ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕ್ರಮ: ಸಿಸಿ ಪಾಟೀಲ್
Team Udayavani, Feb 23, 2023, 6:30 AM IST
ಬೆಂಗಳೂರು: ರಾಜ್ಯದಲ್ಲಿ ಕರಾವಳಿ ಪ್ರದೇಶದಲ್ಲಿ ಆಗಾಗ್ಗೆ ಉಂಟಾಗುವ ಕಡಲ್ಕೊರೆತಕ್ಕೆR ಶಾಶ್ವತ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ತಜ್ಞರ ಸಮಿತಿ ರಚಿಸಲಾಗುವುದು. ಇದಲ್ಲದೆ ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಬಿ.ಎಂ. ಫಾರೂಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಳೆಗಾಲದಲ್ಲಿ ಕಡಲ್ಕೊರೆತದಿಂದ ಸಂಭವಿಸುವ ಅವಘಡಗಳನ್ನು ತಪ್ಪಿಸಲು ತಜ್ಞರ ಸಮಿತಿ ರಚನೆ ಮಾಡುವುದೂ ಸೇರಿದಂತೆ ಅಗತ್ಯ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಉಳ್ಳಾಲ-ಸೋಮೇಶ್ವರ ತೀರ ಪ್ರದೇಶದಲ್ಲಿ ಕಡಲ್ಕೊರತೆದಿಂದ ರಸ್ತೆ ಕೊಚ್ಚಿ ಹೋಗಿರುವುದು ಸರಕಾರದ ಗಮನಕ್ಕೆ ಬಂದಿದೆ. ಕಡಲ್ಕೊರೆತ ತಡೆದ ಮೇಲೆ ರಸ್ತೆ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಆದರೂ, ಅಲ್ಲಿನ ನಿವಾಸಿಗಳು ಮತ್ತು ಮೀನುಗಾರರ ಕುಟುಂಬಗಳಿಗೆ ಸಂಚಾರಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್