ರಾಜ್ಯದ ಖಾಸಗಿ ಶಾಲೆಗಳಲ್ಲಿ ಶೇ. 15ರಷ್ಟು ಶುಲ್ಕ ಹೆಚ್ಚಳ

private schools , fee increase,ಖಾಸಗಿ ಶಾಲೆ,

Team Udayavani, May 16, 2022, 7:05 AM IST

ರಾಜ್ಯದ ಖಾಸಗಿ ಶಾಲೆಗಳಲ್ಲಿ ಶೇ. 15ರಷ್ಟು ಶುಲ್ಕ ಹೆಚ್ಚಳ

ಬೆಂಗಳೂರು: ಎರಡು ವರ್ಷಗಳ ಅನಂತರ ಮಕ್ಕಳು ಪೂರ್ಣಪ್ರಮಾಣದಲ್ಲಿ ತರಗತಿಗಳಿಗೆ ಹಾಜರಾಗಲಿದ್ದಾರೆ ಎನ್ನುವ ಖುಷಿಯಲ್ಲಿ ಶಾಲೆಗೆ ಸೇರಿಸಲು ಬರುತ್ತಿರುವ ಪೋಷಕರಿಗೆ ಆರಂಭದಲ್ಲಿಯೇ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡುವ ಮೂಲಕ ಶಾಕ್‌ ನೀಡಿವೆ.

ನಿರ್ವಹಣೆ ಕಷ್ಟಸಾಧ್ಯ
ಶಾಲೆಗಳು 2019ರಲ್ಲಿ ವಿಧಿಸಿದ್ದ ಶುಲ್ಕದ ಆಧಾರದಲ್ಲಿ ಕನಿಷ್ಠ ಶೇ. 10ರಿಂದ 15ರ ವರೆಗೆ ಶುಲ್ಕ ಹೆಚ್ಚಳ ಮಾಡುವ ಮೂಲಕ ಪೋಷಕರ ಜೇಬಿಗೆ ಕತ್ತರಿ ಹಾಕಿವೆ. ಕಳೆದ ಎರಡು ವರ್ಷಗಳು ಕೊರೊನಾ ಇದ್ದ ಹಿನ್ನೆಲೆಯಲ್ಲಿ ಶುಲ್ಕವನ್ನು ಹೆಚ್ಚಳ ಮಾಡಿಲ್ಲ. ಆದ್ದರಿಂದ ಈ ವರ್ಷ ಕೂಡ ಶುಲ್ಕ ಹೆಚ್ಚಳ ಮಾಡದಿದ್ದರೆ ಶಾಲೆಗಳ ನಿರ್ವಹಣೆ ಕಷ್ಟ ಸಾಧ್ಯವಾಗಿದೆ. ಶುಲ್ಕ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎನ್ನುವುದು ಖಾಸಗಿ ಶಾಲೆಗಳ ವಾದವಾಗಿದೆ.

ಶುಲ್ಕ ಹೆಚ್ಚಳಕ್ಕೆ ಕಾರಣ
ಮೊದಲನೆಯದಾಗಿ ಶಿಕ್ಷಕರಿಗೆ ವೇತನ ಹೆಚ್ಚಳ ಮಾಡಬೇಕಿದೆ. ಸರಕಾರವು ಶಾಲಾ ಕಟ್ಟಡದ ತೆರಿಗೆಯನ್ನು ಶೇ. 25ರಿಂದ ಶೇ. 100ಕ್ಕೆ ಹೆಚ್ಚಳ ಮಾಡಿವೆ. ಕಾಗದದ ಬೆಲೆ ಹೆಚ್ಚಳವಾಗಿರುವ ಕಾರಣ ಪಠ್ಯಪುಸ್ತಕ, ನೋಟ್‌ ಪುಸ್ತಕದ ಬೆಲೆ ಕೂಡ ಏರಿಕೆಯಾಗಿವೆ. ಇದರ ಜತೆಗೆ ಇಂಧನ ಬೆಲೆ ಹೆಚ್ಚಳವಾಗಿರುವುದರಿಂದ ಶಾಲಾ ವಾಹನಗಳಿಗೆ ವಿಧಿಸುವ ಶುಲ್ಕ ಕೂಡ ಹೆಚ್ಚಳ ಮಾಡಬೇಕಿದೆ. ವಿದ್ಯುತ್‌, ನೀರು ಹೀಗೆ ಎಲ್ಲ ಬೆಲೆಗಳು ಹೆಚ್ಚಳವಾಗಿರುವುದರಿಂದ ಶಾಲಾ ಶುಲ್ಕದ ಬೆಲೆಯನ್ನು ಸಹ ಏರಿಸಬೇಕಿದೆ ಎನ್ನುತ್ತಾರೆ ಖಾಸಗಿ ಶಾಲೆಯವರು.

ಹೆಚ್ಚಳ ಸರಿಯಲ್ಲ
ಎರಡು ವರ್ಷಗಳಿಂದ ಪೋಷಕರು ಕೆಲಸಗಳನ್ನು ಕಳೆದುಕೊಂಡು ಜೀವನ ನಡೆಸುವುದಕ್ಕೆ ಕಷ್ಟ ಪಟ್ಟಿದ್ದೇವೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಆನ್‌ಲೈನ್‌ ತರಗತಿಗಳಿಗೆ ಪೂರ್ಣ ಪ್ರಮಾಣದ ಶುಲ್ಕವನ್ನೇ ಪಾವತಿಸಿದ್ದೇವೆ. ಶಿಕ್ಷಣ ಸಂಸ್ಥೆಗಳು ಸತತ ಎರಡು ವರ್ಷ ಆನ್‌ಲೈನ್‌ ಪಾಠ ಮಾಡಿರುವುದರಿಂದ ಶಾಲೆ ನಿರ್ವಹಣೆ ವೆಚ್ಚವನ್ನು ಭರಿಸಿಲ್ಲ. ಶಿಕ್ಷಕರಿಗೂ ವೇತನ ಕಡಿತ ಮಾಡಿದ್ದರು. ಶಾಲೆ ಆರಂಭವಾಗುತ್ತಿದ್ದಂತೆ ಖಾಸಗಿ ಶಾಲೆಗಳು ತಮ್ಮ ಹಳೆಯ ಚಾಳಿ ಮುಂದುವರಿಸಿದ್ದು, ಪೋಷಕರಿಗೆ ಶುಲ್ಕದ ಬರೆ ಎಳೆಯುತ್ತಿರುವುದು ಸರಿಯಲ್ಲ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು.

ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಕರಣ
ಕಳೆದ ಎರಡು ವರ್ಷಗಳು ಕೊರೊನಾ ಸಮಯದಲ್ಲಿಯೂ ನಿಗದಿತ ಶುಲ್ಕವನ್ನು ಖಾಸಗಿ ಶಾಲೆಗಳು ಪಡೆಯಲು ಮುಂದಾಗಿದ್ದವು. ಈ ನಡುವೆ ಮಧ್ಯ ಪ್ರವೇಶ ಮಾಡಿದ್ದ ಸರಕಾರ ಶೇ. 70ರಷ್ಟು ಶುಲ್ಕವನ್ನು ಮಾತ್ರ ಪಡೆಯಬೇಕು ಎನ್ನುವ ನಿಯಮ ರೂಪಿಸಿದ್ದವು. ಅನಂತರ ಖಾಸಗಿ ಶಾಲೆಗಳು ಹೈಕೋರ್ಟ್‌ ಮೆಟ್ಟಿಲೇರಿದ್ದವು. ಶೇ. 15ರಷ್ಟು ಶುಲ್ಕವನ್ನು ಕಡಿತ ಮಾಡುವಂತೆ ಸೂಚಿಸಿ ಹೈಕೋರ್ಟ್‌ ತೀರ್ಪು ನೀಡಿತ್ತು. ಅದರಂತೆ ಶಾಲೆಗಳು ಶುಲ್ಕ ಪಡೆದಿದ್ದವು.

ಎರಡು ವರ್ಷಗಳಿಂದ ಶುಲ್ಕ ಹೆಚ್ಚಳ ಮಾಡಿಲ್ಲ. ನಿಯಮಗಳ ಪ್ರಕಾರ ಶೇ. 15ರಷ್ಟು ಶುಲ್ಕ ಹೆಚ್ಚಳ ಮಾಡಲು ಶಿಕ್ಷಣ ಇಲಾಖೆ ನಿಯಮಗಳಲ್ಲಿ ಇದೆ. ಆದ್ದರಿಂದ ಅನಿವಾರ್ಯವಾಗಿ ಹೆಚ್ಚಳ ಮಾಡಲೇಬೇಕಿದೆ.
-ಡಿ. ಶಶಿಕುಮಾರ್‌, ಕ್ಯಾಮ್ಸ್‌ ಪ್ರಧಾನ ಕಾರ್ಯದರ್ಶಿ

ವಾಣಿಜ್ಯ ಚಟುವಟಿಕೆಗಳು ಈಗಷ್ಟೇ ಚೇತರಿಸಿಕೊಳ್ಳುತ್ತಿರುವುದರಿಂದ ಖಾಸಗಿ ಶಾಲೆಗಳು ಮಾನವೀಯತೆ ಆಧಾರದಲ್ಲಿ ಕಂತುಗಳಲ್ಲಿ ಶುಲ್ಕವನ್ನು ಪಡೆಯುವುದು ಉತ್ತಮ. ಶುಲ್ಕ ಹೆಚ್ಚಳ ಮಾಡಿದರೂ ಹೊರೆಯಾಗದಂತೆ ಪಡೆದರೆ ಪೋಷಕರಿಗೂ ಅನುಕೂಲವಾಗಲಿದೆ.
– ಚಂದ್ರ, ಪೋಷಕ

-ಎನ್‌.ಎಲ್‌. ಶಿವಮಾದು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.