ಇಂದು ಖರ್ಗೆ ಶಕ್ತಿ ಕೇಂದ್ರದಲ್ಲಿ ಮೋದಿ ಬೃಹತ್ ರ್ಯಾಲಿ
Team Udayavani, Mar 6, 2019, 12:30 AM IST
ಕಲಬುರಗಿ: ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಭದ್ರಕೋಟೆಯಾದ ಕಲಬುರಗಿಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ ರಾಜ್ಯದಲ್ಲಿ ನಡೆ ಯುವ ಕಾರ್ಯಕ್ರಮ ಇದಾಗಿದೆ. ಮಲ್ಲಿಕಾರ್ಜುನ ಖರ್ಗೆಯವ ರನ್ನು ಈ ಬಾರಿ ಸೋಲಿಸಲೇಬೇಕು ಎನ್ನುವ ಬಿಜೆಪಿ ಇರಾದೆಯಿಂದಾಗಿ ಈ ಕಾರ್ಯಕ್ರಮ ರಾಜಕೀಯ ಮಹತ್ವ ಪಡೆದಿದೆ. ಇದಕ್ಕೆ ಪೂರಕವಾಗಿ, ಖರ್ಗೆ ಎದುರು ಸ್ಪರ್ಧಿಸುವ ಉದ್ದೇಶದಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಡಾ. ಉಮೇಶ ಜಾಧವ್ ಈ ಸಂದರ್ಭದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ “ಆಯುಷ್ಮಾನ್ ಭಾರತ ಯೋಜನೆ’ ಫಲಾನುಭವಿ ಗಳೊಂದಿಗೆ ಸಂವಾದ, ಬಿಪಿಸಿಎಲ್ ಡಿಪೋಗೆ ಭೂಮಿ ಪೂಜೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ನೂತನ ವಿದ್ಯಾಲಯದ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ.
ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ಬೃಹತ್ ರ್ಯಾಲಿ ಮೂಲಕ ಚುನಾವಣೆ ಕಹಳೆ ಮೊಳಗಿಸಿದ್ದ ಪ್ರಧಾನಿಯವರು, ಹೈದರಾಬಾದ್ -ಕರ್ನಾಟಕ ಭಾಗದ, ಕಾಂಗ್ರೆಸ್ ಪ್ರಾಬಲ್ಯವಿರುವ ಕಲಬುರಗಿಯಲ್ಲಿ ಈ ಕಾರ್ಯಕ್ರಮ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!