ಸಿದ್ದರಾಮಯ್ಯರಂತಹ ಸುಳ್ಳುಗಾರರನ್ನು ರಾಜ್ಯದ ಜನರು ಇದುವರೆಗೆ ಕಂಡಿಲ್ಲ: ಬಿಜೆಪಿ
Team Udayavani, Nov 15, 2021, 2:33 PM IST
ಬೆಂಗಳೂರು: ಮಾನ್ಯ ಸುಳ್ಳುರಾಮಯ್ಯ ಅವರೇ, ರಾಜ್ಯದ ಜನರು ನಿಮ್ಮಂತ ಸುಳ್ಳುಗಾರರನ್ನು ಇದುವರೆಗೆ ಕಂಡಿಲ್ಲ. 2013 ರಿಂದಲೂ ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳುತ್ತಲೇ ಬಂದಿದ್ದೀರಿ. ನುಡಿದಂತೆ ನಡೆಯಿರಿ ಎಂದರೆ ಇನ್ನೊಂದು ಚುನಾವಣೆಯವರೆಗೆ ತಡೆಯಿರಿ ಎನ್ನುತ್ತೀರಿ. ಇದಕ್ಕಾಗಿಯೇ ಬುರುಡೆರಾಮಯ್ಯ ಎನ್ನುವುದು ಎಂದು ಬಿಜೆಪಿ ಟೀಕೆ ಮಾಡಿದೆ.
ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಪಕ್ಷಕ್ಕೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಸಿದ್ದರಾಮಯ್ಯ ಕರೆಕೊಟ್ಟಿದ್ದಾರೆ. ಪಕ್ಷಕ್ಕೆ ಬರುವ ಯುವಕರಿಗೆ ಸ್ಥಾಪಿತ ಹಿತಾಸಕ್ತಿಗಳ ಕೂಟದಲ್ಲಿ ಯಾವ ಸ್ಥಾನ ನೀಡುತ್ತೀರಿ? ಇದೇ ನಮ್ಮ ಕೊನೆಯ ಚುನಾವಣೆ ಎನ್ನುತ್ತಲೇ ನೀವು ಮೂರು ಬಾರಿ ಚುನಾವಣೆಗೆ ನಿಂತಿರಿ. ಕಾಂಗ್ರೆಸ್ ನಲ್ಲಿ ಹೊಸಬರಿಗೆ ಅವಕಾಶ ಸಾಧ್ಯವೇ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ:ಕಲಬುರಗಿ ಮೇಯರ್ ಚುನಾವಣೆ: ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಕೊಟ್ಟಿಲ್ಲ ಎಂದ ಮುಖಂಡ
ಸಿದ್ದರಾಮಯ್ಯನವರೇ, ಪ್ರಧಾನಿಯ ಸೈದ್ಧಾಂತಿಕ ಹಿನ್ನೆಲೆಯನ್ನು ನೀವು ಪ್ರಶ್ನೆ ಮಾಡಿದ್ದೀರಿ. ಹಾಗಾದರೆ ನಿಮ್ಮ ಸಿದ್ಧಾಂತ ಯಾವುದು? ಜೆಡಿಎಸ್ ಪಕ್ಷದಲ್ಲಿದ್ದಾಗ ದೇವೇಗೌಡರು, ಕಾಂಗ್ರೆಸ್ ಪಕ್ಷಕ್ಕೆ ಬಂದಾಗ ಸೋನಿಯಾ ಗಾಂಧಿ, ಮತರಾಜಕಾರಣಕ್ಜೆ ಟಿಪ್ಪು ಎನ್ನುವುದೇ ನಿಮ್ಮ ಸಿದ್ಧಾಂತವಲ್ಲವೇ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.
ಮಾನ್ಯ ಸಿದ್ದರಾಮಯ್ಯನವರೇ,
ಪ್ರಧಾನಿಯ ಸೈದ್ಧಾಂತಿಕ ಹಿನ್ನೆಲೆಯನ್ನು ನೀವು ಪ್ರಶ್ನೆ ಮಾಡಿದ್ದೀರಿ. ಹಾಗಾದರೆ ನಿಮ್ಮ ಸಿದ್ಧಾಂತ ಯಾವುದು?
ಜೆಡಿಎಸ್ ಪಕ್ಷದಲ್ಲಿದ್ದಾಗ ದೇವೇಗೌಡರು, ಕಾಂಗ್ರೆಸ್ ಪಕ್ಷಕ್ಕೆ ಬಂದಾಗ ಸೋನಿಯಾ ಗಾಂಧಿ, ಮತರಾಜಕಾರಣಕ್ಜೆ ಟಿಪ್ಪು ಎನ್ನುವುದೇ ನಿಮ್ಮ ಸಿದ್ಧಾಂತವಲ್ಲವೇ?#ಬುರುಡೆರಾಮಯ್ಯ
— BJP Karnataka (@BJP4Karnataka) November 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ