ನಿಯೋಜನೆಗೆ ಒತ್ತಡ ಹೇರಿದವರ ವಿರುದ್ಧ ಶಿಸ್ತುಕ್ರಮ: ಪ್ರಭು ಚವ್ಹಾಣ್ ಎಚ್ಚರಿಕೆ
Team Udayavani, Apr 20, 2022, 9:15 PM IST
ಬೆಂಗಳೂರು: ಪಶು ಸಂಗೋಪನೆ ಇಲಾಖೆಯಿಂದ ಇನ್ನು ಮುಂದೆ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳುವವರ ವಿರುದ್ಧ ಶಿಸ್ತು ಕ್ರಮ ಜರಗಿಸಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ ನೀಡಿದ್ದಾರೆ.
ಪಶು ಸಂಗೋಪನೆ ಇಲಾಖೆಯಿಂದ ಅನ್ಯ ಇಲಾಖೆಗಳಿಗೆ ವೈದ್ಯರು ಮತ್ತು ಸಿಬಂದಿ ನಿಯೋಜನೆ ಮೇರೆಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಯಾರೇ ರಾಜಕೀಯವಾಗಿ ಒತ್ತಡ ತಂದರೆ ಅವರನ್ನು ಅಮಾನತು ಪಡಿಸಲಾಗುವುದು ಎಂದರು.
ರೈತರ, ಪಶುಪಾಲಕರ ಅಭಿವೃದ್ಧಿಗಾಗಿ ಇಲಾಖೆಯಿಂದ ಪ್ರಾಣಿ ಕಲ್ಯಾಣ ಮಂಡಳಿ, ಪಶು ಸಂಜೀವಿನಿ, ಗೋಹತ್ಯೆ ನಿಷೇಧ ಕಾಯ್ದೆ, ಗೋಶಾಲೆ, ಪ್ರಾಣಿ ಸಹಾಯವಾಣಿ ಕೇಂದ್ರ ಸ್ಥಾಪನೆಯಂತಹ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಿಬಂದಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ನಿಯೋಜನೆ ರದ್ದು
ಜಾನುವಾರು ಲಸಿಕಾ ಕಾರ್ಯಕ್ರಮಗಳ ಪ್ರಗತಿ ಕುಂಠಿತವಾಗಬಾರದೆಂದು ಅನ್ಯ ಕರ್ತವ್ಯದ ಮೇಲೆ ಬೇರೆ ಇಲಾಖೆಗೆ ತೆರಳುವುದನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಹೀಗಿದ್ದರೂ ಕೆಲವರು ರಾಜಕೀಯವಾಗಿ ಒತ್ತಡ ಹೇರುತ್ತಿರುವುದು ಹಾಗೂ ಅಧಿಕಾರಿಗಳ ಹಂತದಲ್ಲೇ ನಿಯೋಜನೆ ಮೇಲೆ ತೆರಳುವುದಾಗಿ ತಿಳಿದುಬಂದಿದೆ. ಈ ನಿಯೋಜನೆಯನ್ನು ರದ್ದುಪಡಿಸಲಾಗಿದೆ. ಅಧಿಕಾರಿ, ಸಿಬಂದಿ ಎಲ್ಲಿ ಮತ್ತು ಯಾವ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೋ ಅಲ್ಲೇ ಕರ್ತವ್ಯದಲ್ಲಿರಬೇಕು ಎಂದು ಸಚಿವರು ಹೇಳಿದರು.
ಅನ್ಯ ಇಲಾಖೆಯವರು ಇಲ್ಲಿ ಕಾರ್ಯನಿರ್ವಹಿಸಲು ಅಸಾಧ್ಯ
ಪಶು ಸಂಗೋಪನೆ ಇಲಾಖೆಯಲ್ಲಿ ಸಿಬಂದಿ ಕೊರತೆ ಇರುವುದರಿಂದ ಯಾವುದೇ ಕಾರಣಕ್ಕೂ ಇಲಾಖೆಯಿಂದ ಅನ್ಯ ಕರ್ತವ್ಯದ ಮೇಲೆ ನಿಯೋಜನೆ ಸಿಬಂದಿ ನೀಡುವಂತೆ ಶಾಸಕರು ಮನವಿ ಸಲ್ಲಿಸಬಾರದು. ಇಲಾಖೆಯಿಂದ ಬೇರೆ ಇಲಾಖೆಗೆ ತೆರಳಿ ಪಶುವೈದ್ಯರು ಕಾರ್ಯನಿರ್ವಹಿಸಬಹುದು. ಆದರೆ ಬೇರೆ ಇಲಾಖೆಯಿಂದ ಬಂದು ಅಧಿಕಾರಿಗಳು ಪ್ರಾಣಿಗಳಿಗೆ ಚಿಕಿತ್ಸೆ ನೀಡುವಂತಹ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ. ಹಾಗಾಗಿ ಕಠಿನವಾದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಪ್ರಭು ಚವ್ಹಾಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ