ಮಂಡ್ಯದಿಂದ ಮಾತ್ರ ರಾಜಕೀಯ ಪ್ರವೇಶ


Team Udayavani, Feb 2, 2019, 1:40 AM IST

10.jpg

ಬೆಂಗಳೂರು: ಮಂಡ್ಯದಿಂದ ಆಗಮಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಸುಮಲತಾ ಅಂಬರೀಶ್‌ ಅವರನ್ನು ಶುಕ್ರವಾರ ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮನವಿ ಮಾಡಿದರು.

ಜಯನಗರದ ನಿವಾಸದಲ್ಲಿ ಭೇಟಿ ಮಾಡಿದ ಕಾರ್ಯಕರ್ತರು, ಮಂಡ್ಯದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಬೇಕು. ಪಕ್ಷೇತ ರರಾಗಿ ಸ್ಪರ್ಧಿಸಿದರೂ ನಾವು ಬೆಂಬಲ ನೀಡುತ್ತೇವೆ. ದೇವೇಗೌಡರು ಅಂಬರೀಶ್‌ ಅವರನ್ನು ತಮ್ಮ ಮಗ ಎಂದು ಹೇಳಿದ್ದರು. ನೀವು ಸ್ಪರ್ಧೆ ಮಾಡಿದರೆ ಎಲ್ಲರೂ ಬೆಂಬಲಿಸುತ್ತಾರೆ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ‘ರಾಜಕೀಯ ಪ್ರವೇಶಿಸಿದರೆೆ, ಮಂಡ್ಯ ದಿಂದಲೇ ಕಣಕ್ಕಿಳಿಯುವೆ. ಮಂಡ್ಯದ ಅಭಿ ಮಾನಿಗಳ ಪ್ರೀತಿ ಕಳೆದುಕೊಳ್ಳಲು ನಾನು ಮತ್ತು ನನ್ನ ಮಗ ಇಬ್ಬರೂ ಇಷ್ಟ ಪಡುವು ದಿಲ್ಲ. ನಾನು ಯಾರಿಗೂ ಸವಾಲು ಹಾಕು ವುದಿಲ್ಲ. ಯಾರ ವಿರುದ್ಧವೂ ಹೋಗು ವುದಿಲ್ಲ. ನನಗೆ ರಾಜಕೀಯಕ್ಕೆ ಬರುವ ಆಲೋಚನೆ ಇಲ್ಲ. ಅಕಸ್ಮಾತ್‌ ರಾಜಕೀಯಕ್ಕೆ ಬಂದರೆ ಮಂಡ್ಯದಿಂದ ಮಾತ್ರ. ಮಂಡ್ಯದ ಜನರೊಂದಿಗೆ ಅಂಬರೀಶ್‌ಗೆ ಇದ್ದ ಸಂಬಂಧವನ್ನು ಕಡಿದುಕೊಳ್ಳಲು ಸಾಧ್ಯವಿಲ್ಲ. ಅಭಿಮಾನಿಗಳೇ ನನ್ನ ಶಕ್ತಿ. ನನಗೆ ಯಾವುದೇ ಪದವಿ ಅಥವಾ ರಾಜಕೀಯದ ಆಸೆ ಇಲ್ಲ. ಯಾವುದೇ ದುಡುಕಿನ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ರಾಜಕೀಯದಲ್ಲಿ ಚುನಾವಣೆ ಎದುರಿಸುವುದು ಅಷ್ಟು ಸುಲಭವಲ್ಲ. ಎಲ್ಲವನ್ನೂ ಚರ್ಚೆ ಮಾಡಿ, ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದರು.

ಅಂಬರೀಶ್‌ ಅವರು ಕಾಂಗ್ರೆಸ್‌ ಪಕ್ಷದಿಂ ದಲೇ ಗುರುತಿಸಿಕೊಂಡಿದ್ದರು. ನಮಗೂ ಕೂಡ ಕಾಂಗ್ರೆಸ್‌ ಪಕ್ಷ ಪರಿಚಯ. ಆದರೆ, ನಾನು ಯಾವುದೇ ಕಾಂಗ್ರೆಸ್‌ ನಾಯಕರ ಜೊತೆ ಮಾತನಾಡಿಲ್ಲ. ಕಾಂಗ್ರೆಸ್‌ ನಾಯಕರ ಜೊತೆ ಮಾತನಾಡಬೇಕು. ನಾನು ಯಾವುದೇ ರೀತಿಯ ಹೇಳಿಕೆಗಳನ್ನು ನೀಡಿ ವಿವಾದ ಮಾಡಿಕೊಳ್ಳಲು ಇಷ್ಟ ಪಡುವುದಿಲ್ಲ. ಅಭಿಮಾನಿಗಳ ಪ್ರೀತಿಗೆ ಖಂಡಿತ ಬೆಲೆ ಕೊಡುತ್ತೇವೆ. ಅವರ ಪ್ರೀತಿ ಕಳೆದುಕೊಳ್ಳಲು ಇಷ್ಟ ಪಡುವುದಿಲ್ಲ ಎಂದು ತಿಳಿಸಿದರು.

ಅಂಬಿ ಅಭಿಮಾನಿ ಮಗುವಿಗೆ ನಾಮಕರಣ

ಅಂಬರೀಶ್‌ ಅವರ ಅಭಿಮಾನಿ, ಮಂಡ್ಯದ ಪುಟ್ಟಸ್ವಾಮಿ ಹಾಗೂ ಪಲ್ಲವಿ ಅವರ 2 ವರ್ಷದ ಗಂಡು ಮಗುವಿಗೆ ಸುಮಲತಾ ನಾಮಕರಣ ಮಾಡಿದರು. ಮಗುವಿಗೆ ಅಂಬರೀಶ್‌ ಎಂದೇ ನಾಮಕರಣ ಮಾಡಿದರು. ಅಂಬರೀಶ್‌ ಬದುಕಿದ್ದಾಗ ಮಗುವಿಗೆ ನಾಮಕರಣ ಮಾಡುವ ಭರವಸೆ ನೀಡಿದ್ದರು. ಅವರು ಅಕಾಲಿಕ ನಿಧನ ಹೊಂದಿದ್ದರಿಂದ ಪುಟ್ಟಸ್ವಾಮಿ ದಂಪತಿ ಈಗ ಸುಮಲತಾ ಅವರಿಂದ ನಾಮಕರಣ ಮಾಡಿಸಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.