POCSO case; ಮುರುಘಾ ಶರಣರ ಬಿಡುಗಡೆಗೆ ನ್ಯಾಯಾಲಯ ಆದೇಶ
Team Udayavani, Nov 15, 2023, 7:25 PM IST
ಚಿತ್ರದುರ್ಗ: ಕಳೆದ 14 ತಿಂಗಳಿಂದ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಬಿಡುಗಡೆಗೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಮೊದಲ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಶ್ಯೂರಿಟಿಗಳ ಪರಿಶೀಲನೆ ನಂತರ ಬಿಡುಗಡೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲ ಆದೇಶ ಮಾಡಿದರು.ಮುರುಘಾ ಶರಣರ ಪರವಾಗಿ ಹೈಕೋರ್ಟ್ ನ್ಯಾಯವಾದಿ ಸಂದೀಪ್ ಪಾಟೀಲ್ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಿದರು. ನ್ಯಾಯಾಲಯದ ಎಲ್ಲ ಪ್ರಕ್ರಿಯೆಗಳು ಮುಗಿದು ಕಾರಾಗೃಹಕ್ಕೆ ಆದೇಶ ಪ್ರತಿ ತಲುಪಿದರೆ ಶರಣರು ಇಂದೇ ಹೊರಗೆ ಬರಲಿದ್ದಾರೆ.
ನ್ಯಾಯಾಲಯದ ಕಲಾಪಗಳ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂದೀಪ್ ಪಾಟೀಲ್, ಹೈಕೋರ್ಟ್ ಜಾಮೀನು ಆದೇಶದಂತೆ ಇಂದು ಮೊದಲನೇ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಮಂಜೂರಾಗಿದ್ದು, ಜಿಲ್ಲಾ ನ್ಯಾಯಾಲಯ ಬಿಡುಗಡೆ ಆಗಲಿದ್ದಾರೆ ಎಂದು ತಿಳಿಸಿದರು.
ಇನ್ನೂ ಎರಡನೇ ಪ್ರಕರಣದಲ್ಲಿ ಅರೆಸ್ಟ್ ಅಥವಾ ಕಸ್ಟಡಿಗೆ ಹೋಗಿರಲಿಲ್ಲ. ಅದರಲ್ಲಿ ತನಿಖೆ ಮುಗಿದಿದೆ, ಚಾರ್ಜ್ ಶೀಟ್ ಹಾಕಲಾಗಿದೆ. ಆದರೂ, ಸರ್ಕಾರಿ ವಕೀಲರು ನ್ಯಾಯಾಂಗ ಬಂಧನಕ್ಕೆ ಕೇಳಿದ್ದರು.ತನಿಖೆಯ ವ್ಯಾಪ್ತಿ ಮುಗಿದು ಹೋಗಿದೆ. ಬಾಡಿ ವಾರೆಂಟ್ (ಪ್ರೊಡಕ್ಷನ್ ಅಂಡ್ ಟ್ರಾನ್ಸಿಟ್) ಆದೇಶ ಇದ್ದರೂ ಅವರನ್ನು ಕಾರಾಗೃಹದಲ್ಲಿ ಇಡುವಂತಿಲ್ಲ ಎಂದು ಅಭಿಪ್ರಾಯಪಟ್ಟರು.
ಎರಡನೇ ಪೋಕ್ಸೊ ಪ್ರಕರಣದಲ್ಲಿ ಸರ್ಕಾರಿ ವಕೀಲರು ನಾಳೆಯವರೆಗೆ ಬಾಡಿ ವಾರೆಂಟ್ ಮುಂದುವರೆಸಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ