ದೇಶ ಕಂಡ ಕೆಲವೇ ಬುದ್ದಿಜೀವಿಗಳಲ್ಲಿ ಪ್ರಣಬ್ ಕೂಡ ಒಬ್ಬರು: ಸಿದ್ದರಾಮಯ್ಯ
Team Udayavani, Sep 1, 2020, 3:00 PM IST
ಬೆಂಗಳೂರು: ಪ್ರಣಬ್ ಮುಖರ್ಜಿ ಸುಧೀರ್ಘ ರಾಜಕೀಯ ಜೀವನ ನಡೆಸಿದವರು. ದೇಶ ಕಂಡ ಕೆಲವೇ ಬುದ್ದಿಜೀವಿಗಳಲ್ಲಿ ಅವರು ಕೂಡ ಒಬ್ಬರು. ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಆಗಿದ್ದವರು. ಸಮಸ್ಯೆ ಎದುರಾದಾಗ ಅವರು ಜವಾಬ್ದಾರಿ ಹೊತ್ತುಕೊಂಡು ತಮ್ಮ ಬುದ್ಧಿವಂತಿಕೆಯಿಂದ ನಿವಾರಿಸುತ್ತಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸೇರಿದ ಮೇಲೆ ಪ್ರಣಬ್ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ಕೆಲವು ಸೂಚನೆಗಳನ್ನು ಕೊಟ್ಟಿದ್ದರು. ನಂತರ ಸಿಎಂ ಆದ ಮೇಲೆ ಅವರನ್ನು ನಿರಂತರ ಭೇಟಿ ಮಾಡುತ್ತಿದ್ದೆ. ಇದೇ ಕೆಪಿಸಿಸಿ ಕಚೇರಿಗೆ ಶಾಸಕರ ಮತ ಕೇಳಲು ಬಂದಿದ್ದರು ಎಂದು ನೆನಪಿಸಿಕೊಂಡರು.
ಅವರು ರಾಜ್ಯಕ್ಕೆ ನಾಲ್ಕೈದು ಬಾರಿ ಬಂದಿದ್ದರು. ಕೆಲವೊಂದು ಯೋಜನೆಗೂ ಸಹಿ ಹಾಕಿಕೊಟ್ಟಿದ್ದರು. ಪ್ರಗತಿಪರ ವಿಚಾರ ಹೇಳಿದಾಗ ಪರವಾಗಿ ನಿಲ್ಲುತ್ತಿದ್ದರು. ಅವರಿಗೆ ಹಲವು ಪ್ರಶಸ್ತಿಗಳು ಹರಿದು ಬಂದಿದ್ದವು. ಜಗತ್ತಿನ ಐವರು ಹಣಕಾಸು ಸಚಿವರಲ್ಲಿ ಇವರು ಒಬ್ಬರು. ರಾಜೀವ್ ಪ್ರಧಾನಿಯಾಗಿದ್ದಾಗ ಪಕ್ಷ ತೊರೆದು, ರಾಷ್ಟ್ರೀಯ ಸಮಾಜವಾದಿ ಕಾಂಗ್ರೆಸ್ ಪಾರ್ಟಿ ಕಟ್ಟಿದ್ದರು.
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಪ್ರಣಬ್ ಹಣಕಾಸು ಸಚಿವರಾಗಿದ್ದರು. ಇದೇ ನೋಡಿ ವಿಪರ್ಯಾಸ. ಅವರು ಆರ್ ಎಸ್ ಎಸ್ ಗೆ ಹೋಗಿದ್ದೇ ಯಕ್ಷಪ್ರಶ್ನೆ. ಆರ್ ಎಸ್ ಎಸ್ ಇದೆಯಲ್ಲ ಅದು ಕೋಮುವಾದಿ ಸಂಘಟನೆ. 50 ವರ್ಷ ರಾಜಕಾರಣ ಮಾಡಿದವರು. ಅಲ್ಲಿಗೆ ಹೋಗಿ ಭಾಷಣ ಮಾಡುತ್ತಾರೆ ಅಂದರೆ ಹೇಗೆ ? ಎಂದು ಸಿದ್ದರಾಮಯ್ಯ ಆಶ್ಚರ್ಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ