ಕೆಎಸ್‌ಎಫ್ಸಿಗೆ ಅನುಕಂಪ ಆಧಾರಿತ ನೇಮಕವಿಲ್ಲ


Team Udayavani, Feb 10, 2017, 3:45 AM IST

siddu-1.jpg

ವಿಧಾನ ಪರಿಷತ್‌: ಕರ್ನಾಟಕ ರಾಜ್ಯ ಹಣಕಾಸು ನಿಗಮದ (ಕೆಎಸ್‌ಎಫ್ಸಿ) ಕ್ರೋಡೀಕೃತ ನಷ್ಟ ಮೊತ್ತ ಹೆಚ್ಚಾಗಿರುವುದು ಹಾಗೂ ಈಗಾಗಲೇ ಅಗತ್ಯಕ್ಕಿಂತ ಹೆಚ್ಚು ನೌಕರ, ಸಿಬ್ಬಂದಿಯಿರುವುದರಿಂದ ಅನುಕಂಪದ ಆಧಾರದ ಮೇಲೆ ನೇಮಕ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ಪ್ರಶ್ನೋತ್ತರದ ವೇಳೆ ಜೆಡಿಎಸ್‌ನ ಬಸವರಾಜ ಹೊರಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, “ಕೆಎಸ್‌ಎಫ್ಸಿಯಲ್ಲಿ ಈಗಾಗಲೇ 925 ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ಅಗತ್ಯಕ್ಕಿಂತ 250 ಮಂದಿ ಹೆಚ್ಚಾಗಿದ್ದಾರೆ. ಆ ಹಿನ್ನೆಲೆಯಲ್ಲಿ 147 ಮಂದಿಯನ್ನು ಬೇರೆ ಇಲಾಖೆಗಳಿಗೆ ಕಳುಹಿಸಲಾಗಿದ್ದು, ಹೀಗಿರುವಾಗ ಅನುಕಂಪದ ಆಧಾರದ ಮೇಲೆ ನೇಮಕಕ್ಕೆ ಅವಕಾಶವಿಲ್ಲ’ ಎಂದರು.

ನಿಗಮವು 2001-02ನೇ ಸಾಲಿನಿಂದ ಈವರೆಗೆ 2001-02, 2002-03 ಹಾಗೂ 2008-09ನೇ ಸಾಲಿನಲ್ಲಿ ನಿವ್ವಳ ನಷ್ಟ ಅನುಭವಿಸಿದ್ದು ಹೊರತುಪಡಿಸಿದರೆ ಉಳಿದ ವರ್ಷಗಳಲ್ಲಿ ನಿವ್ವಳ ಲಾಭ ಗಳಿಸಿದೆ. ಆದರೆ ಕ್ರೋಡೀಕೃತ ನಷ್ಟ ಪ್ರಮಾಣ ಈವರೆಗೆ 437 ಕೋಟಿ ರೂ. ಇದೆ. ಹೊಸ ನೇಮಕ ಮಾಡಿಕೊಳ್ಳಬೇಕಾದರೆ ನಿಗಮವು ಸತತ 3 ವರ್ಷ ಲಾಭ ಗಳಿಸಬೇಕು ಹಾಗೂ 3 ವರ್ಷಗಳ ಲಾಭ ಪ್ರಮಾಣ ಕ್ರೋಡೀಕೃತ ನಷ್ಟ ಪ್ರಮಾಣದ ಶೇ.30ಕ್ಕಿಂತಲೂ ಹೆಚ್ಚು ಇರಬೇಕು ಎಂಬ ಷರತ್ತು ಇದೆ. ಆ ಹಿನ್ನೆಲೆಯಲ್ಲಿ ನಿಗಮದ ಮಂಡಳಿ ಸಭೆಯಲ್ಲಿ 2009ರ ಮಾ.9ರಿಂದ ಅನುಕಂಪದ ಆಧಾರದ ಮೇಲೆ ನೇಮಕಾತಿ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು.

ಇದಕ್ಕೆ ಸಮಾಧಾನಗೊಳ್ಳದ ಬಿಜೆಪಿಯ ಕೆ.ಬಿ.ಶಾಣಪ್ಪ, “ವಿಶ್ವವಿದ್ಯಾಲಯಗಳು, ಖಾಸಗಿ ಸಂಸ್ಥೆಗಳಲ್ಲಿ ಅನುಕಂಪ ಆಧಾರದ ಮೇಲೆ ನೇಮಕ ನಡೆಯುತ್ತಿದ್ದು, ಸರ್ಕಾರಕ್ಕೆ ಏಕೆ ಸಾಧ್ಯವಾಗುವುದಿಲ್ಲ’ ಎಂದು ಪ್ರಶ್ನಿಸಿದರು. ಇದಕ್ಕೆ ಬಸವರಾಜ ಹೊರಟ್ಟಿ ಧ್ವನಿಗೂಡಿಸಿದರು. ಆಗ ಬಿಜೆಪಿಯ ರಾಮಚಂದ್ರಗೌಡ, “ಶಾಸಕರು, ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಅನುಕಂಪದ ಆಧಾರದ ಮೇಲೆ ಟಿಕೆಟ್‌ ನೀಡಲಾಗುವುದು. ಇನ್ನೂ ಕೆಲವರು ಅನುಕಂಪದ ಆಧಾರದ ಮೇಲೆ
ಪ್ರಧಾನಿ ಕೂಡ ಆಗಿದ್ದಾರೆ’ ಎಂದರು. ಆಗ ಸಿಎಂ, “ಪ್ರಧಾನಿ ಮೋದಿ ಅವರು ಯಾವ ಅನುಕಂಪದ ಮೇಲೆ ಆರಿಸಿ ಬಂದಿದ್ದಾರೆ’ ಎಂದು ನಗುತ್ತಲೇ ಪ್ರಶ್ನಿಸಿದರು. “ಅದಕ್ಕೆಲ್ಲಾ ನಿಯಮದಲ್ಲಿ ಅವಕಾಶವಿಲ್ಲ’ ಎನ್ನುವ ಮೂಲಕ ಚರ್ಚೆಗೆ ತೆರೆ ಎಳೆದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.