ಪೊಲೀಸ್ ನೇಮಕಾತಿ ಅಕ್ರಮ; ಬಿಜೆಪಿ,ಕಾಂಗ್ರೆಸ್ ನವರು ಎಂದು ಬೇಡ: ಜೋಶಿ
ಹುಬ್ಬಳ್ಳಿಯಲ್ಲಿ ತಪ್ಪು ಮಾಡಿದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ
Team Udayavani, Apr 23, 2022, 4:18 PM IST
ಹುಬ್ಬಳ್ಳಿ: ಪೊಲೀಸ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾದವರು ಬಿಜೆಪಿ,ಕಾಂಗ್ರೆಸ್ ನವರು ಎಂದು ಬೇಡ ಅಕ್ರಮದಲ್ಲಿ ಭಾಗಿಯಾದವರು ಯಾರೇ ಆಗಲಿ ಅವರಿಗೆ ಶಿಕ್ಷೆ ಆಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ.ಅದರ ಭಾಗವಾಗಿಯೇ ವಿಧಾನಸಭೆ ವಿಪಕ್ಷ ನಾಯಕ ಆರ್ ಎಸ್ ಎಸ್ ಸೇರಿದಂತೆ ಕೆಲ ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿರುವುದು ಅವರ ಬೌದ್ಧಿಕ ದಿವಾಳಿತನದ ಸಂಕೇತವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಎಸ್ ಡಿಪಿಐಯಿಂದ ಕಾಂಗ್ರೆಸ್ ಮತಬ್ಯಾಂಕ್ ಗೆ ಧಕ್ಕೆ ಆಗುತ್ತಿದ್ದು, ಅದನ್ನು ನಿಷೇಧಿಸಬೇಕೆಂಬುದಕ್ಕೆ, ಆರ್ ಎಸ್ ಎಸ್, ಹಿಂದೂ ಸಂಘಟನೆಗಳನ್ನು ಸೇರಿಸಲಾಗುತ್ತಿದೆ. ಇಂತಹ ಒತ್ತಾಯ ಗಮನಿಸಿದರೆ ಸಿದ್ದರಾಮಯ್ಯ ಅವರಿಗೆ ಸಂಸ್ಕಾರ, ಘನತೆ ಇಲ್ಲ ಎಂದೆನಿಸುತ್ತಿದೆ.ಮಠಗಳಿಗೆ ಅನುದಾನ ನೀಡಲು ಯವುದೇ ಕಮಿಷನ್ ಪಡೆದಿಲ್ಲ ಎಂದು ಬಹುತೇಕ ಮಠಾಧೀಶರು ಹೇಳಿದ್ದಾರೆ, ಅದರ ಬಗ್ಗೆ ಸಿದ್ದರಾಮಯ್ಯನವರು ಮಾತನಾಡಲಿ ಎಂದರು.
ಹಳೇ ಹುಬ್ಬಳ್ಳಿ ಘಟನೆಯಲ್ಲಿ ತಪ್ಪು ಮಾಡಿದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಕಾನೂನು ಪ್ರಕಾರ ತಮ್ಮ ಕ್ರಮ ಕೈಗೊಳ್ಳುತ್ತಿದ್ದಾರೆ . ಹಿಜಾಬ್ ವಿಷಯವಾಗಿ ವಿದ್ಯಾರ್ಥಿನಿಯರು ಪರೀಕ್ಷೆ ಯಿಂದ ಹೊರಗುಳಿಯುವುದು ಬೇಡ. ಹಿಜಾಬ್ ಇರಲಿ ಎಂದು ಪ್ರಚೋದಿಸುವ ಮುಖಂಡರ ಮಕ್ಕಳು ಬೇರೆ ಕಡೆ ಓದಿಸುತ್ತಿದ್ದಾರೆ. ಕಾಶ್ಮೀರ ದಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ ನಾಯಕರು ತಮ್ಮ ಮಕ್ಕಳನ್ನು ವಿದೇಶದಲ್ಲಿ ಓದಿಸುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?