ಪೇಜಾವರ ಶ್ರೀಗಳ ಭೇಟಿ ಮಾಡಿದ ವಿಹಿಂಪ ಅಧ್ಯಕ್ಷ
Team Udayavani, Oct 25, 2021, 5:37 AM IST
ಬೆಂಗಳೂರು: ವಿಶ್ವಹಿಂದೂ ಪರಿಷತ್ ಅಂತಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ಆಲೋಕ್ ಕುಮಾರ್ ಅವರು ರವಿವಾರ ನಗರದ ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ಭೇಟಿ ನೀಡಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಜತೆ ಸಮಾಲೋಚನೆ ನಡೆಸಿದರು.
ಅವರು ಮತಾಂತರ ವಿರುದ್ಧ ಆಂದೋಲನ, ಹಿಂದೂ ಧರ್ಮಕ್ಕೆ ಎದುರಾಗಿರುವ ಸಂಕಷ್ಟ ಸಹಿತ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.
ದೇಶದಲ್ಲಿ ಕ್ರೈಸ್ತರಿಂದ ಮತಾಂತರ ಚಟುವಟಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಇದರ ವಿರುದ್ಧ ವಿಶ್ವಹಿಂದೂ ಪರಿಷತ್ ರಾಷ್ಟ್ರವ್ಯಾಪಿ ಆಂದೋಲನಕ್ಕೆ ಸಜ್ಜಾಗಿದೆ. ಇದರ ನೇತ್ವತ್ವವನ್ನು ಮಠಾಧೀಶರು, ಸಾಧು ಸಂತರು ಹಾಗೂ ಧರ್ಮಾಧಿಕಾರಿಗಳು ವಹಿಸಬೇಕು ಎಂದು ಆಲೋಕ್ ಕುಮಾರ್ ಮನವಿ ಮಾಡಿದರು.
ಶ್ರೀವಿಶ್ವೇಶತೀರ್ಥ ಶ್ರೀಪಾದರು ಕಾಲಕಾಲಕ್ಕೆ ಹಿಂದೂ ಸಮಾಜಕ್ಕೆ ಎದುರಾಗಿದ್ದ ಸವಾಲುಗಳ ಸಂದರ್ಭದಲ್ಲಿ ಸ್ವಯಂ ಸ್ಫೂರ್ತಿಯಿಂದ ಮುಂಚೂಣಿಯಲ್ಲಿ ನಿಂತು ಮಾರ್ಗದರ್ಶನ ನೀಡಿದ್ದರು. ಈಗ ಅವರ ಶಿಷ್ಯರಾದ ತಾವು ಆ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಬೇಕು ಎಂದು ಶ್ರೀಗಳಲ್ಲಿ ವಿನಂತಿಸಿದರು.
ಇದನ್ನೂ ಓದಿ:ಬಿಜೆಪಿ-ಜೆಡಿಎಸ್ಗೆ ನಾನೇ ಟಾರ್ಗೆಟ್: ಸಿದ್ದರಾಮಯ್ಯ
ಇದಕ್ಕೆ ಪೇಜಾವರ ಶ್ರೀಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂದರ್ಭದಲ್ಲಿ ಆಲೋಕ್ ಕುಮಾರ್ ಅವರನ್ನು ಶ್ರೀಗಳು ಆಶೀರ್ವದಿಸಿದರು. ವಿಶ್ವಹಿಂದು ಪರಿಷತ್ತಿನ ಕ್ಷೇತ್ರಿಯ ಸಂಘಟನ ಕಾರ್ಯದರ್ಶಿ ಕೇಶವ ಹೆಗಡೆ, ಬಸವರಾಜ್ ಸಹಿತ ಮತ್ತಿತತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್