ಎಲ್ಲ ಜಿಲ್ಲೆಗಳಲ್ಲೂ ಪ್ಲಾಸ್ಮಾ ಥೆರಪಿ: ಶ್ರೀರಾಮುಲು
Team Udayavani, May 2, 2020, 6:20 AM IST
ಹಾಸನ: ಕೋವಿಡ್-19 ರೋಗಿಗಳಿಗೆ ಪಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೋವಿಡ್-19 ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.
ನಗರದಲ್ಲಿ ಕೋವಿಡ್-19 ನಿಯಂತ್ರಣದ ಪರಿಶೀಲನ ಸಭೆ ನಡೆಸಿದ ಅನಂತರ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳಿಗೆ ವೆಂಟಿಲೇಟರ್ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಕೋವಿಡ್-19 ನಿಯಂತ್ರಣಕ್ಕೆ ಬಿಡುಗಡೆ ಮಾಡುವ ಅನುದಾನದಲ್ಲಿ ವೆಂಟಿ ಲೇಟರ್ ಖರೀದಿಸಲಾಗುವುದು. ಸಂಸದರು, ಶಾಸಕರ ಕ್ಷೇತ್ರಾಭಿವೃದ್ದಿ ನಿಧಿಯನ್ನು ಬಳಸಿಕೊಂಡು ವೆಂಟಿಲೇಟರ್ ಖರೀದಿ ಮಾಡಬಹುದು ಎಂದು ಸರಕಾರ ಸೂಚಿಸಿದೆ.
ಕೋವಿಡ್-19 ರೋಗಿಗಳಿಗೆ ಇದುವರೆಗೂ ವೆಂಟಿಲೇಟರ್ ಅಗತ್ಯ ಹೆಚ್ಚಾಗಿ ಕಂಡು ಬಂದಿಲ್ಲ. ಆದರೂ ವಿವಿಧ ಸಂದರ್ಭಗಳಲ್ಲಿ ವೆಂಟಿಲೇಟರ್ ಅಗತ್ಯ ಇರುವುದರಿಂದ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.