“ಎಲ್ಲರಿಗೂ’ ಅಧಿಕಾರ: ಗೌಡರ ತಂತ್ರ
Team Udayavani, Jul 3, 2019, 3:05 AM IST
ಬೆಂಗಳೂರು: ಬಿಜೆಪಿಯು ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮುಂದಾಗಿದ್ದಾರೆ.
ಮಂಗಳವಾರ ಪದ್ಮನಾಭನಗರ ನಿವಾಸದಲ್ಲಿ ಇಡೀ ದಿನ ಎಲ್ಲ ಶಾಸಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಯಾರೂ ಪಕ್ಷ ಬಿಟ್ಟು ಹೋಗದಂತೆ ತಿಳಿಸಿದರು. ನಾಲ್ಕು ವರ್ಷ ನಮ್ಮ ಸರ್ಕಾರ ಇರಲಿದ್ದು ಎಲ್ಲರಿಗೂ ಅಧಿಕಾರ ಸಿಗಲಿದೆ. ಯಾವುದೇ ಆಮಿಷಗಳಿಗೆ ಮಣಿಯಬೇಡಿ ಎಂದು ಹೇಳಿದರು.
ಸರ್ಕಾರಕ್ಕೆ ಎರಡು ಅಥವಾ ಎರಡೂವರೆ ವರ್ಷ ತುಂಬಿದ ನಂತರ ಈಗ ಸಂಪುಟದಲ್ಲಿ ಜೆಡಿಎಸ್ ಕೋಟಾದಡಿ ಸಚಿವರಾಗಿರುವವರನ್ನು ಪಕ್ಷ ಸಂಘಟನೆಗೆ ನಿಯೋಜಿಸಿ ಉಳಿದವರಿಗೆ ಸಚಿವ ಸ್ಥಾನ ನೀಡಲಾಗುವುದು. ಜೆಡಿಎಸ್ನಲ್ಲಿ ಶಾಸಕರ ಸಂಖ್ಯೆ ಕಡಿಮೆ ಇರುವುದರಿಂದ ಎಲ್ಲರಿಗೂ ಅಧಿಕಾರ ಸಿಗಲಿದೆ. ಅಲ್ಲಿಯವರೆಗೆ ಸಮಾಧಾನದಿಂದ ಇರಿ ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.
ಸಿದ್ದು ಜತೆ ಎಚ್ಡಿಕೆ ಚರ್ಚೆ: ಈ ಮಧ್ಯೆ, ಅಮೆರಿಕದಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಸಹ ಜೆಡಿಎಸ್ ಶಾಸಕರ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಅವರು ಬಿಜೆಪಿ ಸೇರಲಿದ್ದಾರೆಂಬ ವದಂತಿ ಹಿನ್ನೆಲೆಯಲ್ಲಿ ಅವರನ್ನೂ ಸಂಪರ್ಕಿಸಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.
ಮಂಗಳವಾರವೂ ಕುಮಾರಸ್ವಾಮಿಯವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಆ ವೇಳೆ, ಏನೂ ಸಮಸ್ಯೆಯಾಗದು. ನಾವೆಲ್ಲಾ ಶಾಸಕರ ಜತೆ ಸಂಪರ್ಕದಲ್ಲಿದ್ದೇವೆ. ನೀವು ಪ್ರವಾಸ ಮುಗಿಸಿ ಬನ್ನಿ ಎಂದು ಹೇಳಿದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ