Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
ಮಾಧ್ಯಮಗಳಲ್ಲಿ ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ ಹೆಸರು ಬಳಕೆ... ಸಾಕ್ಷ್ಯಗಳಿದ್ದರೆ ಮಾತ್ರ ಸುದ್ದಿ ಪ್ರಸಾರ ಮಾಡಬಹುದು ಎಂದ ಕೋರ್ಟ್
Team Udayavani, May 6, 2024, 5:07 PM IST
ಬೆಂಗಳೂರು: ಜೆಡಿಎಸ್ ನಿಂದ ಅಮಾನತಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಧ್ಯಮಗಳು ತಮ್ಮ ಹೆಸರು ಬಳಸಿಕೊಳ್ಳದಂತೆ ಜೆಡಿಎಸ್ ಉನ್ನತ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋರ್ಟ್ ನಿಂದ ಸೋಮವಾರ ತಡೆ ತಂದಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳೂ ಕೂಡ ಭಾರತದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸ್ಕ್ಯಾಂಡಲ್ ನಲ್ಲಿ ಭಾಗಿಯಾಗಿದ್ದು ವಿಡಿಯೋ ವೈರಲ್ ಆಗಿದೆ ಎಂದು ವರದಿ ಮಾಡಿದ್ದವು. ರಾಷ್ಟ್ರೀಯ ಮಾಧ್ಯಮಗಳೂ ದೇವೇಗೌಡರ ಹೆಸರನ್ನು, ಕುಮಾರಸ್ವಾಮಿ ಅವರ ಹೆಸರನ್ನು ಬಳಸಿಕೊಂಡಿದ್ದವು.
ಪ್ರಜ್ವಲ್ ಕೇಸ್ ನಲ್ಲಿ ಮಾಧ್ಯಮಗಳು ತಮ್ಮ ಹೆಸರು ಬಳಸದಂತೆ ತಡೆ ನೀಡುವಂತೆ ಕೋರಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ನಗರದ 34 ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಸುದ್ಧಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಙೆಗೆ ಮನವಿ ಮಾಡಿದ್ದರು.
ಸಾಕ್ಷ್ಯಗಳಿಲ್ಲದೇ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸುದ್ದಿ ಪ್ರಸರಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬಾರದು. ಸತ್ಯಾಂಶವಿದ್ದು, ಸಾಕ್ಷ್ಯಗಳಿದ್ದರೆ ಮಾತ್ರ ಸುದ್ದಿ ಪ್ರಸಾರ ಮಾಡಬಹುದು ಎಂದು ಕೋರ್ಟ್ ಹೇಳಿದೆ.
ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದಂತೆ ಎಚ್.ಡಿ.ರೇವಣ್ಣ ವಿರುದ್ಧ ಮಹಿಳೆಯೊಬ್ಬರನ್ನು ಅಪಹರಣ ಮಾಡಿರುವ ಪ್ರಕರಣ ದಾಖಲಾಗಿತ್ತು. ಎಸ್ ಐಟಿ ರೇವಣ್ಣ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ವಿದೇಶದಲ್ಲಿರುವ ಪ್ರಜ್ವಲ್ ಅವರಿನ್ನೂ ಸ್ವದೇಶಕ್ಕೆ ಮರಳಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ
Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು
Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ
ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು
ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್
Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ
Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!
Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ