ಇನ್ನು ಗಣಿ ಅಧಿಕಾರಿಗಳಿಗೆ ಪೊಲೀಸ್ ಡ್ರೆಸ್, ದರ್ಜೆಗೆ ತಕ್ಕಂತೆ ಸ್ಟಾರ್:ಮುರುಗೇಶ್ ನಿರಾಣಿ


Team Udayavani, Mar 29, 2021, 3:30 PM IST

ಇನ್ನು ಗಣಿ ಅಧಿಕಾರಿಗಳಿಗೆ ಪೊಲೀಸ್ ಡ್ರೆಸ್, ದರ್ಜೆಗೆ ತಕ್ಕಂತೆ ಸ್ಟಾರ್:ಮುರುಗೇಶ್ ನಿರಾಣಿ

ಬೆಂಗಳೂರು: ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳುವ ಕಾರಣದಿಂದ ಗಣಿ ಅಧಿಕಾರಿಗಳಿಗೆ ಪೊಲೀಸ್ ಡ್ರೆಸ್ ನೀಡಲಾಗುವುದು. ಅವರ ದರ್ಜೆಗೆ ತಕ್ಕ ಸ್ಟಾರ್ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಅಧಿಕಾರಿಗಳಿಗೆ ಡ್ರೆಸ್ ಇರುವಂತೆ ಗಣಿ ಅಧಿಕಾರಿಗಳಿಗೂ ಸಮವಸ್ತ್ರವಿದ್ದರೆ ಶಿಸ್ತು ಬರುತ್ತದೆ.  ಗಣಿಗಾರಿಕೆ ಹೆಚ್ಚಿರುವ ಪ್ರದೇಶಗಳಲ್ಲಿ ನಿವೃತ್ತ ಮಿಲಿಟರಿ ಅಧಿಕಾರಿಗಳನ್ನು ನೆಮಿಸಿಕೊಳ್ಳಲು ಚರ್ಚೆ ನಡೆಯುತ್ತಿದೆ. ಸೆಕ್ಯುರಿಟಿ ಹೊರಗುತ್ತಿಗೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ತುಮಕೂರು, ಪ್ರತಿ ಜಿಲ್ಲೆಗೆ ಐದು ಜನರನ್ನು ನೇಮಿಸಿಕೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಸುಮಾರು 2000 ಕ್ಕೂ ಹೆಚ್ಚು ಗಣಿ ಮಾಲೀಕರಿಗೆ ಪರವಾನಗಿ ಇಲ್ಲ. ಅವರು ಮೂರು ತಿಂಗಳು ಸಮಯ ಕೋರಿದ್ದಾರೆ. ಈ ಬಗ್ಗೆ ಸಿಎಂ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಕ್ರಷರ್ ಸ್ಥಗಿತ ಆಗುವುದರಿಂದ ನಿರುದ್ಯೋಗ ಸಮಸ್ಯೆ, ಅಭಿವೃದ್ಧಿಗೆ ಹಿನ್ನೆಡೆ ಹಾಗೂ ಹೊರ ರಾಜ್ಯದ ಕ್ರಷರ್ ಮಾಲಿಕರು ಹೆಚ್ಚಿನ ದರಕ್ಕೆ ಬಂದು ಮಾರಾಟ ಮಾಡುತ್ತಿದ್ದಾರೆ. ಮೂರು ತಿಂಗಳ ಒಳಗಾಗಿ ಡಿಜಿಎಂಎಸ್ ಪರವಾನಗಿ ಪಡೆಯಬೇಕು. ಕಡ್ಡಾಯವಾಗಿ 90 ದಿನದಲ್ಲಿ ತೆಗೆದುಕೊಳ್ಳುವ ಪತ್ರ ನೀಡಬೇಕು. ಈಗಾಗಲೆ ಡಿಜಿಎಂಎಸ್ ಪರವಾನಗಿ ಹೊಂದಿದರೊಂದಿಗೆ ಒಪ್ಪಂದ ಮಾಡಿಕೊಂಡಿರುವ ಪತ್ರ ನೀಡಬೇಕು ಎಂದರು.

ಇದನ್ನೂ ಓದಿ:ಕೋವಿಡ್ ಸೋಂಕು ಪ್ರಯೋಗಾಲಯದಿಂದ ಸೋರಿಕೆಯಾಗಿಲ್ಲ: ವಿಶ್ವಸಂಸ್ಥೆ, ಚೀನಾ ವರದಿಯಲ್ಲೇನಿದೆ?

2 ಕೆಜಿ ವರೆಗೂ ಸ್ಫೋಟಕ ಬಳಕೆ ಮಾಡಿಕೊಳ್ಳಲು ಅವಕಾಶ ಇದಕ್ಕೆ ಡಿಜಿಎಂಎಸ್ ಅನುಮತಿ ಅಗತ್ಯವಿಲ್ಲ. ಐದು ಎಕರೆಗಿಂತ ಕಡಿಮೆ ಜಮೀನಿನಲ್ಲಿ ಗಣಿಗಾರಿಕೆ ಮಾಡುವವರಿಗೆ ಡಿಜಿಎಂ ಎಸ್ ಪರವಾನಗಿ ಕಡ್ಡಾಯ ಮಾಡಬಾರದು ಎಂಬ ಮನವಿ ಮಾಡಿದ್ದಾರೆ. ಇದನ್ನು ಹೊಸ ಗಣಿ ನೀತಿಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ನಿರಾಣಿ ಹೇಳಿದರು.

ಗಣಿ ಅದಾಲತ್ ಮಾಡುವುದಕ್ಕೆ ತೀರ್ಮಾನಿಸಲಾಗಿದ್ದು, ಬೆಂಗಳೂರಲ್ಲಿ ಏಪ್ರಿಲ್ 17, ಬೆಳಗಾವಿಯಲ್ಲಿ ಏಪ್ರಿಲ್ 30, ಮಂಗಳೂರಿನಲ್ಲಿ ಜೂನ್ 21 ರಂದು ಅದಾಲತ್ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಇದನ್ನೂ ಓದಿ: ಸಂಸದರು ಕೇವಲ ದಿಲ್ಲಿಯಲ್ಲಿ ಇರುವುದಲ್ಲ, ಹಳ್ಳಿಗೂ ಬರಬೇಕು: ಸತೀಶ್ ಜಾರಕಿಹೊಳಿ

ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಿಯಾಗಿ ಬಳಕೆ ಮಾಡದಿರುವುದರಿಂದ ಅನಾಹುತ ಆಗಿದೆ ಎಂದ ಅವರು, ಪ್ರತಿ ಜಿಲ್ಲೆಯಲ್ಲಿ ಡಿಜಿಎಂಎಸ್ ಮೂಲಕ ಜಿಲ್ಲಾವಾರು ತರಬೇತಿ ನೀಡಲಾಗುವುದು. ಅದಾಲತ್ ನಲ್ಲಿ ಕಾನೂನು ಸರಳಿಕರಣ ಮಾಡಿ ಅವಕಾಶ ಕಲ್ಪಿಸಲಾಗುವುದು. ಅಕ್ರಮ ಮಾಡಿದವರಿಗೆ ದಂಡದ ಐದು ಪಟ್ಟು ವಸೂಲಿ ಮಾಡಲಾಗುವುದು. ಪ್ರತಿ ಪ್ರಕರಣವನ್ನು ಪ್ರತ್ಯೇಕವಾಗಿ ತೀರ್ಮಾನ ಮಾಡಲಾಗುವುದು ಎಂದು ಮುರುಗೇಶ್ ನಿರಾಣಿ ಹೇಳಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.