ಶಿವಮೊಗ್ಗ ಸ್ಫೋಟ ಪ್ರಕರಣ: ಪ್ರಧಾನಿ ಮೋದಿ ಸಂತಾಪ, ತನಿಖೆಗೆ ಎಚ್ ಡಿಕೆ ಆಗ್ರಹ
Team Udayavani, Jan 22, 2021, 9:05 AM IST
ಬೆಂಗಳೂರು: ಶಿವಮೊಗ್ಗದ ಹುಣಸೋಡು ಬಳಿ ಕಲ್ಲುಗಣಿಗಾರಿಕೆಯಲ್ಲಿ ನಡೆದ ಸ್ಫೋಟದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಿಎಂಓ ಆಫ್ ಇಂಡಿಯಾ, ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಶೀಘ್ರವೇ ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ತನಿಖೆಗೆ ಎಚ್ ಡಿಕೆ ಆಗ್ರಹ: ಘಟನೆಯ ಬಗ್ಗೆ ನೋವು ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ ಸ್ಪೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಎಚ್ ಡಿಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್
ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿ
ಅನಾರೋಗ್ಯ : ಮನನೊಂದ ಯುವಕ ಕಂದವಾರ ಕೆರೆಗೆ ಹಾರಿ ಆತ್ಮಹತ್ಯೆ
72ರ ವೃದ್ಧನ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ: ಕಾನೂನು ಸಲಹೆ ಪಡೆಯಲು ಹೈಕೋರ್ಟ್ ಸೂಚನೆ
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
IPL ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ : ಲೀಗ್ ಹಂತದಲ್ಲಿ ಮುಂಬಯಿ ಅಜೇಯ
ಐಪಿಎಲ್ಗೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ