ಪ್ರವೀಣ್ ಹತ್ಯೆ ಪ್ರಕರಣ: ಸ್ಥಳೀಯರೇ ಹಂತಕರು: ಸಚಿವ ಆರಗ ಜ್ಞಾನೇಂದ್ರ
Team Udayavani, Aug 6, 2022, 7:23 AM IST
ಬೆಂಗಳೂರು/ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರ ಕೊಲೆಗಾರರು ಕೇರಳದವರಲ್ಲ. ಆದರೆ ಕೇರಳದೊಂದಿಗೆ ನಂಟು ಹೊಂದಿರುವ ಒಂದು ಸಮುದಾಯಕ್ಕೆ ಸೇರಿದ ಸ್ಥಳೀಯ ಯುವಕರೇ ನಡೆಸಿ ರುವ ಕೃತ್ಯವಿದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಹಲಾಲ್ ಕಟ್ ಮತ್ತು ಜಟ್ಕಾ ಕಟ್ ವಿವಾದವೇ ಹತ್ಯೆಗೆ ಮೂಲ ಕಾರಣ. ಜತೆಗೆ ಕೆಲವು ದಿನಗಳ ಹಿಂದೆ ನಡೆದಿದ್ದ ಮಸೂದ್ ಕೊಲೆಗೆ ಪ್ರತೀಕಾರವಾಗಿಯೂ ಈ ಹತ್ಯೆ ಮಾಡಲಾಗಿದೆ ಎಂದು ತನಿಖಾ ಸಂಸ್ಥೆಗಳ ಮಾಹಿತಿಯಿಂದ ಬೆಳಕಿಗೆ ಬಂದಿದೆ.
ಪ್ರಮುಖ ಆರೋಪಿಗಳ ಪೈಕಿ ಓರ್ವ ಸುಳ್ಯದವ ಇನ್ನೋರ್ವ ಬೆಳ್ಳಾರೆ ಮೂಲದವ ಎಂಬ ಮಾಹಿತಿ ಇದೆ. ಹಂತಕರು ತಮ್ಮ ಮೊಬೈಲ್ ಫೋನ್ಗಳನ್ನು ಮನೆಯಲ್ಲೇ ಬಿಟ್ಟು ಮನೆಗೆ ಬೀಗ ಹಾಕಿ ಊರೂರು ಅಲೆಯುತ್ತಿರುವುದು ತಿಳಿದಿದೆ. ಎರಡು ಮೂರು ದಿನಗಳಲ್ಲಿ ಆರೋಪಿಗಳ ಬಂಧನವಾಗಲಿದೆ ಎನ್ನುವ ಸುಳಿವನ್ನು ಸಚಿವರು ನೀಡಿದ್ದಾ ರೆ. ಮತಾಂಧ ಶಕ್ತಿಗಳ ಕೃತ್ಯ ಇದಾಗಿದ್ದು ವಿದೇಶಿ ಶಕ್ತಿಗಳ ಕೈವಾಡದ ಶಂಕೆಯೂ ಇದೆ. ಆರೋಪಿಗಳು ಹೊರ ದೇಶಕ್ಕೆ ತೆರಳುವ ಸಾಧ್ಯತೆ ಇದ್ದು, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚೆರ ವಹಿಸಲಾಗಿದೆ.
ಕೇರಳ ನೋಂದಣಿಯ ಬೈಕನ್ನು ಬಳಸುವ ಮೂಲಕ ಹಂತಕರು ಕೇರಳದವರು ಎನ್ನುವಂತೆ ಬಿಂಬಿಸಿ ಪ್ರಕರಣದ ದಿಕ್ಕು ತಪ್ಪಿಸಲೆತ್ನಿಸಿದ ಸಾಧ್ಯತೆ ಇದೆ. ಕೃತ್ಯದ ಬಳಿಕ ಆರೋಪಿಗಳು ಕೇರಳಕ್ಕೆ ತೆರಳಿರುವುದು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ