Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ


Team Udayavani, May 24, 2024, 7:20 AM IST

Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ

ಬೆಂಗಳೂರು: ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವಿನ ಗುದ್ದಾಟ ತಾರಕಕ್ಕೇರಿದ್ದು, ಎರಡೂ ಪಕ್ಷಗಳು ಈಗ ಸಾಮಾಜಿಕ ಜಾಲತಾಣ  “ಎಕ್ಸ್‌’ನಲ್ಲಿ ಪೋಸ್ಟ್‌ ವಾರ್‌ ನಡೆಸಿವೆ. ಒಂದೆಡೆ  “ಸಿ.ಡಿ. ಶಿವು ಎಲ್ಲಿದ್ದೀಯಪ್ಪ’ ಅಂತ ಜೆಡಿಎಸ್‌ ಜಾಲತಾಣದಲ್ಲಿ ಟ್ರೋಲ್‌ ಆರಂಭಿಸಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್‌ “ಉತ್ತರಿಸು ಪೆನ್‌ಡ್ರೈವ್‌ ಸ್ವಾಮಿ’ ಎಂದು ಕೇಳಲು ಆರಂಭಿಸಿದೆ.

“ಪ್ರಜ್ವಲ್‌ ಎಲ್ಲಿರಬಹುದು ಎನ್ನುವ ವಿಷಯ ನಿಮ್ಮ ಸಿ.ಡಿ. ಶಿವುಗೆ ಚೆನ್ನಾಗಿಯೇ ಗೊತ್ತಿದೆ. ಅವರನ್ನೇ ಕೇಳಿದರೆ ಉತ್ತಮವಲ್ಲವೇ? ಸಖ್ಯ ಮತ್ತು ಸೌಖ್ಯದ ಬಗ್ಗೆ ಅವರಿಗಿಂತ ಬಲ್ಲವರು ಉಂಟೇ’ ಎಂದು ಕೇಳುವ ಮೂಲಕ ಈ  “ಟ್ವೀಟ್‌ ವಾರ್‌’ಗೆ ಗುರುವಾರ ಮಾಜಿ ಸಿಎಂ ಕುಮಾರಸ್ವಾಮಿ ಮುನ್ನುಡಿ ಬರೆದರು. ಇದು ಅಪ್‌ಲೋಡ್‌ ಆದ ಕೆಲವೇ ಹೊತ್ತಿನಲ್ಲಿ ಕಾಂಗ್ರೆಸ್‌, “ಗೆಜ್ಜೆ ಶಬ್ದ ಕಂಡರೆ ಕಳ್ಳ ಹೆಜ್ಜೆ ಇಡುವ ಮಾನಗೇಡಿಗಳು ತಾವು. ತಮ್ಮ ಕುಟುಂಬದ ಸದಸ್ಯನೊಬ್ಬ ಎಲ್ಲಿ ಅಡಗಿದ್ದಾನೆ ಎನ್ನುವ ಮಾಹಿತಿ ಇಲ್ಲದಿರುವಷ್ಟು ಅಮಾಯಕನೂ ಅಲ್ಲ, ಮುಗ್ಧನೂ ಅಲ್ಲ ಬ್ರದರ್‌ ಸ್ವಾಮಿ’ ಎಂದು ಕಾಲೆಳೆದಿದೆ.

ಕಾರ್ಖಾನೆಯ ಮೂಲ ಮಾಲಕ:

ಎಸ್‌ಐಟಿ ಅಧಿಕಾರಿಗಳಿಗೆ ಸಿ.ಡಿ. ಶಿವುವನ್ನು ಹಿಡಿದು ಡ್ರಿಲ್‌ ಮಾಡಿದರೆ, ಸತ್ಯ ಹೊರಗೆ ಬರುತ್ತದೆ. ಶಿವಕುಮಾರ್‌ ಇನ್‌ವೆಸ್ಟಿಗೇಷನ್‌ ಟೀಮ್‌ಗೆ ಗೊತ್ತಿಲ್ಲವೆಂದರೆ ಅದು ಶತಮಾನದ ಜೋಕ್‌ ಅಷ್ಟೇ. ಅಲ್ಲದೆ, ಸಿ.ಡಿ. ಶಿವು ಪೂರ್ವಾಶ್ರಮಕ್ಕೆ ಮಾಡಿದ ಘೋರ ಅಪಚಾರ. ಈ ಶತಮಾನ ಕಂಡು ಕೇಳರಿಯದ ಸೋಜಿಗ. ಪೆನ್‌ಡ್ರೈವ್‌ ಕಾರ್ಖಾನೆಯ ಮೂಲ ಮಾಲಕ, ಸಿ.ಡಿ. ಸಂಚುಕೋರ ಸಿ.ಡಿ. ಶಿವು ಕಣ್ಸನ್ನೆಯಂತೆ ಅವರ ಚೇಲಾಗಳು ನಡೆಸಿದ ಪೆನ್‌ಡ್ರೈವ್‌ ಸಮಾರಾಧನೆ ಯಾರಿಗೆ ಗೊತ್ತಿಲ್ಲ ಹೇಳಿ? ಎಫ್ಐಆರ್‌ ಆದ ಮೇಲೆ ಕಾಲ್ಕಿತ್ತ ಪೆನ್‌ಡ್ರೈವ್‌ ಪಿಶಾಚಿಗಳು; ಕೋರ್ಟ್‌ ಜಾಮೀನು ನಿರಾಕರಿಸಿದ ಮೇಲೆಯೂ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಸಿ.ಡಿ. ಶಿವು ಆಸ್ಥಾನದಲ್ಲಿ ಓಲಾಡುತ್ತಿರುವುದು ಯಾರಿಗೆ ಗೊತ್ತಿಲ್ಲ, ಹೇಳಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸಿ.ಡಿ. ಜನಕ ಬ್ರದರ್‌ ಸ್ವಾಮಿ!:

ತಮ್ಮ ಕುಟುಂಬದ ಸದಸ್ಯನೊಬ್ಬ ಎಲ್ಲಿ ಅಡಗಿದ್ದಾನೆ ಎನ್ನುವ ಮಾಹಿತಿ ಇಲ್ಲದಿರುವಷ್ಟು ಅಮಾಯಕನೂ ಅಲ್ಲ, ಮುಗ್ಧನೂ ಅಲ್ಲ ಬ್ರದರ್‌ ಸ್ವಾಮಿ! ಗೆಜ್ಜೆ ಶಬ್ದ ಕಂಡರೆ ಕಳ್ಳ ಹೆಜ್ಜೆ ಇಡುವ ಮಾನಗೇಡಿಗಳು ತಾವು ಕೊಳಕು ತಿಂದು ಇತರರ ಬಾಯಿಗೆ ಒರೆಸಲು ಬರುತ್ತಿರುವುದು ಮೂರನ್ನೂ ಬಿಟ್ಟಿರುವ ನಿರ್ಲಜ್ಜತನದ ಪರಮಾವಧಿ. ಪೆನ್‌ಡ್ರೈವ್‌ ಬಿಡುತ್ತೇನೆ, ಬಿಡುತ್ತೇನೆ ಎಂದು ಒಂದು ವರ್ಷದಿಂದ ಬಾಯಿ ಬಡಿದುಕೊಳ್ಳುತ್ತಿದ್ದ ಬಿಜೆಪಿಯ ದೇವರಾಜೇಗೌಡನ ಜತೆ ರಹಸ್ಯ ಒಪ್ಪಂದ ಮಾಡಿಕೊಂಡು ಅಖಿಲ ಕರ್ನಾಟಕಕ್ಕೆ ಹಂಚಿಕೆ ಮಾಡಿದ್ದು ಇದೇ ಬ್ರದರ್‌ ಸ್ವಾಮಿಯಲ್ಲವೇ? ಪೂರ್ವಾಶ್ರಮದ ಸಿನೆಮಾ ಹಂಚಿಕೆಯ ವೃತ್ತಿ ಇದರಲ್ಲೂ ಸಹಾಯಕ್ಕೆ ಬಂದಿರಬಹುದು ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ.

ಟಾಪ್ ನ್ಯೂಸ್

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವುMadikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವುMadikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.