ಪೆರಿಷಬಲ್‌ ಸರಕು ಸಾಗಣೆ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಮೊದಲ ಸ್ಥಾನ


Team Udayavani, Sep 29, 2022, 5:28 PM IST

1-sdaadada

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಎರಡನೇ ಬಾರಿಗೆ ಪೆರಿಷಬಲ್‌ ಸರಕು ಸಾಗಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ.

ಕಳೆದ ವರ್ಷದಲ್ಲಿ 48,130 ಟನ್‌ಗಳಷ್ಟು ಸಾಗಣೆ ಮಾಡುವ ಮೂಲಕ ಮೊದಲ ಸ್ಥಾನದಲ್ಲಿತ್ತು. 2021-22 ಹಣಕಾಸು ವರ್ಷದಲ್ಲಿ 52,366 ಮೆಟ್ರಿಕ್‌ ಟನ್‌ನಷ್ಟು ಬೇಗ ಕ್ಷಯಿಸಬಲ್ಲ ಹಣ್ಣು, ತರಕಾರಿ, ಹೂ ನಂತಹ ಪೆರಿಷಬಲ್‌ ಸರಕು ಸಾಗಣೆ ಮಾಡುವ ಮೂಲಕ ಮತ್ತೊಮ್ಮೆ ಮೊದಲ ಸ್ಥಾನ ಪಡೆದುಕೊಂಡಿದೆ.

ಪ್ರತಿ ನಿತ್ಯ ಬೆಂಗಳೂರಿನಿಂದ 33 ಸರಕು ಸಾಗಣೆ ವಿಮಾನಗಳು ಲಂಡನ್‌, ಸಿಂಗಾಪುರ ಸೇರಿದಂತೆ ಒಟ್ಟು 48 ವಿದೇಶಗಳಿಗೆ ರಫ್ತು ಮಾಡುತ್ತಿದೆ. ದಕ್ಷಿಣ ಭಾರತದಿಂದಲೇ ಒಟ್ಟು ಶೇ.41ರಷ್ಟು ಪ್ರಮಾಣದಲ್ಲಿ ಪೆರಷಬಲ್‌ ಸರಕನ್ನು ರಫ್ತು ಮಾಡಲಾಗಿದೆ. ಅದರಲ್ಲಿ 36, 493 ಎಂ.ಟಿ. ಪೌಲ್ಟ್ರಿ ಹಾಗೂ 1,952 ಎಂ.ಟಿ.ಹೂಗಳನ್ನು ರಫ್ತು ಮಾಡಲಾಗಿದೆ ಎಂದು ಬಿಐಎಎಲ್‌ನ ಮುಖ್ಯ ಡೆವಲಪರ್‌ ಆಫೀಸರ್‌ ಸತ್ಯಕಿ ರಘುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆಯನ್ನು ಇನ್ನಷ್ಟು ಸುಲಭಗೊಳಿಸಲು ಏರ್‌ಪೋರ್ಟ್‌ ಕಾರ್ಗೋ ಕಮ್ಯುನಿಟಿ ಸಿಸ್ಟಂ (ಎಸಿಎಸ್‌)ನನ್ನು ಅಳವಡಿಸಿದ್ದು, ಇದು ಸರಕನ್ನು ಪತ್ತೆ ಮಾಡಲು ಸಹಾಯ ಮಾಡಲಿದ್ದು, ಅನವಶ್ಯಕ ಚೆಕ್ಕಿಂಗ್‌ ಇರುವುದಿಲ್ಲ. ಕೃಷಿ ಸಂಸ್ಕೃರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಇಂಡಿಯನ್‌ ಕಸ್ಟಮ್ಸ್‌, ಪ್ಲಾಂಟ್‌ ಕ್ವಾರೆಂಟೈನ್‌ ಆಫೀಸ್‌ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಕಾರದಿಂದ ಇಂದು ಬಿಐಎಎಲ್‌ ಸರಕು ಸಾಗಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಶ್ಲಾಘಿಸಿದರು.

ಎಪಿಇಡಿಎ ಅಧ್ಯಕ್ಷ ಡಾ.ಎಂ. ಅಂಗಮುತ್ತು ಮಾತನಾಡಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಯಲ್ಲಿ ಕೃಷಿ ಉತ್ಪನ್ನಗಳ ಸಾಗಣೆ ದೊಡ್ಡಮಟ್ಟದಲ್ಲಿ ಸಾಧನೆ ಮಾಡಿರುವುದು ದೇಶಕ್ಕೆ ಕೀರ್ತಿ ತಂದಿದೆ ಎಂದರು. ಪ್ರಸ್ತುತ ಬಿಐಎಎಲ್‌ನಲ್ಲಿ 60 ಸಾವಿರ ಎಂಟಿ ಸಾಮರ್ಥದ ಶೀತಲ ಸರಕನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸುವ ಇಂಗಿತ ಹೊಂದಿದ್ದೇವೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.