ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ


Team Udayavani, Jan 28, 2022, 7:40 AM IST

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು:  ಕೊರೊನಾ ನಡುವೆಯೂ ದಕ್ಷಿಣ ಭಾರತದ ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸಹಿತ 10 ನಗರಗಳಲ್ಲಿ ಹೆಚ್ಚಿನ ಮಾಲಿನ್ಯ ಕಂಡುಬಂದಿದೆ ಎಂದು ವರದಿಯೊಂದು ಆತಂಕಕಾರಿ ಮಾಹಿತಿ ನೀಡಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ 2020ರ ನವೆಂಬರ್‌ 20ರಿಂದ 2021ರ ನವೆಂಬರ್‌ 20ರ ವರೆಗಿನ ದತ್ತಾಂಶಗಳ ಬಗ್ಗೆ ಅಧ್ಯಯನ ನಡೆಸಿರುವ ಗ್ರೀನ್‌ಪೀಸ್‌ ಇಂಡಿಯಾ ಈ ವರದಿ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಿಗದಿಪಡಿಸಿರುವ ಗುಣಮಟ್ಟಕ್ಕಿಂತಲೂ ಈ ನಗರಗಳಲ್ಲಿ ಹೆಚ್ಚಿನ ಮಾಲಿನ್ಯವಿದೆ ಎಂದು ಗ್ರೀನ್‌ಪೀಸ್‌ ಇಂಡಿಯಾ ಹೇಳಿದೆ.

ಕೊಯಮತ್ತೂರು, ಬೆಂಗಳೂರು, ಮಂಗಳೂರು ಮತ್ತು ಅಮರಾವತಿಯ ಪಿಎಂ 2.5 ಮಟ್ಟ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಲ್ಲಿ ತಿಳಿಸಿರುವ ಮಟ್ಟಕ್ಕಿಂತ 6ರಿಂದ 7 ಪಟ್ಟು ಹೆಚ್ಚಾಗಿದೆ. ಮೈಸೂರು, ಕೊಚ್ಚಿ, ಚೆನ್ನೈ ಮತ್ತು ಪುದುಚೇರಿಯ ಪಿಎಂ 2.5 ಮಟ್ಟ  4ರಿಂದ 5 ಪಟ್ಟು ಹೆಚ್ಚಿದೆ ಎಂದು ಗ್ರೀನ್‌ಪೀಸ್‌ ವರದಿ ಹೇಳಿದೆ. ಈ ಮೂಲಕ ವಾಯುಮಾಲಿನ್ಯ ಮಟ್ಟ ಕೇವಲ ಉತ್ತರ ಭಾರತವಷ್ಟೇ ಅಲ್ಲ, ದಕ್ಷಿಣ ಭಾರತದಲ್ಲೂ ಹೆಚ್ಚಾಗಿದೆ ಎಂಬುದನ್ನು ಮನದಟ್ಟು ಮಾಡಿದೆ ಎಂದು “ಇಂಡಿಯನ್‌ ಎಕ್ಸ್‌ಪ್ರಸ್‌’ ಉಲ್ಲೇಖೀಸಿದೆ.

ಲಾಕ್‌ಡೌನ್‌ನಲ್ಲೂ ಹೆಚ್ಚು :

ವಿಚಿತ್ರವೆಂದರೆ, ಲಾಕ್‌ಡೌನ್‌ ಘೋಷಣೆ ಮಾಡಿದ್ದ ಅವಧಿಯಲ್ಲೂ 10 ನಗರಗಳಲ್ಲಿ ಪಿಎಂ 2.5 ಮತ್ತು ಪಿಎಂ 10 ವಾರ್ಷಿಕ ಮೌಲ್ಯ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿರುವ ಮಾರ್ಗಸೂಚಿಗಿಂತ ಹೆಚ್ಚಾಗಿದೆ ಎಂದು ಈ ವರದಿ ತಿಳಿಸಿದೆ. ವಿಶಾಖಪಟ್ಟಣ, ಹೈದರಾಬಾದ್‌ಗಳಲ್ಲಿ ಮಾಲಿನ್ಯ ಆರು ಪಟ್ಟು ಹೆಚ್ಚಿದ್ದರೆ ಬೆಂಗಳೂರು, ಮಂಗಳೂರು, ಅಮರಾವತಿ, ಚೆನ್ನೈ, ಕೊಚ್ಚಿಯಲ್ಲಿ 3ರಿಂದ 4 ಪಟ್ಟು ಹೆಚ್ಚಿತ್ತು ಎಂದು ಗ್ರೀನ್‌ಪೀಸ್‌ ವರದಿ ಹೇಳಿದೆ. ಮೈಸೂರು, ಕೊಯಮತ್ತೂರು, ಪುದುಚೇರಿಯ ಮಾಲಿನ್ಯ ಪ್ರಮಾಣ ಎರಡರಿಂದ ಮೂರು ಪಟ್ಟು ಹೆಚ್ಚಾಗಿತ್ತು ಎಂದಿದೆ.

ಮೊದಲ 10 ಮಲಿನ ನಗರಗಳು :

  1. ಬೆಂಗಳೂರು, 2. ಹೈದರಾಬಾದ್‌,
  2. ಚೆನ್ನೈ, 4. ಅಮರಾವತಿ,
  3. ವಿಶಾಖಪಟ್ಟಣಂ, 6. ಕೊಚ್ಚಿ,
  4. ಮಂಗಳೂರು, 8. ಪುದುಚೇರಿ,
  5. ಕೊಯಮತ್ತೂರು, 10. ಮೈಸೂರು.

ಮಾಲಿನ್ಯಕ್ಕೆ ಕಾರಣವೇನು? :

ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕೆಗಳು, ಸಾರಿಗೆ, ಕಸವನ್ನು ಸುಡುವುದು, ನಿರ್ಮಾಣ ಕಾಮಗಾರಿ ಅತಿಯಾದ ಮಾಲಿನ್ಯಕ್ಕೆ ಕಾರಣವಾಗಿವೆ. ಇದರಿಂದ ಅಸ್ತಮಾ, ಹುಟ್ಟುವಾಗ ಮಗುವಿನ ತೂಕ ಕಡಿಮೆ, ಖನ್ನತೆ, ಸ್ಕಿಝೋಫ್ರೀನಿಯಾ, ಸಕ್ಕರೆ ಕಾಯಿಲೆ, ಪಾರ್ಶ್ವವಾಯು, ಶ್ವಾಸಕೋಶದ ಕ್ಯಾನ್ಸರ್‌, ಅವಧಿಗಿಂತ ಮುಂಚೆಯೇ ಮಗು ಹುಟ್ಟುವ ಸಮಸ್ಯೆಗಳು ಕಾಡಬಹುದು.

ಟಾಪ್ ನ್ಯೂಸ್

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

ಬೆಳಗಾವಿ: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.