ಚೆನ್ನಾಗಿ ಬಲ್ಲೆವು ಎಂದು ಹೇಳಿದರು.

“ಸಿದ್ಧತೆ ಒಂದು ವೈಯಕ್ತಿಕ ಪ್ರಯೋಗವಾಗಿರುತ್ತದೆಯೇ ಹೊರತು ಆಕ್ರಮಣಕಾರಿಧಿಯಾಗಿರುವುದಿಲ್ಲ. ಆದರೆ, ಆಕ್ರಮಣ ಎದುರಿಸಲು ಸಮರ್ಥವಾಗಿರುತ್ತದೆ’ ಎಂದು ಪಾಕಿಸ್ತಾನ ಮತ್ತು ಚೀನಾ ಗಡಿ ಭಾಗದಲ್ಲಿ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಸೇರಿಸುತ್ತಿರುವ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಭಾರತದ ಗಡಿಯಲ್ಲಿ ಚೀನಾ ನಡೆಸುತ್ತಿರುವ ಕೆಲವು ಚಟುವಟಿಕೆಗಳು, ಗಡಿ ಉಲ್ಲಂಘನೆ ಕುರಿತ ಪ್ರಶ್ನೆಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಭಾರತ ನೆರೆ ರಾಷ್ಟ್ರಗಳೊಂದಿಗೆ ಯಾವತ್ತೂ ಶಾಂತಿ ಬಯಸುತ್ತದೆ.
ಅವರಿಂದಲೂ ಅದೇ ರೀತಿಯ ಪ್ರತಿಕ್ರಿಯೆಯನ್ನು ಎದುರು ನೋಡುತ್ತದೆ ಎಂದರು.

ಗಮನಾರ್ಹ ಸಾಧನೆ: ವೈಮಾನಿಕ ರಕ್ಷಣೆ ಮತ್ತು ನಾಗರೀಕ ವಿಮಾನಯಾನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಸಾಧನೆ
ಮಾಡುತ್ತಿದೆ. ಹಗುರ ಹೆಲಿಕಾಪ್ಟರ್‌ ತಯಾರಿಕೆಗೆ ಸಂಬಂಧಿಸಿದಂತೆ ಈಗಾಗಲೇ ಎಚ್‌ಎಎಲ್‌ 8 ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸಲಾದಗಿದೆ. ಎರಡನೇ ಹಂತದಲ್ಲಿ ಮತ್ತೆ 8 ಹೆಲಿಕಾಪ್ಟರ್‌ಗಳಿಗಾಗಿ 1354 ಕೋಟಿ ಮೊತ್ತದ ಯೋಜನೆ
ಮಂಜೂರು ಮಾಡಲಾಗಿದ್ದು, ಮೂರು ತಿಂಗಳಲ್ಲಿ ಕೆಲಸ ಆರಂಭವಾಗಿ ಇನ್ನೆರಡು ವರ್ಷಗಳಲ್ಲಿ ಅಧಿಕೃತ ಉತ್ಪಾದನೆ
ಆರಂಭವಾಗಲಿದೆ ಎಂದು ತಿಳಿಸಿದರು.

ಅದೇ ರೀತಿ ಎಸ್‌ಪಿ ಗನ್‌, ಸಿ-295 (ಏರ್‌ಬಸ್‌ ಟ್ರಾನ್ಸ್‌ಪೊàರ್ಟರ್‌ ಏರ್‌ಕ್ರಾಫ್ಟ್), ಏಕ ಮತ್ತು ಎರಡು ಎಂಜಿನ್‌ಗಳ ಫೈಟರ್‌ ಜೆಟ್‌ ಉತ್ಪಾದನೆ ಈ ಕ್ಯಾಲೆಂಡರ್‌ ವರ್ಷದಲ್ಲಿ ಆರಂಭವಾಗಲಿದೆ. ರಕ್ಷಣಾ ಇಲಾಖೆ ಮತ್ತು ನಾಗರೀಕ ವಿಮಾನಯಾನ ಇಲಾಖೆಗಳಿಗೆ ಒಟ್ಟಾಗಿ ಒಂದು ಸಾವಿರ ನಾಗರೀಕ ವಿಮಾನಗಳು, 300ರಿಂದ 400 ಯುದ್ಧ ವಿಮಾನಗಳು, 800ರಿಂದ 1000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದು, ಎರಡೂ ಇಲಾಖೆಗಳು ಒಟ್ಟಾಗಿ ಕೆಲಸ ಮಾಡುವ ಮೂಲಕ ಉತ್ಪಾದನಾ ಕ್ಷೇತ್ರದಲ್ಲಿ ಈ ಸಾಧನೆ ಮಾಡಲಿವೆ. ಮುಂದಿನ 10 ವರ್ಷಗಳಲ್ಲಿ ಐದು ಸಾವಿರ ಹೆಲಿಕಾಪ್ಟರ್‌ ಎಂಜಿನ್‌ಗಳ ಅಗತ್ಯವಿದ್ದು, ಮೇಕ್‌ ಇನ್‌ ಇಂಡಿಯಾ ಮೂಲಕ ಅವುಗಳನ್ನು ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

ಶ್ಲಾಘನೆ: ಕಳೆದ ಎರಡು ವರ್ಷಗಳಲ್ಲಿ ಎಚ್‌ಎಎಲ್‌ ಮಾಡಿರುವ ಸಾಧನೆಗಳನ್ನು ಶ್ಲಾ ಸಿದ ರಕ್ಷಣಾ ಸಚಿವರು, ದ್ರುವ, ರುದ್ರ, ಹಗುರ ಹೆಲಿಕಾಪ್ಟರ್‌  ಸೇರಿದಂತೆ ಹೆಲಿಕಾಪ್ಟರ್‌ ಉತ್ಪಾದನೆಯಲ್ಲಿ ಕಾಲಮಿತಿಯಲ್ಲಿ ಸಾಧನೆ ಮಾಡಲಾಗಿದೆ. ಈ ಹಿಂದೆ ಎಚ್‌ಎಎಲ್‌ಗೆ ವರ್ಷಿಕ ಗುರಿ ನೀಡಿದ್ದರೂ ಅದಕ್ಕೆ ತಕ್ಕಂತೆ ಪ್ರೋತ್ಸಾಹ ಇಲ್ಲದ ಕಾರಣ ಗುರಿ ಸಾಧನೆ
ಸಾಧ್ಯವಾಗುತ್ತಿರಲಿಲ್ಲ. ಆದರೆ, ಎರಡು ವರ್ಷದ ಅವಧಿಯಲ್ಲಿ ಕಂಪೆನಿ ಹಿಂದಿನ ಎಲ್ಲಾ ವೈಫ‌ಲ್ಯಗಳನ್ನು ಮೆಟ್ಟಿನಿಂತು ಉತ್ತಮ ಸಾಧನೆ ತೋರುತ್ತಿದೆ. ಹೆಚ್ಚುವರಿಯಾಗಿ ಮತ್ತೂಂದು ಹೆಲಿಕಾಪ್ಟರ್‌ ತಯಾರಿಕಾ ಘಟಕ ಸ್ಥಾಪನೆಯತ್ತ
ಆಸಕ್ತಿ ವಹಿಸಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.