ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆ
Team Udayavani, May 4, 2019, 3:00 AM IST
ಬೆಂಗಳೂರು: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.
2019-20ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(6 ರಿಂದ 8ನೇ ತರಗತಿ) ನೇಮಕಾತಿಗೆ ಮೇ 18 ಮತ್ತು 19ರಂದು ಹೈದರಾಬಾದ್ ಕರ್ನಾಟಕದ ಶೇ.80 ಸ್ಥಳೀಯ ವೃಂದಗಳಿಗೆ ಮತ್ತು ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ಹೈದರಾಬಾದ್ ಕರ್ನಾಟಕದ ರಾಜ್ಯಮಟ್ಟದ ಸ್ಥಳೀಯ ವೃಂದದ ಶೇ.8 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ-1ನ್ನು ನಿಗದಿಪಡಿಸಲಾಗಿತ್ತು.
ಮೇ 19ರಂದು ಚುನಾವಣೆ ನಡೆಯುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜೂನ್1 ಮತ್ತು 2ಕ್ಕೆ ಮುಂದೂಡಲಾಗಿದೆ. ಈಗಾಗಲೇ ನಿಗದಿಪಡಿಸಿರುವ ಹೈ-ಕ ಶೇ.20 ಮಿಕ್ಕುಳಿದ ಹುದ್ದೆಗಳಿಗೆ ಮತ್ತು ಬಿಬಿಎಂಪಿ ವ್ಯಾಪ್ತಿಯ ಹೈ-ಕ ರಾಜ್ಯಮಟ್ಟದ ಸ್ಥಳೀಯ ವೃಂದದ ಶೇ.92 ಹುದ್ದೆಗಳಿಗೆ ಮತ್ತು ಇತರೆ ಜಿಲ್ಲೆಗಳ ಶೇ.100 ಹುದ್ದೆಗಳಿಗೆ ಮೇ 25 ಮತ್ತು 26ರಂದೇ ಸ್ಪರ್ಧಾತ್ಮಕ ಪರೀಕ್ಷೆ-2 ನಡೆಯಲಿದೆ ಎಂದು ಕೇಂದ್ರೀಕೃತ ದಾಖಲಾತಿ ಘಟಕ(ಸಿಎಸಿ)ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ