PM ಮೋದಿ ”ಸುಳ್ಳಿನ ಕಂತೆ” ಆರೋಪಕ್ಕೆ ಸಾಕ್ಷ್ಯ ನೀಡಲಿ: ಸಿದ್ದರಾಮಯ್ಯ ಆಕ್ರೋಶ
ಅವರು 48 ಬಾರಿ ರಾಜ್ಯಕ್ಕೆ ಬಂದರು, ಆದರೆ... ಶೀಘ್ರ ಹಲವರು ಕಾಂಗ್ರೆಸ್ ಸೇರ್ಪಡೆ
Team Udayavani, Nov 6, 2023, 6:52 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಕಾಂಗ್ರೆಸ್ ಸರಕಾರ ಸುಳ್ಳಿನ ಕಂತೆ” ಎಂದು ಟೀಕಿಸಿದುದರ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಆಕ್ರೋಶ ಹೊರ ಹಾಕಿದ್ದು ‘ದೇಶದ ಪ್ರಧಾನಿಯಿಂದ ಈ ರೀತಿಯ ಹೇಳಿಕೆಯನ್ನು ನಾನು ನಿರೀಕ್ಷಿಸಿರಲಿಲ್ಲ, ಮಾಡಿದ ಆರೋಪಗಳಿಗೆ ಪುರಾವೆಗಳನ್ನು ನೀಡಲಿ ಎಂದು ಸವಾಲು ಹಾಕಿದ್ದಾರೆ.
ಮಧ್ಯಪ್ರದೇಶದಲ್ಲಿ ಪ್ರಧಾನಿಯವರು ನೀಡಿದ ಹೇಳಿಕೆ ಸುಳ್ಳಿನ ರಾಜಕೀಯ ಮತ್ತು ಚುನಾವಣ ಭಾಷಣ, ಸಂಪೂರ್ಣವಾಗಿ ಸುಳ್ಳಿನ ಕಂತೆ. ಅವರು ರಾಜ್ಯದಲ್ಲಿ ಬಿಜೆಪಿ ಸೋತ ನಂತರ ನಿರಾಶೆಗೊಂಡಿದ್ದಾರೆ. ಅವರು 48 ಬಾರಿ ರಾಜ್ಯಕ್ಕೆ ಬಂದರು, ಆದರೆ ಅವರು ಪ್ರಚಾರಕ್ಕೆ ಹೋದಲ್ಲೆಲ್ಲಾ, ರೋಡ್ಶೋ ಮತ್ತು ಸಭೆಗಳನ್ನು ಉದ್ದೇಶಿಸಿ ಮಾತನಾಡಿದಲ್ಲೆಲ್ಲ ಬಿಜೆಪಿ ಸೋತಿದೆ. ಈ ಕಾರಣಕ್ಕಾಗಿಯೇ ಅವರು ಇಂದಿನವರೆಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನು ನೇಮಿಸಿಲ್ಲ, ”ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ನಾಯಕರು ಲೂಟಿ ಮಾಡಿದ್ದಾರೆ ಎಂಬ ಪ್ರಧಾನಿಯವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಲೂಟಿ ನಡೆದಾಗ ಯಾವ ಪಕ್ಷದ ಸರ್ಕಾರ ಅಧಿಕಾರದಲ್ಲಿತ್ತು? ನಾವು ಅದನ್ನು ತನಿಖೆ ಮಾಡುತ್ತಿದ್ದೇವೆ.ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಅದರ ಬಗ್ಗೆ ಸರಿಯಾಗಿ ಮಾತನಾಡಬೇಕಲ್ಲವೇ ” ಎಂದರು.
ಸಾಕ್ಷ್ಯಾಧಾರಗಳು ಅಥವಾ ದಾಖಲೆಗಳ ಸಮೇತ ಮೋದಿ ಆರೋಪ ಮಾಡಬಹುದು, ಪ್ರಧಾನಿಯಾಗಿರುವ ಅವರು ಸುಳ್ಳು ಮಾತನಾಡಬಾರದು, ಹಗುರವಾಗಿ ಮಾತನಾಡಬಾರದು. ಯಾವುದೇ ಪುರಾವೆಗಳು ಅಥವಾ ದಾಖಲೆಗಳಿದ್ದರೆ, ಅವರ ಬಳಿ IB, RAW, CBI, ಗುಪ್ತಚರ ಇಲಾಖೆಗೆ ಅವರು ಹೇಳಲಿ” ಎಂದು ಸವಾಲು ಹಾಕಿದರು.
ಹಲವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ
ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಮತ್ತು ತಮ್ಮ ಪಕ್ಷವು ಆಪರೇಷನ್ ಹಸ್ತದಲ್ಲಿ ತೊಡಗಿಲ್ಲ ಎಂದು ಪ್ರತಿಪಾದಿಸಿದರು.
ಸರಕಾರ ಎರಡೂವರೆ ವರ್ಷ ಪೂರೈಸಿದ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಅವರು ಬದ್ಧನಾಗಿರುತ್ತೇನೆ ಎಂದರು.
ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಇತ್ತೀಚೆಗೆ ಉಪಹಾರ ಸಭೆಯ ಕುರಿತು ಮಾತನಾಡಿ, ಆಯಾ ಪ್ರದೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ