Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Team Udayavani, May 2, 2024, 11:28 PM IST
ಕಲಬುರಗಿ: ಸಂಸದ ಪ್ರಜ್ವಲ್ ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಲು ತಮ್ಮ ವಕೀಲರ ಮೂಲಕ ಆರು ದಿನಗಳ ಕಾಲಾವಕಾಶ ಕೋರಿದ್ದಾರೆ. ಆದರೆ ಈ ಪ್ರಕರಣದಡಿ ಸೆಕ್ಷನ್ 41ಎ ಪ್ರಕಾರ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ ಪ್ರಜ್ವಲ್ ಅವರನ್ನು ಶೀಘ್ರವೇ ಬಂಧಿಸುವ ಸಾಧ್ಯತೆಗಳಿವೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಆರೋಪಿತ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿಚಾರಣೆಗೆ ಹಾಜರಾಗಲು ಒಪ್ಪಿಕೊಂಡಿದ್ದಾರೆ. ಒಂದು ವೇಳೆ ಅವರು ಹಾಜರಾಗದಿ ದ್ದರೆ ಅವರನ್ನು ಕೂಡ ಬಂಧಿ ಸಲಾಗುವುದು. ಪ್ರಜ್ವಲ್ಗೆ ಕೇಂದ್ರ ಸರಕಾರವೇ ಡಿಪ್ಲೊ ಮ್ಯಾಟಿಕ್ ಪಾಸ್ ಪೋರ್ಟ್ ನೀಡಿದೆ. ಹೀಗಾಗಿ ಅವರು ಸಲೀಸಾಗಿ ದೇಶ ಬಿಟ್ಟು ಹೋಗಿದ್ದಾರೆ. ಅಲ್ಲದೆ 40 ರಾಷ್ಟ್ರಗಳಲ್ಲಿ ಯಾವುದೇ ಅಡತಡೆ ಇಲ್ಲದೆ ಅವರು ಓಡಾಡಬಹುದು. ಹೀಗಾಗಿ ಅವರನ್ನು ಹಿಡಿದು ತರಲು ತಾಂತ್ರಿಕ ತೊಂದರೆ ಎದುರಾಗ ಬಹುದು. ಆದ್ದರಿಂದ ಸಿಎಂ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ರದ್ದುಪಡಿಸುವಂತೆ ಪ್ರಧಾನಿಗೆ ಪತ್ರ ಬರೆದಿದ್ದಾರೆ ಎಂದರು.
ಇನ್ನೊಬ್ಬ ಮಹಿಳೆಯಿಂದ ದೂರು:
ಒಬ್ಬ ಮಹಿಳೆ ದೂರು ನೀಡಿದ್ದರಿಂದ ಇವತ್ತು ತನಿಖೆ ಈ ಹಂತಕ್ಕೆ ತಲುಪಿದೆ. ಈಗ ಇನ್ನೊಬ್ಬ ಮಹಿಳೆಯೂ ದೂರು ನೀಡಿದ್ದಾರೆ. ದೂರುದಾರರಿಬ್ಬರ ಕುಟುಂಬದ ರಕ್ಷಣೆ ಸರಕಾರದ ಹೊಣೆ. ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು. ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
MUST WATCH
ಹೊಸ ಸೇರ್ಪಡೆ
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್
ಪ್ರಭಾಸ್ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್ʼ ನಟ?
Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್
Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?
ಯಾರಿಗೆ ಹೇಳೋಣ ನಮ್ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್ಗಳು ತಾತ್ಕಾಲಿಕ ಸ್ಥಗಿತ