ಮತ್ತೊಂದು ಯಡವಟ್ಟು ಮಾಡಿಕೊಂಡ ಪ್ರತಾಪನ ಮೇಲೆ ಎಫ್ಐಆರ್: ಬಂಧನಕ್ಕೆ ವಿಶೇಷ ತಂಡ ರಚನೆ
Team Udayavani, Jul 20, 2020, 10:57 AM IST
ಬೆಂಗಳೂರು: ವಿಶೇಷ ಡ್ರೋನ್ ತಯಾರಿಸಿದ್ದಾಗಿ ಸುಳ್ಳು ಹೇಳಿಕೊಂಡು ಈಗ ಸಿಕ್ಕಿಬಿದ್ದಿರುವ ಪ್ರತಾಪ್ ಈಗ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾನೆ. ಹೀಗಾಗಿ ಪ್ರತಾಪನ ವಿರುದ್ಧ ಎಫ್ ಐಆರ್ ದಾಖಲಿಸಿರುವ ಪೊಲೀಸರು ಪ್ರತಾಪನ ಬಂಧನಕ್ಕೆ ವಿಶೇಷ ತಂಡವೊಂದನ್ನು ರಚಿಸಿ, ಹುಡುಕಾಟ ಆರಂಭಿಸಿದ್ದಾರೆ.
ಆದರೆ ಈ ಬಾರಿ ಪ್ರಕರಣ ದಾಖಲಾಗಿರುವುದು ಡ್ರೋನ್ ವಿಚಾರಕ್ಕೆ ಅಲ್ಲ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣ. ಪ್ರತಾಪ್ ಇದೇ ತಿಂಗಳ 15ರಂದು ಹೈದರಾಬಾದ್ ನಿಂದ ಬೆಂಗಳೂರಿಗೆ ಬಂದಿದ್ದ. ಹೊರ ರಾಜ್ಯದಿಂದ ಬಂದ ತಲಘಟ್ಟಪುರದ ಅಪಾರ್ಟ್ ಮೆಂಟ್ ವೊಂದರಲ್ಲಿ ಹೋಂ ಕ್ವಾರಂಟೈನ್ ಆಗಿದ್ದ. ಆತನಿಗೆ 14 ದಿನಗಳ ಕಾಲ ಕ್ವಾರಂಟೈನ್ ಆಗಬೇಕಿದ್ದ ಪ್ರತಾಪ್ ಮರುದಿವಸ ನಿಯಮ ಉಲ್ಲಂಘಿಸಿ ಚಾನೆಲ್ ಒಂದರ ಸಂದರ್ಶನದಲ್ಲಿ ಪಾಲ್ಗೊಂಡಿದ್ದ.
ಪ್ರತಾಪ್ ಕ್ವಾರಂಟೈನ್ ನಿಯಮಗಳು ಉಲ್ಲಂಘಿಸಿರುವುದು ಸ್ಪಷ್ಟವಾದ ಕಾರಣ ಬಿಬಿಎಂಪಿ ಅಧಿಕಾರಿಗಳು ತಲಘಟ್ಟಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆತನ ಮೊಬೈಲ್ ಕೂಡಾ ಸ್ವಿಚ್ ಆಫ್ ಎಂದು ಬರುತ್ತಿದೆ. ಆತನ ಅಪಾರ್ಟ್ ಮೆಂಟ್ ಗೆ ಭೇಟಿ ನೀಡಿದಾಗಲೂ ಆತ ಪತ್ತೆಯಾಗಿರಲಿಲ್ಲ. ಈತ ಮಂಡ್ಯ ಅಥವಾ ಚಿಕ್ಕಮಗಳೂರಿನಲ್ಲಿ ಇದ್ದಾನೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!