ಪಿಎಫ್ಐ 2ನೇ ಹಂತದ ನಾಯಕರು ಸಕ್ರಿಯ ಹೊಸ ಹೆಸರಿನಲ್ಲಿ ಮತ್ತೆ ಮುಖ್ಯವಾಹಿನಿಗೆ ಬರಲು ಸಿದ್ಧತೆ


Team Udayavani, Feb 25, 2023, 7:30 AM IST

ಪಿಎಫ್ಐ 2ನೇ ಹಂತದ ನಾಯಕರು ಸಕ್ರಿಯ ಹೊಸ ಹೆಸರಿನಲ್ಲಿ ಮತ್ತೆ ಮುಖ್ಯವಾಹಿನಿಗೆ ಬರಲು ಸಿದ್ಧತೆ

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿದ್ದರೂ ಅದರ ಎರಡನೇ ಹಂತದ ನಾಯಕರು ಈಗಲೂ ಸಕ್ರಿಯವಾಗಿದ್ದು, ಹೊಸ ಮಾದರಿ ಅಥವಾ ಹೊಸ ಸಂಘಟನೆ ಹೆಸರಿನಲ್ಲಿ ಮತ್ತೆ ಮುಖ್ಯವಾಹಿನಿಗೆ ಬರಲು ಸಿದ್ಧತೆ ನಡೆಸುತ್ತಿದ್ದಾರೆಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಸಂಘಟನೆ ನಿಷೇಧದ ಘೋಷಣೆ ಹೊರಬೀಳುತ್ತಿದ್ದಂತೆ ಎರಡನೇ ಹಂತದ ನಾಯಕರನ್ನು ಉದ್ದೇಶಪೂರ್ವಕವಾಗಿ ಭೂಗತಗೊಳಿಸಲಾಗಿತ್ತು. ಅಂತಹ ನಾಯಕರು, ಈಗಲೂ ತಮ್ಮ ಸಂಘಟನ ಕಾರ್ಯ ಮುಂದುವರಿಸುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ವರ್ಷ ಬರುವ ಲೋಕಸಭೆ ಚುನಾವಣೆಯ ಕಾರ್ಯತಂತ್ರ ರೂಪಿಸಲು ಸಜ್ಜಾಗಿದ್ದಾರೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಕೇಂದ್ರ ಗುಪ್ತಚರ ಹಾಗೂ ಇತರ ತನಿಖಾ ಸಂಸ್ಥೆಗಳು ಎಲ್ಲ ರಾಜ್ಯ ಗುಪ್ತಚರ ವಿಭಾಗಗಳಿಗೆ ಅಂತಹ ವ್ಯಕ್ತಿಗಳ ಮೇಲೆ ನಿಗಾ ಇರಿಸುವಂತೆ ಸೂಚಿಸಿದೆ.

ಆರೇಳು ತಿಂಗಳ ಹಿಂದೆಯೇ ನಿಷೇಧದ ನಿರೀಕ್ಷೆ ಹೊಂದಿದ್ದ ಸಂಘಟನೆಯ ಮುಖ್ಯಸ್ಥರು, ಆಗಲೇ 2ನೇ ಹಂತದ ನಾಯಕರನ್ನು ಸಂಘಟನೆಯಿಂದ ಉಚ್ಛಾಟಿಸುವ ನಾಟಕವಾಡಿ ಭೂಗತಗೊಳಿಸಿದ್ದರು. ಈಗ ಈ ನಾಯಕರೇ ಮತ್ತೂಮ್ಮೆ ತಮ್ಮ ಸಿದ್ಧಾಂತವನ್ನು ಪ್ರತಿಪಾದಿಸುವ ಮತ್ತೂಂದು ಸಂಘಟನೆ ಸ್ಥಾಪಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕೋಮು ಸಂಘರ್ಷ ಸೃಷ್ಟಿಗೆ ಸಿದ್ಧತೆ
ಸಂಘ ಟನೆ ನಿಷೇಧದಿಂದಾಗಿ ಅತೃಪ್ತಿ ಗೊಂಡಿರುವ ಕಾರ್ಯಕರ್ತರು ಮುಂಬ ರುವ ಎಲ್ಲ ರಾಜ್ಯ ಗಳ ವಿಧಾನಸಭೆ ಮತ್ತು ಲೋಕ ಸಭೆ ಚುನಾ ವಣೆ ವೇಳೆ ಕೋಮು ಸಂಘ ರ್ಷಕ್ಕೆ ಯೋಜನೆ ರೂಪಿಸಿದ್ದಾರೆ. ಅಧಿಕೃತವಾಗಿ ಪಿಎಫ್ಐ ಸಂಘಟನೆ ಎಂದು ಹೇಳಿಕೊಳ್ಳದಿದ್ದರೂ ಅದರ ಸಿದ್ಧಾಂತಗಳನ್ನು ಅನುಸರಿಸುವ, ಪ್ರಚಾರ ಮಾಡುವ ಕಾರ್ಯಕರ್ತರನ್ನು ಹುಟ್ಟುಹಾಕುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಅಂತಹ ಕಾರ್ಯಕರ್ತರು ಅಥವಾ ನಾಯಕರನ್ನು ಪತ್ತೆ ಹಚ್ಚುವುದು ಸವಾಲಾಗಿದೆ. ಅದನ್ನು ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯ ಸಂಗ್ರಹಿಸಬೇಕಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ಮಾದರಿಯ ಸಂಘಟನೆ?
ಭೂಗತ ನಾಯಕರನ್ನು ಸಂಘಟನೆಯಿಂದ ಉಚ್ಛಾಟಿಸುವ ನಾಟಕ ಮಾಡಲಾಗಿತ್ತು. ಜತೆಗೆ ಕೆಲವು ನಾಯಕರನ್ನು ಸಂಘಟನೆಯ ಮುಖ್ಯವಾಹಿನಿಯಲ್ಲಿ ಪರಿಚಯಿಸದೆ, ಸಂಘಟನ ಕಾರ್ಯಗಳನ್ನು ವಹಿಸಿತ್ತು. ಅಂತಹ ನಾಯಕರು, ಸಂಘಟನೆಯನ್ನು ಹೊಸ ಮಾದರಿ ಅಥವಾ ಹೊಸ ಹೆಸರಿನಲ್ಲಿ ಸ್ಥಾಪಿಸಲು ರೂಪುರೇಷೆ ಸಿದ್ಧಪಡಿಸಿದ್ದಾರೆ. ಉಚ್ಛಾಟಿತ ಹಾಗೂ ಭೂಗತ ನಾಯಕರ ಜತೆ ಈಗಲೂ ಸಂಪರ್ಕದಲ್ಲಿದ್ದಾರೆ. ಸಮುದಾಯದ ಯುವಕರನ್ನು ತೀವ್ರಗಾಮಿಗಳಂತೆ ಪರಿವರ್ತಿಸುತ್ತಿದ್ದಾರೆ. ಜತೆಗೆ ಸಂಘಟನೆ ಅಂಗ ಸಂಸ್ಥೆಗಳ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಹೊಸ ಸಂಘಟನೆ ಸ್ಥಾಪಿಸುವ ಚರ್ಚೆ ನಡೆಯುತ್ತಿದೆ. ಇದು ಮುಂದಿನ ದಿನಗಳಲ್ಲಿ ನಿಷೇಧಿತ ಉಗ್ರ ಸಂಘಟನೆ ಕಾರ್ಯಕರ್ತರ ಜತೆ ಸಂಪರ್ಕ ಹಾಗೂ ವಿದೇಶಿ ದೇಣಿಗೆ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಶೋಧ ಮುಂದುವರಿಕೆ
ನಿಷೇಧಿತ ಪಿಎಫ್ಐ ಸಂಘಟನೆಯ ಒಂದು ಹಂತದ ಮುಖಂಡರನ್ನು ಬಂಧಿಸಲಾಗಿದೆ. ಆದರೆ ಅದರ ಅಂಗಸಂಸ್ಥೆಗಳ ಕಾರ್ಯಕರ್ತರು ಹಾಗೂ ಎರಡನೇ ಹಂತದ ನಾಯಕರ ಪತ್ತೆ ಕಾರ್ಯ ಈಗಲೂ ನಡೆಯುತ್ತಿದೆ. ಸ್ಥಳೀಯ ಪೊಲೀಸರು, ರಾಜ್ಯ ಮತ್ತು ಕೇಂದ್ರ ಗುಪ್ತಚರ ಇಲಾಖೆ ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರ ಶೋಧ ಕಾರ್ಯದಲ್ಲಿ ತೊಡಗಿವೆ ಎಂದು ಮೂಲಗಳು ತಿಳಿಸಿವೆ.

– ಮೋಹನ್‌ ಭದ್ರಾವತಿ

 

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.