ಸೈನಿಕರ ರಕ್ತದಲ್ಲಿ ರಾಜಕೀಯ : ಯಡಿಯೂರಪ್ಪ ವಿರುದ್ಧ ದಿನೇಶ್ ಕಿಡಿ
Team Udayavani, Feb 28, 2019, 1:05 PM IST
ಹುಬ್ಬಳ್ಳಿ : ಯಡಿಯೂರಪ್ಪ ಸೈನಿಕರ ರಕ್ತದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಯಡಿಯೂರಪ್ಪ ಹೇಳಿಕೆಯಲ್ಲಿ ಸ್ವಾರ್ಥ ಎದ್ದು ಕಾಣುತ್ತಿದ್ದು, ದೇಶಕ್ಕಾಗಿ ಸೈನಿಕರು ಪ್ರಾಣ ತ್ಯಾಗ , ಹೋರಾಟದ ಮಾಡುತ್ತಿದ್ದಾರೆ, ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶದ ನುಡಿಗಳನ್ನಾಡಿದರು.
ಬಿಜೆಪಿ ಸೈನಿಕರ ತ್ಯಾಗವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ. ಅಮಿತ್ ಶಾ ಎಲ್ಲೇ ಭಾಷಣ ಮಾಡಿದರೂ ಸೈನಿಕರ ಹೋರಾಟವನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಮಾತುಗಳನ್ನಾಡುತ್ತಿದ್ದಾರೆ ಎಂದರು.
ಗಡಿಯಲ್ಲಿ ಬಿಜೆಪಿಯಾಗಲಿ, ಆರ್ಎಸ್ಎಸ್ ಆಗಲಿ ಹೋರಾಟ ಮಾಡುತ್ತಿಲ್ಲ. ಯಡಿಯೂರಪ್ಪ ಅವರು ತಮ್ಮ ಹೇಳಿಕೆ ಕುರಿತು ಕ್ಷಮೆ ಯಾಚಿಸಬೇಕು ಎಂದು ದಿನೇಶ್ ಆಗ್ರಹಿಸಿದರು.
ನಾವೆಲ್ಲರೂ ದೇಶ ಭಕ್ತರೇ , ನಾವು ಸರ್ಕಾರ ಮತ್ತು ಯೋಧರ ಬೆಂಬಲಕ್ಕೆ ನಿಲ್ಲುತ್ತೇವೆ. ರಾಹುಲ್ ಗಾಂಧಿ ಸೇರಿ ನಾವೆಲ್ಲರೂ ದೇಶ ಭಕ್ತರೇ ಆಗಿದ್ದೇವೆ. ದೇಶ ಭಕ್ತ ನಮ್ಮ ಗುತ್ತಿಗೆಯಲ್ಲಿ ಇದೆ ಎನ್ನುವಂತೆ ಮಾತನಾಡುವುದು ಸರಿಯಲ್ಲ ಎಂದರು.
ವಾಯು ದಾಳಿ ಮಾಡಿದ್ದರಿಂದ ರಾಜ್ಯದಲ್ಲಿ ಬಿಜೆಪಿ 22 ಸ್ಥಾನ ಗೆಲ್ಲುತ್ತದೆ ಎನ್ನುವ ಹೇಳಿಕೆ ನೀಡುವ ಮೂಲಕ ಯಡಿಯೂರಪ್ಪ ಅವರು ಪಕ್ಷದೊಳಗೆ ಸೇರಿದಂತೆ ವ್ಯಾಪಕ ವಿರೋಧ ಎದುರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ