ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಪಿ.ಸಿ.ಮೋಹನ್‌


Team Udayavani, May 24, 2019, 3:24 AM IST

hatric

ಬೆಂಗಳೂರು: ಕಾಂಗ್ರೆಸ್‌ ಬಿಜೆಪಿ ಪ್ರಬಲ ಪೈಪೋಟಿಯಿಂದಾಗಿ ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್‌ 70, 968 ಮತಗಳ ಅಂತರದಿಂದ ಕಾಂಗ್ರೆಸ್‌ನ ರಿಜ್ವಾನ್‌ ಅರ್ಷದ್‌ ಅವರನ್ನು ಪರಾಭವಗೊಳಿಸಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ 6,02,853 ಮತಗಳಿಸಿದರೆ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ 5,31,885 ಮತ ಪಡೆದಿದ್ದಾರೆ. ಇದೇ ಮೊದಲ ಬಾರಿ ಅದೃಷ್ಟ ಪರೀಕ್ಷೆಗೆ ಚುನಾವಣೆಗೆ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್‌ ರಾಜ್‌ 28,906 ಮತಗಳಿಂದ ಮೂರನೇ ಸ್ಥಾನ ಗಳಿಸಿದ್ದಾರೆ. ಉತ್ತಮ್‌ ಪ್ರಜಾಕೀಯ ಪಕ್ಷದ ಮೆಲ್ಲೆಗಟ್ಟಿ ಶ್ರೀದೇವಿ 4, 271 ಮತಗಳಿಂದ ನಾಲ್ಕನೇ ಸ್ಥಾನ ಹಾಗೂ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದ ಎಂ.ಕೆ.ಪಾಷಾ 3,889 ಮತಗಳಿಂದ 5ನೇ ಸ್ಥಾನ ಪಡೆದ್ದಾರೆ. ಇನ್ನು 10,755 ಮತದಾರರು ನೋಟ ಗುಂಡಿ ಒತ್ತುವ ಮೂಲಕ ಯಾವುದೇ ಅಭ್ಯರ್ಥಿಗಳಿಗೆ ಮತ ಹಾಕದೆ ದೂರ ಉಳಿದಿದ್ದಾರೆ.

13ನೇ ಸುತ್ತಿನ ನಂತರ ಬದಲಾದ ಚಿತ್ರಣ: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಮತ ಏಣಿಕೆ ಕಾರ್ಯ ನಡೆಯುತ್ತಿದ್ದ ನಗರದ ಮೌಂಟ್‌ಕಾರ್ಮಲ್‌ ಕಾಲೇಜಿನಲ್ಲಿ ಬಳಿ ಬೆಳಗ್ಗೆ 7 ಗಂಟೆಗೆ ಬಿಜೆಪಿ ಕಾಂಗ್ರೆಸ್‌ ಕಾರ್ಯಕರ್ತರು ಜಮಾಯಿಸಿದ್ದರು. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಮೊದಲ ಸುತ್ತಿನಿಂದ 12ನೇ ಸುತ್ತಿನವರೆಗೂ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ 8 ರಿಂದ 10 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು. ಅಂತೆಯೇ ಕೈ ಪಾಳಯದಲ್ಲಿ ಸಂಸತ ಮೂಡಿತ್ತು. ಆದರೆ, 13 ಸುತ್ತಿನ ಫ‌ಲಿತಾಂಶ ಬಂದ ಕೂಡಲೇ ಪಿ.ಸಿ.ಮೋಹನ್‌ 26 ಸಾವಿರ ಮತಗಳ ಮುನ್ನಡೆ ಪಡೆದುಕೊಂಡು ಕಮಲಪಾಳಯದಲ್ಲಿ ಗೆಲುವಿನ ಆಸೆ ಗರಿಗೆದರಿತು.

ಅಲ್ಲಿಂದ ಫ‌ಲಿತಾಂಶದ ಚಿತ್ರಣವೇ ಬದಲಾಯಿತು. 13ನೇ ಸುತ್ತಿನಿಂದ ಮುನ್ನಡೆ ಕಾಯ್ದುಕೊಂಡ ಪಿ.ಸಿ.ಮೋಹನ್‌ ಅಂತಿಮವಾಗಿ 70, 968 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದರು. 2014ರ ಚುನಾವಣೆ ವೇಳೆ ಪಿ.ಸಿ.ಮೋಹನ್‌ 1,37,500 ಮತಗಳ ಅಂತರದಲ್ಲಿ ರಿಜ್ವಾನ್‌ ಅರ್ಷದ್‌ ವಿರುದ್ಧ ಜಯಭೇರಿ ಬಾರಿಸಿದ್ದರು. ಆದರೆ, 2019ರಲ್ಲಿ 70,968 ಮತಗಳ ಅಂತದಿಂದ ಗೆಲವು ಸಾಧಿಸಿದ್ದಾರೆ. ಈ ಮೂಲಕ ಕಳೆದ ಬಾರಿಗಿಂತ ಈ ಬಾರಿ ಗೆಲುವಿನ ಅಂತ ಅರ್ಧಕ್ಕೆ ಕುಸಿದಂತಾಗಿದೆ.

ಈ ಬಾರಿ ಕೇಂದ್ರದಿಂದ ಸಾಕಷ್ಟು ಯೋಜನೆಗಳನ್ನು ರಾಜ್ಯಕ್ಕೆ ತರುವ ಮೂಲಕ ಮತ್ತಷ್ಟು ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. 3ನೇ ಬಾರಿ ವಿಶ್ವಾಸವಿಟ್ಟು ಗೆಲ್ಲಿಸಿದ‌ ಜನತೆಗೆ ಧನ್ಯವಾದ.
-ಪಿ.ಸಿ.ಮೋಹನ್‌, ಬಿಜೆಪಿ ಅಭ್ಯರ್ಥಿ

ಕ್ಷೇತ್ರದ ಜತೆ ನಿರಂತರ ಸಂಪರ್ಕ ಮುಂದುವರಿಸು ತ್ತೇನೆ. ಪಿ.ಸಿ.ಮೋಹನ್‌ ಗೆಲುವಿಗೆ ಅಭಿನಂದಿಸುತ್ತೇನೆ. ಅಭಿವೃದ್ಧಿಯಲ್ಲಿ ಮೋಹನ್‌ಗೆ ಬೆಂಬಲ ನೀಡಿ, ನಗರಕ್ಕೆ ಶ್ರಮಿಸುತ್ತೇನೆ.
-ರಿಜ್ವಾನ್‌ ಅರ್ಷದ್‌, ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ

ಬೆಂ. ಕೇಂದ್ರ ( ಬಿಜೆಪಿ)
-ವಿಜೇತರು ಪಿ.ಸಿ. ಮೋಹನ್‌
-ಪಡೆದ ಮತ 6,02,853
-ಎದುರಾಳಿ ರಿಜ್ವಾನ್‌ ಅರ್ಷದ್‌ (ಜೆಡಿಎಸ್‌)
-ಪಡೆದ ಮತ 5,31,885
-ಗೆಲುವಿನ ಅಂತರ 70,968

ಗೆಲುವಿಗೆ 3 ಕಾರಣ
-ಸಂಸದರ ಅನುದಾನದಲ್ಲಿ ಅಭಿವೃದ್ಧಿ, ಉಪನಗರ ರೈಲು ಯೋಜನೆ ಹೋರಾಟ
-ಮೋದಿ ಅಲೆ ಹಾಗೂ ಬಿಜೆಪಿ ಶಾಸಕರಿರುವ ವಿಧಾನಸಭಾ ಕ್ಷೇತ್ರಗಳಿಂದ ಬಹುಮತ
-ಕ್ಷೇತ್ರದಲ್ಲಿನ ಅನ್ಯಭಾಷಿಕರ ಜತೆ ಉತ್ತಮ ಒಡನಾಟ

ಸೋಲಿಗೆ 3 ಕಾರಣ
-ಕಾಂಗ್ರೆಸ್‌ ನಾಯಕರ ನಡುವೆ ಸಮನ್ವಯದ ಕೊರತೆ.
-ಚಾಮರಾಜಪೇಟೆ, ಶಿವಾಜಿ ನಗರ, ಸರ್ವಜ್ಞನಗರ ವಿಧಾನ ಸಭೆ ಕ್ಷೇತ್ರದಿಂದ ನಿರೀಕ್ಷಿತ ಮತ “ಕೈ’ಗೆ ಬಂದಿಲ್ಲ.
-ಪಕ್ಷೇತರ ಅಭ್ಯರ್ಥಿಯಾಗಿ ನಟ ಪ್ರಕಾಶ್‌ ರಾಜ್‌ ಸ್ಪರ್ಧೆ.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.