ಸುದೀಪ್ ದಂಪತಿ ವಿಚ್ಚೇದನ ಅರ್ಜಿ ವಿಚಾರಣೆ ಜೂನ್ 14ಕ್ಕೆ ಮುಂದೂಡಿಕೆ
Team Udayavani, Mar 10, 2017, 11:31 AM IST
ಬೆಂಗಳೂರು: ಚಿತ್ರನಟ ಸುದೀಪ್ ದಂಪತಿಯ ವಿವಾಹ ವಿಚ್ಚೇದನ ಪ್ರಕರಣ ಅಂತಿಮ ಹಂತ ತಲುಪಿದೆ. ಈ ಸಂಬಂಧ ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಕೌಟುಂಬಿಕ ನ್ಯಾಯಾಲಯ, ಜೂನ್ 14ಕ್ಕೆ ವಿಚಾರಣೆಯನ್ನು ಮುಂದೂಡಿತು. ಮುಂದಿನ ವಿಚಾರಣೆ ವೇಳೆ ಸುದೀಪ್ ಹಾಗೂ ಅವರ ಪತ್ನಿ ಪ್ರಿಯಾ ಕಡ್ಡಾಯವಾಗಿ ಹಾಜರಿರಬೇಕು ಎಂದು
ನ್ಯಾಯಾಲಯ ಖಡಕ್ ಸೂಚನೆ ನೀಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ, ನ್ಯಾಯಾಲಯವೇ ತನಗಿರುವ ಸಂವಿಧಾನಬದ್ಧ ಅಧಿಕಾರ ಚಲಾಯಿಸಿ, ತೀರ್ಮಾನ ಕೈಗೊಳ್ಳಲಿದೆ ಎಂದು ಇಬ್ಬರ ಪರ ವಕೀಲರಿಗೂ ಸೂಚಿಸಿತು.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಟ ಸುದೀಪ್ ದಂಪತಿ, ಪರಸ್ಪರ ವಿಚ್ಚೇದನ ಕೋರಿ 2015ರ ಸೆಪ್ಟೆಂಬರ್ ತಿಂಗಳಿನಲ್ಲಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ನಡೆದ ಒಂದೂ ವಿಚಾರಣೆಗೆ ದಂಪತಿ ಹಾಜರಾಗದೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗಳನ್ನು ಮುಂದೂಡುತ್ತಲೇ ಬಂದಿದ್ದ ನ್ಯಾಯಾಲಯ, ಇದೀಗ
ಜೂನ್ 14 ರಂದು ತೀರ್ಪು ನೀಡಲಿದೆ. ಮತ್ತೂಂದೆಡೆ ಸುದೀಪ್ ಹಾಗೂ ಪ್ರಿಯಾ ಈಗಾಗಲೇ ಹಿರಿಯರ ಸಮ್ಮುಖದಲ್ಲಿ ಪರಸ್ಪರ ಒಂದಾಗಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್