ಪೊಲೀಸ್‌ ಶ್ರೀಧರ್‌ ಮನೆಯಲ್ಲಿ 1.55 ಕೋ. ರೂ. ಪತ್ತೆ


Team Udayavani, May 18, 2022, 5:00 AM IST

PSIಪೊಲೀಸ್‌ ಶ್ರೀಧರ್‌ ಮನೆಯಲ್ಲಿ 1.55 ಕೋ. ರೂ. ಪತ್ತೆ

 ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮೀಸಲು ಹೆಡ್‌ಕಾನ್‌ಸ್ಟೇಬಲ್‌ (ಆರ್‌ಎಚ್‌ಸಿ) ಶ್ರೀಧರ್‌ ಮನೆಯಲ್ಲಿ 1.55 ಕೋಟಿ ರೂ. ನಗದು ಪತ್ತೆಯಾಗಿದ್ದು, ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂ. ಮೊತ್ತದಲ್ಲಿ ಡೀಲ್‌ ನಡೆದಿರುವುದಕ್ಕೆ ಸಾಕ್ಷ್ಯ ದೊರಕಿದೆ.

ಆರ್‌ಎಚ್‌ಸಿ ಶ್ರೀಧರ್‌ಗೆ ಸೇರಿದ ಚಾಮರಾಜಪೇಟೆಯಲ್ಲಿರುವ ಮನೆ ಮೇಲೆ ಮಂಗಳವಾರ ದಾಳಿ ನಡೆಸಿದ ಸಿಐಡಿ ಪೊಲೀಸರು, ಈ ವೇಳೆ ಕೊಠಡಿಯೊಂದರಲ್ಲಿ ಒಂದೆರಡು ಲಕ್ಷ ರೂ. ನಗದು ಪತ್ತೆಯಾಗಿದ್ದು, ಶೌಚಾಲಯದಲ್ಲಿ ಶೋಧಿಸಿದಾಗ 3 ಬ್ಯಾಗ್‌ಗಳಲ್ಲಿ ಕಂತೆ-ಕಂತೆ ನೋಟುಗಳು ಕಂಡು ಬಂದಿವೆ. ಬಳಿಕ ನೋಟು ಎಣಿಕೆ ಯಂತ್ರ ತಂದು ಎಣಿಕೆ ಮಾಡಿದಾಗ 1.55 ಕೋಟಿ ರೂ. ಎನ್ನುವುದು ಗೊತ್ತಾಗಿದೆ. ಅಲ್ಲದೆ, ಈತನ ಮನೆಯಲ್ಲಿ ಲಕ್ಷಾಂತರ ರೂ. ವಹಿವಾಟು ನಡೆದಿರುವುದಕ್ಕೆ ಬ್ಯಾಂಕ್‌ಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಅದರಲ್ಲಿ ಕೆಲ ತಿಂಗಳ ಹಿಂದೆ ಡಿವೈಎಸ್ಪಿ ಶಾಂತಕುಮಾರ್‌ ಖಾತೆಯಿಂದ ಶ್ರೀಧರ್‌ ಖಾತೆಗೆ ಹಾಗೂ ಈತನ ಖಾತೆಯಿಂದ ಶಾಂತಕುಮಾರ್‌ ಖಾತೆಗೆ ಲಕ್ಷಾಂತರ ರೂ. ಹಣ ವಹಿವಾಟು ನಡೆದಿರುವುದು ಗೊತ್ತಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ವಿಚಾರಣೆಯಲ್ಲಿ ಬಹಿರಂಗ
ಹೀಗಾಗಿ ಇಷ್ಟೊಂದು ದೊಡ್ಡ ಮೊತ್ತದ ಹಣ ಕೊಟ್ಟವರು ಯಾರು? ಯಾರಿಂದ ಪಡೆಯಲಾಗಿದೆ? ಯಾರಿಗೆ ಸೇರಿದ ಹಣ? ಎಂಬ ಇತರ ಮಾಹಿತಿಗಳನ್ನು ಇಬ್ಬರು ಆರೋಪಿಗಳ ವಿಚಾರಣೆ ವೇಳೆ ಬಯಲಾಗಲಿದೆ. ಮೊದಲಿಗೆ ಶ್ರೀಧರ್‌ನನ್ನು ವಿಚಾರಣೆ ನಡೆಸಲಾಗುತ್ತದೆ. ಅನಂತರ ಡಿವೈಎಸ್ಪಿ ಶಾಂತಕುಮಾರ್‌ ವಿಚಾರಣೆ ನಡೆಸಲಾಗುತ್ತದೆ. ಒಂದು ವೇಳೆ ಇಬ್ಬರು ಗೊಂದಲ ಹೇಳಿಕೆಗಳನ್ನು ನೀಡಿದರೆ ಮುಖಾಮುಖೀ ವಿಚಾರಣೆ ನಡೆಸಿ ಸತ್ಯಾಂಶ ತಿಳಿಯಬೇಕಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಡಿವೈಎಸ್‌ಪಿ ಸಾಲಿ ಸೂಚನೆ ಮೇರೆಗೆ ಬಚ್ಚಿಟ್ಟಿದ್ದ !
ಪ್ರಕರಣದಲ್ಲಿ ಬಂಧನವಾಗಿರುವ ಡಿವೈಎಸ್ಪಿ ಶಾಂತಕುಮಾರ್‌ ಸೂಚನೆ ಮೇರೆಗೆ ಶ್ರೀಧರ್‌ ಕೋಟ್ಯಂತರ ರೂ. ನಗದನ್ನು ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಎಂದು ಹೇಳಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಶಾಂತಕುಮಾರ್‌ ಸೂಚನೆ ಮೇರೆಗೆ ಪಿಎಸ್‌ಐ ಪರೀಕ್ಷೆಗೆ ಡೀಲ್‌ ಆಗಿದ್ದ ಅಭ್ಯರ್ಥಿಗಳಿಂದ ಇತ್ತೀಚೆಗೆ ಪಡೆದುಕೊಂಡಿದ್ದ ನಗದು ರೂಪದ ಹಣ ಎಂದು ಹೇಳಲಾಗಿದೆ. ಆದರೆ, ಆರೋಪಿ ಈ ಹಣಕ್ಕೆ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ.

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

BJP ನಡತೆಗೆ ಜೆಡಿಎಸ್‌ ಅತೃಪ್ತಿ: ಪ್ರಧಾನಿ ಸಭೆಗಳಿಗೆ ಆಹ್ವಾನ ನೀಡದ್ದಕ್ಕೂ ಗರಂ

BJP ನಡತೆಗೆ ಜೆಡಿಎಸ್‌ ಅತೃಪ್ತಿ: ಪ್ರಧಾನಿ ಸಭೆಗಳಿಗೆ ಆಹ್ವಾನ ನೀಡದ್ದಕ್ಕೂ ಗರಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.