ಸಿವಿಲ್‌ ಡ್ರೆಸ್‌ನಲ್ಲಿ ಪೊಲೀಸರ ಗಸ್ತು; ಕಾಲೇಜು ಆವರಣದಲ್ಲಿ ಡ್ರಗ್ಸ್‌ ದಂಧೆಗೆ ಕಡಿವಾಣ

"ಉದಯವಾಣಿ' ಸಂವಾದದಲ್ಲಿ ಗೃಹ ಸಚಿವರ ಹೇಳಿಕೆ

Team Udayavani, Oct 7, 2021, 6:40 AM IST

Police patrol in civil dress; Drugs on campus

ಬೆಂಗಳೂರು: ರಾಜ್ಯದ ಕಾಲೇಜು ಆವರಣ ಹಾಗೂ ಪರಿಸರದಲ್ಲಿ ನಡೆಯುತ್ತಿರುವ ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕಲು ಪೊಲೀಸರು ಸಿವಿಲ್‌ ಡ್ರೆಸ್‌ನಲ್ಲಿ ಗಸ್ತು ನಡೆಸುವ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಬುಧವಾರ ಬೆಂಗಳೂರು “ಉದಯವಾಣಿ’ ಕಚೇರಿ ಯಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಕಾಲೇಜು ಕ್ಯಾಂಪಸ್‌ಗಳಲ್ಲೂ ವಿಶೇಷ ಕಣ್ಗಾವಲು ಇಡಲಾಗುತ್ತದೆ ಎಂದರು.

ಜಾಗೃತಿ ಆಂದೋಲನ
ವಿದೇಶದಿಂದ ವ್ಯಾಸಂಗಕ್ಕೆ ಬಂದು, ಅಧ್ಯಯನದ ಅನಂತರ ಇಂಥ ದಂಧೆಯಲ್ಲಿ ತೊಡಗಿಸಿಕೊಂಡಿರುವ ವರನ್ನು ಟ್ರ್ಯಾಕ್‌ ಮಾಡುವ ವ್ಯವಸ್ಥೆಯೂ ಆಗಲಿದೆ. ಡ್ರಗ್ಸ್‌ ವಿರುದ್ಧ ದೊಡ್ಡ ಮಟ್ಟದ ಜನ ಜಾಗೃತಿ ಆಂದೋಲನ ನಡೆಸಲಿದ್ದೇವೆ. ಅತ್ಯಾಚಾರಿಗಳಿಗೆ ಹಾಗೂ ಡ್ರಗ್ಸ್‌ ದಂಧೆಕೋರರಿಗೆ ಗರಿಷ್ಠ ಶಿಕ್ಷೆ ನೀಡಲು ಸರಕಾರ ಬದ್ಧವಾಗಿದೆ ಎಂದು ವಿವರಿಸಿದರು.

ಅಕ್ರಮ ಗೋಸಾಗಾಟ ವಿರುದ್ಧ ಕಠಿನ ಕ್ರಮ
ಹಿಂದಿನ ಸರಕಾರಗಳಲ್ಲಿ ಅಕ್ರಮ ಗೋಸಾಗಾಟ ಗಾರರನ್ನು ಹಿಡಿದು ಕೊಟ್ಟವರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಪೊಲೀಸ್‌ ಅಧಿಕಾರಿಗಳಿಗೆ ವಿಷಯ ಏನೆಂದು ಗೊತ್ತಾಗಿದೆ. ಪೊಲೀಸರು ಇನ್ನಷ್ಟು ಬಿಗಿಯಾಗಬೇಕಿದೆ ಎಂದರು.

ಸ್ಯಾಟಲೈಟ್‌ ಫೋನ್‌ ವಿರುದ್ಧ ಕ್ರಮ
ಭಯೋತ್ಪಾದಕ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಕೇಂದ್ರ ತನಿಖಾ ತಂಡದ ಅಧಿಕಾರಿಗಳ ಮಾಹಿತಿ ಆಧರಿಸಿ ರಾಜ್ಯದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಯನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.

ಪೊಲೀಸರ ವಸತಿಗೆ ಆದ್ಯತೆ
ಪೊಲೀಸ್‌ ಪೇದೆಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂಬುದು ಸರಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ 2025ರೊಳಗೆ ರಾಜ್ಯಾದ್ಯಂತ 10 ಸಾವಿರ ಮನೆಗಳ ನಿರ್ಮಾಣದ ಗುರಿ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಶೇ.49ರಷ್ಟು ಪೊಲೀಸರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಈ 10 ಸಾವಿರ ಮನೆಗಳು ಪೂರ್ಣಗೊಂಡರೆ ಎಲ್ಲ ಪೇದೆಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ.

 ಪೊಲೀಸ್‌ ಬೀಟ್‌ಗೆ ಶಕ್ತಿ
ಅಪರಾಧ ಪ್ರಕರಣಗಳು ತಡೆಯಲು, ಅನಾಹುತಗಳನ್ನು ತಪ್ಪಿಸಲು ಆ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಲು “ಪೊಲೀಸ್‌ ಬೀಟ್‌’ ವ್ಯವಸ್ಥೆ ಅತ್ಯಂತ ಪರಿಣಾಮಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಈಗಿರುವ ಪೊಲೀಸ್‌ ಬೀಟ್‌ ವ್ಯವಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸಲಾಗುವುದು.

ಇದನ್ನೂ ಓದಿ:ಶಬರಿಮಲೆ ಯಾತ್ರೆಗೆ ಕೇರಳ ಸರ್ಕಾರದಿಂದ ಸಿದ್ಧತೆ ಶುರು

ಠಾಣೆಗೆ ಸೈಬರ್‌ ವಿಭಾಗ
ಅಪರಾಧಗಳು ಮೊದಲಿನಂತಿಲ್ಲ. ತಂತ್ರಜ್ಞಾನ ಬೆಳೆದಂತೆ ಸೈಬರ್‌ ಅಪರಾಧ ಬಹಳ ದೊಡ್ಡ ಪಿಡುಗಾಗಿ ಕಾಡುತ್ತಿದೆ. ಇದನ್ನು ಹತೋಟಿಗೆ ತರಲು ಸೈಬರ್‌ ವಿಭಾಗವನ್ನು ಸಶಕ್ತಗೊಳಿಸಲಾಗುವುದು. ಪ್ರತಿ ಜಿಲ್ಲೆ ಮತ್ತು ಪ್ರತಿ ಪೊಲೀಸ್‌ ಠಾಣೆಗೆ ಸೈಬರ್‌ ವಿಭಾಗ ಇರಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಪರಾಧ ನಡೆದ ಸ್ಥಳಕ್ಕೆ ಭೇಟಿ ಕೊಟ್ಟು ಸಾಕ್ಷ್ಯಗಳ ಸಂಗ್ರಹಕ್ಕೆ ಎಫ್ಎಸ್‌ಎಲ್‌ನಲ್ಲಿ 250 ತಜ್ಞರನ್ನು ನೇಮಕ ಮಾಡಲಾಗಿದೆ. ಇದರಿಂದ ಪೊಲೀಸರಿಗೆ ನೆರವು ಸಿಗಲಿದೆ.

100 ಠಾಣೆ ನಿರ್ಮಾಣ
ಹಿಂದೆ ವರ್ಷಕ್ಕೆ 4ರಿಂದ 5 ಹೊಸ ಪೊಲೀಸ್‌ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು. ಆದರೆ, ಕಳೆದ ಎರಡು ವರ್ಷಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ 100 ಹೊಸ ಪೊಲೀಸ್‌ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಇದಾದ ಬಳಿಕ ರಾಜ್ಯದಲ್ಲಿ ಸ್ವಂತ ಕಟ್ಟದ ಇಲ್ಲದ 13 ಠಾಣೆಗಳಿಗೆ ಕಟ್ಟಡ ನಿರ್ಮಿಸುವ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಎರಡು ವರ್ಷದಲ್ಲಿ 124 ಪೊಲೀಸ್‌ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ.

ಮತಾಂತರ ನಿಷೇಧ ಕಾಯ್ದೆ
ಮತಾಂತರ ಮೇಲ್ನೋಟಕ್ಕೆ ಏನೂ ಕಾಣುವುದಿಲ್ಲ. ಆದರೆ ಆಳವಾಗಿ ದೃಷ್ಟಿ ಹಾಯಿಸಿದರೆ ಅದೆಷ್ಟು ಭಯಾನಕ ಎಂದು ತಿಳಿಯುತ್ತದೆ. ಮತಾಂತರದ ಮೂಲಕ ಸಮಾಜದ ಶಾಂತಿಗೆ ಭಂಗ ತರುವ ಕೆಲಸವನ್ನು ಕೆಲವು ಮಿಷನರಿ ಗಳು ಮಾಡುತ್ತಿದ್ದು, ಮತಾಂತರ ನಿಷೇಧ ಕಾಯ್ದೆ ತೀರಾ ಅಗತ್ಯವಿದ್ದು, ಕಾಯ್ದೆ ತರಬೇಕು ಎಂದುಪಕ್ಷ ಮೀರಿ ಎಲ್ಲರೂ ಹೇಳುತ್ತಿದ್ದಾರೆ. ವಿಧೇಯಕಸಿದ್ಧವಾಗುತ್ತಿದೆ ಮುಂದಿನ ಅಧಿವೇಶನದಲ್ಲಿ ಅದನ್ನು ಮಂಡಿಸಿ ಶೀಘ್ರದಲ್ಲೇ ಪ್ರಬಲವಾದ ಮತಾಂತರ ನಿಷೇಧ ಕಾಯ್ದೆಜಾರಿಗೆ ತರಲಾ ಗುವುದು ಎಂದರು.

ಮಂಗಳೂರಿನಲ್ಲಿ ಎನ್‌ಐಎ ಘಟಕ
ದೇಶದ ಭದ್ರತೆ ದೃಷ್ಟಿಯಿಂದ ಪ್ರಧಾನಿ ಮೋದಿ ಯವರು ಅನೇಕ ಮಹತ್ವದ ಹೆಜ್ಜೆಗಳನ್ನು ಇಟ್ಟಿದ್ದಾರೆ. ರಾಜ್ಯದಲ್ಲಿ ಎನ್‌ಐಎ ಘಟಕ ಸ್ಥಾಪನೆ ಕುರಿತು ಕೇಂದ್ರದ ಜತೆ ಮಾತುಕತೆ ನಡೆಸಲಾಗುತ್ತಿದೆ. ಎನ್‌ಐಎ ಘಟಕ ಮಂಗಳೂರಿನಲ್ಲಿ ಇರಬೇಕು ಎಂಬ ಆಲೋಚನೆ ಇದೆ. ಘಟಕ ಸ್ಥಾಪನೆ ಖಂಡಿತ, ಆದರೆ ಕಾಲಮಿತಿ ಬಗ್ಗೆ ಈ ಹಂತದಲ್ಲಿ ಹೇಳಲಾಗದು ಎಂದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.