ತಾಜ್ ಮಹಲ್ ಅಲ್ಲ, ಈಶ್ವರನ ತೇಜೋ ಮಹಾಲಯ: ಮುತಾಲಿಕ್
Team Udayavani, May 12, 2022, 10:00 PM IST
ಬಾಗಲಕೋಟೆ: ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್ ಮಹಲ್ ಅದು ನಿಜವಾಗಿ ಈಶ್ವರನ ತೇಜೋ ಮಹಾಲಯ. ಈ ಕುರಿತು ತನಿಖೆಯಾಗಬೇಕು. ಕಳೆದ 25 ವರ್ಷಗಳ ಹಿಂದೆ ಪಿ.ಎನ್. ವೋಕ್ ಎಂಬುವವರು ಈ ಎಲ್ಲ ದಾಖಲೆ ಸಮೇತ ಪುರಾವೆ ಒದಗಿಸಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.
ಬಾದಾಮಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿ.ಎನ್.ವೋಕ್ ಅವರು ತಾಜ್ ಮಹಲ್ ಅಲ್ಲ, ಅದು ತೇಜೋ ಮಹಾಲಯ ಎಂಬುದನ್ನು ಆಗಲೇ ತಿಳಿಸಿದ್ದರು. ತೇಜೋ ಮಹಾಲಯದ ಹೆಸರು ತೆಗೆದು ತಾಜ್ ಮಹಲ್ ಎಂದು ಬದಲಿಸಲಾಗಿದೆ. ಶಹಜಾನ್ ಪತ್ನಿಯ ಸಮಾಧಿ ಬೇರೆ ಕಡೆ ಇದೆ. ಒಂದು ಕಡೆ ಕಟ್ಟು ಕಥೆಗಳನ್ನು ಸೃಷ್ಟಿಸಿ ವಿಷ್ಣು ಸ್ತಂಭವನ್ನು ಕುತುಬ್ ಮಿನಾರ್ ಎಂದು ಹೇಳುತ್ತಾರೆ. ಸರ್ಕಾರ ತಾಜ್ ಮಹಲ್ ಅಲ್ಲ, ಅದು ತೇಜೋ ಮಹಾಲಯ ಎಂದು ಜಗತ್ತಿಗೆ ತಿಳಿಸಿಕೊಡಲು ತನಿಖೆ ಮಾಡಬೇಕು ಎಂದರು.
ರಾಜ್ಯದಲ್ಲಿ ಮತಾಂತರ ಕಾಯ್ದೆ ಕಡ್ಡಾಯವಾಗಿ ಜಾರಿಗೆ ಬರಬೇಕು. ಬಿಜೆಪಿ ಸರ್ಕಾರಕ್ಕೆ ಹಿಂದೂ ಪರ ಸಂಘಟನೆಗಳು ಬೇಕಾದರೆ ಅವರ ಬೇಡಿಕೆ ಈಡೇರಿಸಬೇಕು. ರಾಜ್ಯದೆಲ್ಲೆಡೆ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಚರ್ಚಗಳನ್ನು ಜೆಸಿಬಿ ಮೂಲಕ ತೆಗೆದು ಹಾಕಬೇಕು. ಅದನ್ನು ಸುಗ್ರೀವಾಜ್ಞೆ ಮೂಲಕ ಸರ್ಕಾರ ಮಾಡಬೇಕು. ಅದಕ್ಕೆ ಹಿಂದೂಪರ ಸಂಘಟನೆಗಳು ಸಂಪೂರ್ಣವಾಗಿ ಬೆಂಬಲಿಸುತ್ತವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ