ಸಾರಿಗೆ ಸಂಸ್ಥೆ ನಿಲ್ದಾಣಗಳಲ್ಲಿ ಪೆಟ್ರೋಲ್ ಬಂಕ್
Team Udayavani, Feb 17, 2022, 6:35 AM IST
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳಲ್ಲಿ ಪೆಟ್ರೋಲ್ ಬಂಕ್ ಸ್ಥಾಪನೆ, ವಾಣಿಜ್ಯ ಮಳಿಗೆ ನಿರ್ಮಾಣ ಸೇರಿದಂತೆ ಆದಾಯ ಗಳಿಕೆಯ ಪರ್ಯಾಯ ಮಾರ್ಗಗಳತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಎನ್.ಎ. ಹ್ಯಾರೀಸ್ ಪ್ರಸ್ತಾವಕ್ಕೆ ಸಚಿವ ಶ್ರೀರಾಮುಲು ಪರವಾಗಿ ಉತ್ತರಿಸಿದ ಅವರು, ಕೊರೊನಾ ಹಾವಳಿ, ನಾಲ್ಕು ವರ್ಷಗಳಿಂದ ಬಸ್ ದರ ಏರಿಕೆ ಮಾಡದಿರುವುದು, ಡೀಸೆಲ್ ದರ ಹೆಚ್ಚಳ ಕಾರಣಗಳಿಂದ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಇದನ್ನು ಲಾಭದಾಯಕ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಬಸ್ ನಿಲ್ದಾಣಗಳಲ್ಲಿ ಭವನ ನಿರ್ಮಿಸಿ ಆಸ್ಪತ್ರೆ ಸೇರಿದಂತೆ ಸಾರ್ವಜನಿಕ ಸೇವೆಯ ಸಂಸ್ಥೆಗಳಿಗೆ ಬಾಡಿಗೆಗೆ ನೀಡುವುದು ಮತ್ತಿತರ ಹಲವು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ತೆರಿಗೆ ವಂಚನೆ ಆರೋಪ; ಚೀನದ ಹುವಾಯ್ ಕಚೇರಿಗಳ ಮೇಲೆ ಐಟಿ ದಾಳಿ
ನಷ್ಟ: ಅಧ್ಯಯನ ನಡೆಸಿ
ಇದಕ್ಕೂ ಮುನ್ನ ಮಾತನಾಡಿದ ಹ್ಯಾರೀಸ್, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನಷ್ಟಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಅಧ್ಯಯನ ನಡೆಸಲು ಜಂಟಿ ಸದನ ಸಮಿತಿ ರಚಿಸಿ. ಮೂರು ವರ್ಷಗಳಲ್ಲಿ ನಾಲ್ಕೂ ನಿಗಮಗಳು 2900 ಕೋಟಿ ರೂ. ನಷ್ಟ ಅನುಭವಿಸಿವೆ. ನಾಲ್ಕೈದು ಬಸ್ ಇಟ್ಟುಕೊಂಡಿರುವವರು ಇಂದು ಲಾಭದಲ್ಲಿದ್ದಾರೆ. ಆದರೆ, ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಎಂದರು. ಇದಕ್ಕೆ ಮಧ್ಯಪ್ರವೇಶಿಸಿದ ಸ್ಪೀಕರ್ ಕಾಗೇರಿ, ಸಾರಿಗೆ ಸಂಸ್ಥೆಗಳು ಲಾಭಕ್ಕೆ ಬರುವ ಆಶಾಭಾವನೆ ಇದೆಯಾ ನಿಮಗೆ. ನಮ್ಮಲ್ಲಿ ಬಿಳಿ ಆನೆಗಳು ಸಾಕಷ್ಟಿವೆಯಲ್ಲವೇ, ಅವುಗಳನ್ನೇನು ಮಾಡೋದು ಎಂದು ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ