ದೀಪಾವಳಿ ದಿನ ದೇವಸ್ಥಾನಗಳಲ್ಲಿ ಗೋಪೂಜೆ : ಜೊಲ್ಲೆಗೆ ಪ್ರಭು ಚೌವ್ಹಾಣ್ ಅಭಿನಂದನೆ
Team Udayavani, Oct 27, 2021, 9:00 PM IST
ಬೆಂಗಳೂರು: ದೀಪಾವಳಿ ಬಲಿಪಾಡ್ಯಮಿ ದಿನ ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಿರುವುದಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಗೋವುಗಳ ಹಿತದೃಷ್ಠಿಯಿಂದ ಉತ್ತಮ ನಿರ್ಧಾರ ಕೈಗೊಂಡ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಹಿಂದೂ ಧರ್ಮದಲ್ಲಿ ಗೋವು(ಹಸು)ಗಳಿಗೆ ತಾಯಿಯ ಸ್ಥಾನವನ್ನು ನೀಡಿದ್ದು, ಗೋಮಾತೆ, ದೇವತೆ ಎಂದು ಭಾವಿಸಿ ಪೂಜಿಸಲಾಗುತ್ತದೆ. ಪುರಾಣ, ಉಪನಿಷತ್ತುಗಳಲ್ಲಿ ಗೋವುಗಳಿಗೆ ವಿಶೇಷ ಸ್ಥಾನವಿದೆ. ಹಿಂದೂ ಧರ್ಮಗ್ರಂಥಗಳಲ್ಲಿ ಗೋವಿಗೆ ಮಾತೆಯ ಸ್ಥಾನ ನೀಡಲಾಗಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆ ವಾಸ್ತುದೋಷಕ್ಕೂ ಪರಿಹಾರ ದೊರೆಯುವುದೆಂಬ ನಂಬಿಕೆ ನಮ್ಮ ಸಮಾಜದಲ್ಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಆಟೋರಿಕ್ಷಾ ಚಾಲಕನೊಂದಿಗೆ ಪರಾರಿಯಾದ ಕೋಟ್ಯಧಿಪತಿಯ ಪತ್ನಿ!
ಇಂದಿನ ದಿನಗಳಲ್ಲಿ ಪಟ್ಟಣ, ಮಹಾನಗರಗಳಲ್ಲಿ ವಾಸಿಸುವ ಜನರು ಗೋಪೂಜೆಯನ್ನು ಮರೆತು ಬಿಡುತ್ತಿದ್ದಾರೆ. ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವರೆಂದು ತಿಳಿದು ಪೂಜಿಸುವ ಸಂಪ್ರದಾಯ ಬಿಡಬಾರದೆಂಬ ಉದ್ದೇಶದಿಂದ ಹೊರಡಿಸಿರುವ ಈ ಆದೇಶದಿಂದ ಮುಂದಿನ ಪೀಳಿಗೆಗೆ ಗೋವುಗಳ ಪೂಜೆಯನ್ನು ಪರಿಚಯಿಸಿ ಸಂಪ್ರದಾಯವನ್ನು ಮುಂದುವರೆಸುವುದು, ಗೋವುಗಳ ಮಹತ್ವ ಹಾಗೂ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ. ಗೋವುಗಳ ಹಿತದೃಷ್ಟಿಯಿಂದ ಉತ್ತಮ ನಿರ್ಧಾರ ಕೈಗೊಂಡ ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ದೀಪಾವಳಿ ಬಲಿಪಾಡ್ಯಮಿ ದಿನದಂದು ನಾನೂ ಕೂಡ ಗೋಪೂಜೆ ನಡೆಸಲಿದ್ದು, ಆದೇಶದಂತೆ ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ತಿನ್ನಿಸಿ ಧೂಪ, ದೀಪಗಳಿಂದ ಗೋಪೂಜೆ ನೆರವೇರಿಸಬೇಕೆಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು