ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಿಕೆ: ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಿಸಲು ತೀರ್ಮಾನ
Team Udayavani, May 5, 2020, 4:45 PM IST
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಗಳ ಸಾರ್ವತ್ರಿಕ ಚುನಾವಣೆಯು ಮೇ ತಿಂಗಳಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ ಕೋವಿಡ್-19 ಮಹಾಮಾರಿಯ ತುರ್ತು ಪರಿಸ್ಥಿತಿಯ ಕಾರಣ ಚುನಾವಣೆ ಮುಂದಕ್ಕೆ ಹಾಕಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಕೆ.ಎಸ್. ಈಶ್ವರಪ್ಪರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಆ ಮಧ್ಯಂತರ ಅವಧಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಿಸುವ ಕುರಿತು ತೀರ್ಮಾನಿಸಲಾಗಿದೆ.
ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಶ್ರೀ ಲಕ್ಷ್ಮಣ ಸವದಿ, ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.