ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ


Team Udayavani, Jan 28, 2022, 7:40 AM IST

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು:  ಕೊರೊನಾ ನಡುವೆಯೂ ದಕ್ಷಿಣ ಭಾರತದ ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸಹಿತ 10 ನಗರಗಳಲ್ಲಿ ಹೆಚ್ಚಿನ ಮಾಲಿನ್ಯ ಕಂಡುಬಂದಿದೆ ಎಂದು ವರದಿಯೊಂದು ಆತಂಕಕಾರಿ ಮಾಹಿತಿ ನೀಡಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ 2020ರ ನವೆಂಬರ್‌ 20ರಿಂದ 2021ರ ನವೆಂಬರ್‌ 20ರ ವರೆಗಿನ ದತ್ತಾಂಶಗಳ ಬಗ್ಗೆ ಅಧ್ಯಯನ ನಡೆಸಿರುವ ಗ್ರೀನ್‌ಪೀಸ್‌ ಇಂಡಿಯಾ ಈ ವರದಿ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಿಗದಿಪಡಿಸಿರುವ ಗುಣಮಟ್ಟಕ್ಕಿಂತಲೂ ಈ ನಗರಗಳಲ್ಲಿ ಹೆಚ್ಚಿನ ಮಾಲಿನ್ಯವಿದೆ ಎಂದು ಗ್ರೀನ್‌ಪೀಸ್‌ ಇಂಡಿಯಾ ಹೇಳಿದೆ.

ಕೊಯಮತ್ತೂರು, ಬೆಂಗಳೂರು, ಮಂಗಳೂರು ಮತ್ತು ಅಮರಾವತಿಯ ಪಿಎಂ 2.5 ಮಟ್ಟ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಲ್ಲಿ ತಿಳಿಸಿರುವ ಮಟ್ಟಕ್ಕಿಂತ 6ರಿಂದ 7 ಪಟ್ಟು ಹೆಚ್ಚಾಗಿದೆ. ಮೈಸೂರು, ಕೊಚ್ಚಿ, ಚೆನ್ನೈ ಮತ್ತು ಪುದುಚೇರಿಯ ಪಿಎಂ 2.5 ಮಟ್ಟ  4ರಿಂದ 5 ಪಟ್ಟು ಹೆಚ್ಚಿದೆ ಎಂದು ಗ್ರೀನ್‌ಪೀಸ್‌ ವರದಿ ಹೇಳಿದೆ. ಈ ಮೂಲಕ ವಾಯುಮಾಲಿನ್ಯ ಮಟ್ಟ ಕೇವಲ ಉತ್ತರ ಭಾರತವಷ್ಟೇ ಅಲ್ಲ, ದಕ್ಷಿಣ ಭಾರತದಲ್ಲೂ ಹೆಚ್ಚಾಗಿದೆ ಎಂಬುದನ್ನು ಮನದಟ್ಟು ಮಾಡಿದೆ ಎಂದು “ಇಂಡಿಯನ್‌ ಎಕ್ಸ್‌ಪ್ರಸ್‌’ ಉಲ್ಲೇಖೀಸಿದೆ.

ಲಾಕ್‌ಡೌನ್‌ನಲ್ಲೂ ಹೆಚ್ಚು :

ವಿಚಿತ್ರವೆಂದರೆ, ಲಾಕ್‌ಡೌನ್‌ ಘೋಷಣೆ ಮಾಡಿದ್ದ ಅವಧಿಯಲ್ಲೂ 10 ನಗರಗಳಲ್ಲಿ ಪಿಎಂ 2.5 ಮತ್ತು ಪಿಎಂ 10 ವಾರ್ಷಿಕ ಮೌಲ್ಯ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿರುವ ಮಾರ್ಗಸೂಚಿಗಿಂತ ಹೆಚ್ಚಾಗಿದೆ ಎಂದು ಈ ವರದಿ ತಿಳಿಸಿದೆ. ವಿಶಾಖಪಟ್ಟಣ, ಹೈದರಾಬಾದ್‌ಗಳಲ್ಲಿ ಮಾಲಿನ್ಯ ಆರು ಪಟ್ಟು ಹೆಚ್ಚಿದ್ದರೆ ಬೆಂಗಳೂರು, ಮಂಗಳೂರು, ಅಮರಾವತಿ, ಚೆನ್ನೈ, ಕೊಚ್ಚಿಯಲ್ಲಿ 3ರಿಂದ 4 ಪಟ್ಟು ಹೆಚ್ಚಿತ್ತು ಎಂದು ಗ್ರೀನ್‌ಪೀಸ್‌ ವರದಿ ಹೇಳಿದೆ. ಮೈಸೂರು, ಕೊಯಮತ್ತೂರು, ಪುದುಚೇರಿಯ ಮಾಲಿನ್ಯ ಪ್ರಮಾಣ ಎರಡರಿಂದ ಮೂರು ಪಟ್ಟು ಹೆಚ್ಚಾಗಿತ್ತು ಎಂದಿದೆ.

ಮೊದಲ 10 ಮಲಿನ ನಗರಗಳು :

  1. ಬೆಂಗಳೂರು, 2. ಹೈದರಾಬಾದ್‌,
  2. ಚೆನ್ನೈ, 4. ಅಮರಾವತಿ,
  3. ವಿಶಾಖಪಟ್ಟಣಂ, 6. ಕೊಚ್ಚಿ,
  4. ಮಂಗಳೂರು, 8. ಪುದುಚೇರಿ,
  5. ಕೊಯಮತ್ತೂರು, 10. ಮೈಸೂರು.

ಮಾಲಿನ್ಯಕ್ಕೆ ಕಾರಣವೇನು? :

ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕೆಗಳು, ಸಾರಿಗೆ, ಕಸವನ್ನು ಸುಡುವುದು, ನಿರ್ಮಾಣ ಕಾಮಗಾರಿ ಅತಿಯಾದ ಮಾಲಿನ್ಯಕ್ಕೆ ಕಾರಣವಾಗಿವೆ. ಇದರಿಂದ ಅಸ್ತಮಾ, ಹುಟ್ಟುವಾಗ ಮಗುವಿನ ತೂಕ ಕಡಿಮೆ, ಖನ್ನತೆ, ಸ್ಕಿಝೋಫ್ರೀನಿಯಾ, ಸಕ್ಕರೆ ಕಾಯಿಲೆ, ಪಾರ್ಶ್ವವಾಯು, ಶ್ವಾಸಕೋಶದ ಕ್ಯಾನ್ಸರ್‌, ಅವಧಿಗಿಂತ ಮುಂಚೆಯೇ ಮಗು ಹುಟ್ಟುವ ಸಮಸ್ಯೆಗಳು ಕಾಡಬಹುದು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.