ಜೆಡಿಎಸ್ಗೆ ಪ್ರಶಾಂತ್ ಕಿಶೋರ್ ಸಲಹೆ?
Team Udayavani, Feb 26, 2020, 3:01 AM IST
ಬೆಂಗಳೂರು: ಪಕ್ಷ ಸಂಘಟನೆಗಾಗಿ ಸಮು ದಾಯವಾರು ಸಮಾವೇಶ, ರಾಜ್ಯ ಪ್ರವಾ ಸಕ್ಕೆ ಮುಂದಾಗಿರುವ ಜೆಡಿಎಸ್ ಚುನಾ ವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಸಲಹೆ ಪಡೆಯಲು ಮುಂದಾ ಗಿದೆ ಎಂದು ಹೇಳಲಾಗಿದೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿಟ್ಟಿನಲಿಲ್ಲ ಈಗಿನಿಂದಲೇ ಕಾರ್ಯತಂತ್ರ ರೂಪಿಸಲು ಪ್ರಶಾಂತ್ ಕಿಶೋರ್ ನೆರವು ಪಡೆಯಲು ಚಿಂತನೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಶಾಂತ್ ಕಿಶೋರ್ ಅವರನ್ನು ಸಂಪರ್ಕಿಸಿದ್ದಾರೆ. ಶೀಘ್ರದಲ್ಲಿಯೇ ದೆಹಲಿಯಲ್ಲಿ ಅಧಿಕೃತ ಭೇಟಿಯೂ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.