ಜಾರ್ಜ್‌ ಫೆರ್ನಾಂಡಿಸ್‌ಗೆ ಮರಣೋತ್ತರ ಪದ್ಮ ವಿಭೂಷಣ ಗೌರವ


Team Udayavani, Jan 26, 2020, 3:07 AM IST

george

ಮಂಗಳೂರು: ಕೇಂದ್ರ ಮಾಜಿ ಸಚಿವ ಜಾರ್ಜ್‌ ಫೆರ್ನಾಂಡಿಸ್‌ಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಣೆಯಾಗಿದ್ದು, ಆ ಮೂಲಕ ದ. ಕ.ಜಿಲ್ಲೆಯ ಜನತೆ ಫೆರ್ನಾಂಡಿಸ್‌ ಅವರ ದೇಶ ಸೇವೆಯನ್ನು ಮತ್ತೆ ಸ್ಮರಿಸುವಂತಾಗಿದೆ. ಈ ನಾಡಿನ ಅಪ್ರತಿಮ ಹೋರಾಟಗಾರರಾಗಿದ್ದ ಫೆರ್ನಾಂಡಿಸ್‌, ಕೊಂಕಣ ರೈಲ್ವೆಯ ರೂವಾರಿ.

ಕೊಂಕಣ ರೈಲ್ವೇ ಎಂಬ ಅಪೂರ್ವ ಯೋಜನೆಯನ್ನು ಕರ್ನಾಟಕದ ಕರಾವಳಿಗೆ ನೀಡಿ ಹುಟ್ಟೂರಿನ ಅಪ್ರತಿಮ ಪ್ರೀತಿ ದಾಖಲಿಸಿದವರು. ಕೇಂದ್ರದಲ್ಲಿ ರೈಲ್ವೆ ಇಲಾಖೆಯ ಸಚಿವರಾಗಿದ್ದಾಗ, ಅವರ ಛಲದಿಂದಾಗಿ ಈ ಯೋಜನೆ ಸಾಕ್ಷಾತ್ಕಾರಗೊಂಡಿತ್ತು. ಪ್ರತ್ಯೇಕ ನಿಗಮ ಸ್ಥಾಪಿಸಿ, ಅನುದಾನ ಒದಗಿಸಿ, ಉದ್ಘಾಟಿಸಿದ್ದರಿಂದ ಅವರ ಹೆಸರು ಅಜರಾಮರ.

ಮುಂಬೈಗೆ ಪಯಣ: ಮಂಗಳೂರಿನಲ್ಲಿ ತುಂಬು ಕುಟುಂಬದಲ್ಲಿ ಜಾನ್‌ ಜೋಸೆಫ್‌ ಫೆರ್ನಾಂಡಿಸ್‌- ಎಲೀಸ್‌ ಮಾರ್ಥಾ ದಂಪತಿಯ ಪುತ್ರನಾಗಿ 1930ರ ಜೂನ್‌ 3ರಂದು ಜನನ. ಸೈಂಟ್‌ ಅಲೋಶಿಯಸ್‌ನಲ್ಲಿ ಶಿಕ್ಷಣ. ಮುಂದೆ ಮುಂಬೈಗೆ ಪಯಣ. ಅಲ್ಲಿ ಟ್ರೇಡ್‌ ಯೂನಿಯನ್‌ ನಾಯಕನಾಗಿ ರೂಪುಗೊಂಡ ಜಾರ್ಜ್‌ ಫೆರ್ನಾಂಡಿಸ್‌, ಒಂದು ಕರೆ ನೀಡಿದರೆ ಮುಂಬೈಗೆ ಮುಂಬೈಯೇ ಸ್ತಬ್ಧ ಎಂಬಷ್ಟರ ಮಟ್ಟಿನ ವರ್ಚಸ್ಸು. ಕಾರ್ಮಿಕ ನಾಯಕ, ಪತ್ರಕರ್ತ, ಕೃಷಿಕ, ರಾಜಕಾರಣಿ, ಸಚಿವ, ಆಡಳಿತಗಾರ.. ಹೀಗೆ ಬಹುಮುಖೀ ವ್ಯಕ್ತಿತ್ವ ಅವರದಾಗಿತ್ತು.

ಜಾರ್ಜ್‌ ಅವರು ಕರಾವಳಿಯ ಈ ಭಾಗದಲ್ಲಿ ಜನಪ್ರಿಯರಾಗಲು ಇಂದಿರಾಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯೂ ಒಂದು ಕಾರಣವಾಗಿತ್ತು. 1977ರಲ್ಲಿ ಚುನಾವಣೆ ಘೋಷಣೆಯಾದಾಗ ಜಾರ್ಜ್‌ ಬಿಹಾರದ ಜೈಲಿನಲ್ಲಿ ಇದ್ದುಕೊಂಡೇ ಚುನಾವಣೆಗೆ ಸ್ಪರ್ಧಿಸಿ ಜನತಾ ಪಕ್ಷದಿಂದ ಗೆದ್ದರು. ಬಂಧ ಮುಕ್ತರಾದ ಜಾರ್ಜ್‌ ಬಳಿಕ ಮೊರಾರ್ಜಿ ದೇಸಾಯಿ ಸಂಪುಟದಲ್ಲಿ ಸಚಿವರಾದರು. ರೈಲ್ವೆ, ರಕ್ಷಣಾ ಮುಂತಾದ ಮಹತ್ವದ ಖಾತೆಗಳನ್ನು ನಿರ್ವಹಿಸಿ ಪ್ರಸಿದ್ಧಿ ಪಡೆದರು.

ಸ್ವಾತಂತ್ರ ಹೋರಾಟಗಾರರೂ ಆಗಿದ್ದ ಅವರು ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದಾಗ ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ ದ್ದರು. 9-9-1942ರಂದು ಬ್ರಿಟಿಷರ ವಿರುದ್ಧ ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಮಾಜವಾದಿ ಚಿಂತನೆಯನ್ನೇ ಉಸಿರಾಗಿಸಿಕೊಂಡಿದ್ದ ಅವರು, ಜನಸಾಮಾನ್ಯರ, ವಿಶೇಷವಾಗಿ ಕಾರ್ಮಿಕರ ಸಂಘಟನೆಗೆ ತಮ್ಮ ಬದುಕನ್ನೇ ಸಮರ್ಪಿಸಿಕೊಂಡವರು.

ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀಗೆ ಗುರುತಿಸಿರುವುದು ನನಗೆ ಮತ್ತಷ್ಟು ಸ್ಫೂರ್ತಿ ಸಿಕ್ಕಂತಾಗಿದೆ. ನನ್ನ ಯಶಸ್ಸಿಗೆ ನಿಮ್ಹಾನ್‌ ಸಂಸ್ಥೆಯೇ ಕಾರಣವಾಗಿದ್ದು, ಉತ್ತಮ ಕಾರ್ಯಗಳಿಗೆ ಇಲ್ಲಿನ ವೈದ್ಯರು, ಸಿಬ್ಬಂದಿ ಎಲ್ಲರೂ ಸಹಕಾರ ನೀಡಿದ್ದಾರೆ. ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು.
-ಡಾ.ಬಿ.ಎನ್‌.ಗಂಗಾಧರ್‌, ಮ್ಹಾನ್ಸ್‌ ನಿರ್ದೇಶಕರು

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.