ಕಾರ್ಮಿಕರ ಊಟದಲ್ಲಿಯೂ ಬಿಜೆಪಿ ರಾಜಕೀಯ: ತನಿಖೆಗೆ ಸಿದ್ದರಾಮಯ್ಯ ಒತ್ತಾಯ
Team Udayavani, Apr 12, 2020, 5:39 PM IST
ಬೆಂಗಳೂರು: ನಗರದಲ್ಲಿ ಕಾರ್ಮಿಕರಿಗೆ ಸಿದ್ದ ಆಹಾರ ಮತ್ತು ಆಹಾರ ಸಾಮಾಗ್ರಿಗಳನ್ನು ವಿತರಿಸುವ ಕಾರ್ಮಿಕ ಇಲಾಖೆಯ ಯೋಜನೆಯನ್ನು ಬಿಜೆಪಿ ರಾಜಕೀಯವಾಗಿ ದುರುಪಯೋಗಗೊಳಿಸುತ್ತಿದ್ದು ಇದರ ಬಗ್ಗೆ ತನಿಖೆ ನಡೆಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಒತ್ತಾಯಿಸಿದ್ದಾರೆ.
ಕಟ್ಟಡ ನಿರ್ಮಾಣ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ನಿಧಿಯಿಂದ ನೀಡಲಾಗುತ್ತಿರುವ ಆಹಾರದ ಪೊಟ್ಟಣಗಳನ್ನು ಬಿಜೆಪಿ ಶಾಸಕರು ಮತ್ತು ಮಹಾನಗರಪಾಲಿಕೆ ಸದಸ್ಯರು ಬೇಕಾಬಿಟ್ಟಿಯಾಗಿ ವಿತರಿಸುತ್ತಿದ್ದಾರೆ. ಅದೇ ರೀತಿ ಆಹಾರ ಸಾಮಾಗ್ರಿಗಳ ಹ್ಯಾಂಪರ್ಸ್ ಮೇಲೆ ತಮ್ಮ ಭಾವಚಿತ್ರ-ಹೆಸರಿನ ಲೇಬಲ್ ಗಳನ್ನು ಹಚ್ಚಿ, ತಮ್ಮ ಕ್ಷೇತ್ರಗಳಲ್ಲಿ ತಮ್ಮ ಮತದಾರರಿರುವ ಪ್ರದೇಶದಲ್ಲಿ ವಿತರಣೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದರಿಂದಾಗಿ ಅರ್ಹ ಫಲಾನುಭವಿಗಳಿಗೆ ಆಹಾರ ಪೊಟ್ಟಣಗಳು ಸಿಗುತ್ತಿಲ್ಲ. ರಾಜ್ಯದಲ್ಲಿ ಸುಮಾರು ಒಂದು ಕೋಟಿಯಷ್ಟು ಅಸಂಘಟಿತ ಕ್ಷೇತ್ರದ ಕಾರ್ಮಿಕರಿದ್ದಾರೆ. ಇವರಲ್ಲಿ ಬಹುಸಂಖ್ಯೆಯ ಕಾರ್ಮಿಕರು ಸರ್ಕಾರದ ಯಾವುದೇ ನೆರವಿಲ್ಲದೆ ಉಪವಾಸ ಕೂರುವ ಪರಿಸ್ಥಿತಿ ಎದುರಾಗಿದೆ ಎಂದಿದ್ದಾರೆ
ಕಾರ್ಮಿಕ ಸಚಿವರೇ ಉದ್ಘಾಟಿಸಿದ ಈ ಯೋಜನೆಯನ್ನು ನಗರದ ಬಿಜೆಪಿ ಶಾಸಕರು ಮತ್ತು ಮಹಾನಗರಪಾಲಿಕೆ ಸದಸ್ಯರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಈಗ ಕಾರ್ಮಿಕ ಇಲಾಖೆಯಿಂದ ಮಹಾನಗರಪಾಲಿಕೆಗೆ ವರ್ಗಾಯಿಸಿವಂತೆ ಮಾಡಿದ್ದಾರೆ. ಈ ಯೋಜನೆ ಅನುಷ್ಠಾನದಲ್ಲಿ ಕಾರ್ಮಿಕ ಸಂಘಗಳನ್ನು ಹೊರಗಿಟ್ಟು ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರನ್ನು ಸೇರಿಸಿಕೊಂಡಿದ್ದಾರೆ. ಕೋವಿಡ್-19 ಇಡೀ ಮನುಕುಲ ಎದುರಿಸುತ್ತಿರುವ ಹಾವಳಿ. ಇದನ್ನು ನಾವೆಲ್ಲರೂ ಜಾತಿ-ಧರ್ಮ-ಪಕ್ಷ-ಪ್ರದೇಶಗಳನ್ನು ಮೀರಿ ಒಂದಾಗಿ ಎದುರಿಸಬೇಕಾಗಿದೆ. ಇದರಲ್ಲಿ ರಾಜಕೀಯ ಲಾಭ-ನಷ್ಟದ ಲೆಕ್ಕ ಹಾಕುತ್ತಾ ಕೂರುವುದು ಅಮಾನವೀಯವಾದುದು.
ಕಾರ್ಮಿಕ ಇಲಾಖೆಯ ಆಹಾರ ವಿತರಣೆಯ ಯೋಜನೆಯಲ್ಲಿ ಕಾರ್ಮಿಕರ ಜೊತೆ ಸಂಬಂಧವೇ ಇಲ್ಲದ ಸಂಸ್ಥೆಗಳಿಗೆ ಕೊಟ್ಟಿರುವ ಜವಾಬ್ದಾರಿಯನ್ನು ಹಿಂದಕ್ಕೆ ಪಡೆದು ಅದನ್ನು ಇಂದಿರಾ ಕ್ಯಾಂಟೀನ್ ಮೂಲಕ ಅಧಿಕೃತ ಕಾರ್ಮಿಕ ಸಂಘಗಳ ಸಹಯೋಗದೊಡನೆ ಮುಂದುವರೆಸಬೇಕೆಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್